<p>ಮಾಗಡಿ: ತಾಲ್ಲೂಕಿನ ಗುದ್ದಲಹಳ್ಳಿಯ ವಡ್ಡರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಸುಮಾರು 30ಕ್ಕೂ ಹೆಚ್ಚು ಜನರು ತೀವ್ರವಾಗಿ ಅಸ್ವಸ್ಥಗೊಂಡು ಪಟ್ಟಣದ ಸರ್ಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.<br /> <br /> `ವಡ್ಡರಹಟ್ಟಿಯಲ್ಲಿ ಶನಿವಾರ ಬೆಳಿಗ್ಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಬಹುತೇಕ ನಿವಾಸಿಗಳು ಅಸ್ವಸ್ಥರಾದರು. ಕೂಡಲೇ ಅವರನ್ನು ಮಾಗಡಿ ಸರ್ಕಾರಿ ಆಸ್ಪತ್ರೆಗೆ ಟೆಂಪೋದಲ್ಲಿ ಕರೆ ತರಲಾಯಿತು~ ಎಂದು ಗ್ರಾಮದ ಸಿದ್ದರಾಜು ತಿಳಿಸಿದರು.<br /> <br /> `ಗರ್ಭಿಣಿ ಮುನಿಯಮ್ಮ ಎಂಬುವವರು ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಯಿತು. ಅಸ್ವಸ್ಥರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ~ ಎಂದು ಡಾ. ವಿಜಯಾ ತಿಳಿಸಿದರು. <br /> <br /> `ತಾಲ್ಲೂಕಿನ ಅಜ್ಜನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುದ್ದಲಹಳ್ಳಿ ವಡ್ಡರಹಟ್ಟಿಯಲ್ಲಿ ರೈತ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಇಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಇರುವುದಿರಂದ ಇವರೆಲ್ಲಾ ಕಲುಷಿತ ನೀರನ್ನೇ ಕುಡಿಯುವಂತಹ ದುಃಸ್ಥಿತಿ ಇದೆ. <br /> <br /> ಆದ್ದರಿಂದ ವಡ್ಡರಹಟ್ಟಿ ಮತ್ತು ಸಿದ್ದೇದೇವರ ಬೆಟ್ಟದ ಇರುಳಿಗರ ಕಾಲೋನಿಗಳಿಗೆ ಕೂಡಲೇ ಮೂಲಭೂತ ಸೌಕರ್ಯ ಕಲ್ಪಿಸಬೇಕು~ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಸಿ.ಆರ್. ನಾಗೇಶ್ ಹಾಗೂ ರಾಜ್ಯ ಪ್ರತಿನಿಧಿ ವನಜಾ ಒತ್ತಾಯಿಸಿದರು. ಸುದ್ದಿ ತಿಳಿದ ತಕ್ಷಣ ಆಸ್ಪತ್ರೆಗೆ ಬಂದ ಅವರು ಸೂಕ್ತ ಚಿಕಿತ್ಸೆ ಕೊಡಿಸಲು ನೆರವಾದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ತಾಲ್ಲೂಕಿನ ಗುದ್ದಲಹಳ್ಳಿಯ ವಡ್ಡರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಸುಮಾರು 30ಕ್ಕೂ ಹೆಚ್ಚು ಜನರು ತೀವ್ರವಾಗಿ ಅಸ್ವಸ್ಥಗೊಂಡು ಪಟ್ಟಣದ ಸರ್ಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.<br /> <br /> `ವಡ್ಡರಹಟ್ಟಿಯಲ್ಲಿ ಶನಿವಾರ ಬೆಳಿಗ್ಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಬಹುತೇಕ ನಿವಾಸಿಗಳು ಅಸ್ವಸ್ಥರಾದರು. ಕೂಡಲೇ ಅವರನ್ನು ಮಾಗಡಿ ಸರ್ಕಾರಿ ಆಸ್ಪತ್ರೆಗೆ ಟೆಂಪೋದಲ್ಲಿ ಕರೆ ತರಲಾಯಿತು~ ಎಂದು ಗ್ರಾಮದ ಸಿದ್ದರಾಜು ತಿಳಿಸಿದರು.<br /> <br /> `ಗರ್ಭಿಣಿ ಮುನಿಯಮ್ಮ ಎಂಬುವವರು ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಯಿತು. ಅಸ್ವಸ್ಥರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ~ ಎಂದು ಡಾ. ವಿಜಯಾ ತಿಳಿಸಿದರು. <br /> <br /> `ತಾಲ್ಲೂಕಿನ ಅಜ್ಜನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುದ್ದಲಹಳ್ಳಿ ವಡ್ಡರಹಟ್ಟಿಯಲ್ಲಿ ರೈತ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಇಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಇರುವುದಿರಂದ ಇವರೆಲ್ಲಾ ಕಲುಷಿತ ನೀರನ್ನೇ ಕುಡಿಯುವಂತಹ ದುಃಸ್ಥಿತಿ ಇದೆ. <br /> <br /> ಆದ್ದರಿಂದ ವಡ್ಡರಹಟ್ಟಿ ಮತ್ತು ಸಿದ್ದೇದೇವರ ಬೆಟ್ಟದ ಇರುಳಿಗರ ಕಾಲೋನಿಗಳಿಗೆ ಕೂಡಲೇ ಮೂಲಭೂತ ಸೌಕರ್ಯ ಕಲ್ಪಿಸಬೇಕು~ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಸಿ.ಆರ್. ನಾಗೇಶ್ ಹಾಗೂ ರಾಜ್ಯ ಪ್ರತಿನಿಧಿ ವನಜಾ ಒತ್ತಾಯಿಸಿದರು. ಸುದ್ದಿ ತಿಳಿದ ತಕ್ಷಣ ಆಸ್ಪತ್ರೆಗೆ ಬಂದ ಅವರು ಸೂಕ್ತ ಚಿಕಿತ್ಸೆ ಕೊಡಿಸಲು ನೆರವಾದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>