<p><br /> ಶಿವಮೊಗ್ಗ: ಪ್ರತಿಯೊಬ್ಬರಲ್ಲೂ ಒಂದೊಂದು ಕಲೆ ಇದೆ. ಅದನ್ನು ಅಭಿವ್ಯಕ್ತಿಗೊಳಿಸಲು ಸೂಕ್ತ ವೇದಿಕೆ, ಸಮಯ, ಪ್ರೋತ್ಸಾಹ ಬೇಕು. ಆ ಕಾರ್ಯವನ್ನು ನಾಟ್ಯಶ್ರೀ ಕಲಾ ತಂಡ ನಿರ್ವಹಿಸಿದೆ ಎಂದು ಬಂಗಾರಮಕ್ಕಿ ಕ್ಷೇತ್ರದ ಧರ್ಮದರ್ಶಿ ಮಾರುತಿ ಸ್ವಾಮೀಜಿ ಹೇಳಿದರು.<br /> <br /> ನಗರದಲ್ಲಿ ನಾಟ್ಯಶ್ರೀ ಕಲಾ ತಂಡ ಭಾನುವಾರ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ ಚರಿತ್ರೆ ಯಕ್ಷ ಬಸವ ಉತ್ಸವ-2012ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಇದೇ ಸಂದರ್ಭದಲ್ಲಿ ವಚನ ಸಾಹಿತ್ಯ ವಾಗ್ಮಿ ಡಾ.ಸಿ. ಸೋಮಶೇಖರ್, ಜಾನಪದ ವಿದ್ವಾಂಸ ಹುಚ್ಚಪ್ಪ ಮಾಸ್ತರ್, ಯಕ್ಷಗಾನ ಕಲಾವಿದ ಕೊಳಗಿ ಕೇಶವ ಹೆಗಡೆ, ನಾಟಕ ಕಲಾವಿದ ಬೆಂಗೇರಿ ಬಸವರಾಜ್ ಅವರಿಗೆ `ನಾಟ್ಯಶ್ರೀ~ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.<br /> <br /> ಸಾಹಿತಿ ಜರಗನಹಳ್ಳಿ ಶಿವಶಂಕರ್, ಗಾಯಕ ಶಿವಮೊಗ್ಗ ವೇಣುಗೋಪಾಲ್, ವೈದ್ಯ ಡಾ.ರಾಮಚಂದ್ರ, ವಿವಿಧ ಕ್ಷೇತ್ರ ಸಾಧಕ ಡಾ.ಕಾವ್ಯಂಶ್ರೀ, ಸಾಮಾಜಿಕ ಕಾರ್ಯಕರ್ತ ಅಬಸೆ ದಿನೇಶ್ ಜೋಷಿ , ಯಕ್ಷಗಾನ ಕಲಾವಿದ ನಾರಾಯಣ್ ಭಟ್ ಅವರಿಗೆ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.<br /> <br /> ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ವೀರಶೈವ ಪಂಚಮಸಾಲಿ ಪೀಠದ ಸಿದ್ದಲಿಂಗ ಸ್ವಾಮೀಜಿ, ಬಸವಕೇಂದ್ರ ಮರುಳಸಿದ್ದ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.<br /> <br /> ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಶ್ರೀಕಾಂತ್, ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಎಂ.ಎಲ್. ಸಾಮಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್. ಹರಿಕುಮಾರ್, ಎಲ್.ಟಿ. ತಿಮ್ಮಪ್ಪ, ರವಿ ಹೆಗಡೆ, ಕೆ.ಎನ್. ಭಟ್ ಮತ್ತಿತರರು ಉಪಸ್ಥಿತರಿದ್ದರು.<br /> <br /> ಯುವರಾಜ್ ಸ್ವಾಗತಿಸಿದರು. ಲೋಕೇಶ್ವರಿ ಚೌಳಕಿ ಪ್ರಾರ್ಥಿಸಿದರು. ದತ್ತಮೂರ್ತಿ ಭಟ್ ಸ್ವಾಗತಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> ಶಿವಮೊಗ್ಗ: ಪ್ರತಿಯೊಬ್ಬರಲ್ಲೂ ಒಂದೊಂದು ಕಲೆ ಇದೆ. ಅದನ್ನು ಅಭಿವ್ಯಕ್ತಿಗೊಳಿಸಲು ಸೂಕ್ತ ವೇದಿಕೆ, ಸಮಯ, ಪ್ರೋತ್ಸಾಹ ಬೇಕು. ಆ ಕಾರ್ಯವನ್ನು ನಾಟ್ಯಶ್ರೀ ಕಲಾ ತಂಡ ನಿರ್ವಹಿಸಿದೆ ಎಂದು ಬಂಗಾರಮಕ್ಕಿ ಕ್ಷೇತ್ರದ ಧರ್ಮದರ್ಶಿ ಮಾರುತಿ ಸ್ವಾಮೀಜಿ ಹೇಳಿದರು.<br /> <br /> ನಗರದಲ್ಲಿ ನಾಟ್ಯಶ್ರೀ ಕಲಾ ತಂಡ ಭಾನುವಾರ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ ಚರಿತ್ರೆ ಯಕ್ಷ ಬಸವ ಉತ್ಸವ-2012ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಇದೇ ಸಂದರ್ಭದಲ್ಲಿ ವಚನ ಸಾಹಿತ್ಯ ವಾಗ್ಮಿ ಡಾ.ಸಿ. ಸೋಮಶೇಖರ್, ಜಾನಪದ ವಿದ್ವಾಂಸ ಹುಚ್ಚಪ್ಪ ಮಾಸ್ತರ್, ಯಕ್ಷಗಾನ ಕಲಾವಿದ ಕೊಳಗಿ ಕೇಶವ ಹೆಗಡೆ, ನಾಟಕ ಕಲಾವಿದ ಬೆಂಗೇರಿ ಬಸವರಾಜ್ ಅವರಿಗೆ `ನಾಟ್ಯಶ್ರೀ~ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.<br /> <br /> ಸಾಹಿತಿ ಜರಗನಹಳ್ಳಿ ಶಿವಶಂಕರ್, ಗಾಯಕ ಶಿವಮೊಗ್ಗ ವೇಣುಗೋಪಾಲ್, ವೈದ್ಯ ಡಾ.ರಾಮಚಂದ್ರ, ವಿವಿಧ ಕ್ಷೇತ್ರ ಸಾಧಕ ಡಾ.ಕಾವ್ಯಂಶ್ರೀ, ಸಾಮಾಜಿಕ ಕಾರ್ಯಕರ್ತ ಅಬಸೆ ದಿನೇಶ್ ಜೋಷಿ , ಯಕ್ಷಗಾನ ಕಲಾವಿದ ನಾರಾಯಣ್ ಭಟ್ ಅವರಿಗೆ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.<br /> <br /> ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ವೀರಶೈವ ಪಂಚಮಸಾಲಿ ಪೀಠದ ಸಿದ್ದಲಿಂಗ ಸ್ವಾಮೀಜಿ, ಬಸವಕೇಂದ್ರ ಮರುಳಸಿದ್ದ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.<br /> <br /> ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಶ್ರೀಕಾಂತ್, ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಎಂ.ಎಲ್. ಸಾಮಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್. ಹರಿಕುಮಾರ್, ಎಲ್.ಟಿ. ತಿಮ್ಮಪ್ಪ, ರವಿ ಹೆಗಡೆ, ಕೆ.ಎನ್. ಭಟ್ ಮತ್ತಿತರರು ಉಪಸ್ಥಿತರಿದ್ದರು.<br /> <br /> ಯುವರಾಜ್ ಸ್ವಾಗತಿಸಿದರು. ಲೋಕೇಶ್ವರಿ ಚೌಳಕಿ ಪ್ರಾರ್ಥಿಸಿದರು. ದತ್ತಮೂರ್ತಿ ಭಟ್ ಸ್ವಾಗತಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>