<p><strong>ನವದೆಹಲಿ (ಪಿಟಿಐ): </strong>ಹಲವು ಆರೋಪಗಳಿಗೆ ಗುರಿಯಾಗಿರುವ ಸುರೇಶ್ ಕಲ್ಮಾಡಿ ವಿರುದ್ಧ ಶುಕ್ರವಾರ ಇಲ್ಲಿ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಯಾವುದೇ ಕ್ರಮ ತೆಗೆದುಕೊಂಡಿಲ್ಲ. <br /> <br /> ಐಒಎನ ಎಲ್ಲಾ ವ್ಯವಹಾರಗಳಿಂದ ದೂರ ಉಳಿಯುವುದಾಗಿ ಹಂಗಾಮಿ ಅಧ್ಯಕ್ಷ ವಿಜಯ್ ಕುಮಾರ್ ಮಲ್ಹೋತ್ರಾ ಅವರಿಗೆ ಕಲ್ಮಾಡಿ ಪತ್ರ ಬರೆದಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ. <br /> <br /> `ಕಲ್ಮಾಡಿ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ~ ಎಂದು ಕೇಳಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಐಒಎಗೆ ಮೂರು ಪತ್ರ ಬರೆದಿತ್ತು. ಅಷ್ಟು ಮಾತ್ರವಲ್ಲದೇ, ಈ ಸಂಬಂಧ ಶೀಘ್ರದಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು. ಕಲ್ಮಾಡಿ ಅಧಿಕೃವಾಗಿ ಐಒಎ ಅಧ್ಯಕ್ಷ ಸ್ಥಾನದಿಂದ ಇನ್ನೂ ಕೆಳಗಿಳಿದಿಲ್ಲ. <br /> <br /> `ಕಲ್ಮಾಡಿ ಐಒಎಗೆ ಬರೆದಿರುವ ಎರಡು ಪತ್ರಗಳ ಬಗ್ಗೆ ಚರ್ಚಿಸಲಾಯಿತು. ಎಲ್ಲಾ ವ್ಯವಹಾರಗಳಿಂದ ದೂರ ಉಳಿಯುವುದಾಗಿ ಅವರು ತಿಳಿಸಿದ್ದಾರೆ. ನಾವು ಐಒಸಿಗೆ ಪ್ರತಿಕ್ರಿಯೆ ನೀಡಿದ್ದೇವೆ~ ಎಂದು ಮಲ್ಹೋತ್ರಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಹಲವು ಆರೋಪಗಳಿಗೆ ಗುರಿಯಾಗಿರುವ ಸುರೇಶ್ ಕಲ್ಮಾಡಿ ವಿರುದ್ಧ ಶುಕ್ರವಾರ ಇಲ್ಲಿ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಯಾವುದೇ ಕ್ರಮ ತೆಗೆದುಕೊಂಡಿಲ್ಲ. <br /> <br /> ಐಒಎನ ಎಲ್ಲಾ ವ್ಯವಹಾರಗಳಿಂದ ದೂರ ಉಳಿಯುವುದಾಗಿ ಹಂಗಾಮಿ ಅಧ್ಯಕ್ಷ ವಿಜಯ್ ಕುಮಾರ್ ಮಲ್ಹೋತ್ರಾ ಅವರಿಗೆ ಕಲ್ಮಾಡಿ ಪತ್ರ ಬರೆದಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ. <br /> <br /> `ಕಲ್ಮಾಡಿ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ~ ಎಂದು ಕೇಳಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಐಒಎಗೆ ಮೂರು ಪತ್ರ ಬರೆದಿತ್ತು. ಅಷ್ಟು ಮಾತ್ರವಲ್ಲದೇ, ಈ ಸಂಬಂಧ ಶೀಘ್ರದಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು. ಕಲ್ಮಾಡಿ ಅಧಿಕೃವಾಗಿ ಐಒಎ ಅಧ್ಯಕ್ಷ ಸ್ಥಾನದಿಂದ ಇನ್ನೂ ಕೆಳಗಿಳಿದಿಲ್ಲ. <br /> <br /> `ಕಲ್ಮಾಡಿ ಐಒಎಗೆ ಬರೆದಿರುವ ಎರಡು ಪತ್ರಗಳ ಬಗ್ಗೆ ಚರ್ಚಿಸಲಾಯಿತು. ಎಲ್ಲಾ ವ್ಯವಹಾರಗಳಿಂದ ದೂರ ಉಳಿಯುವುದಾಗಿ ಅವರು ತಿಳಿಸಿದ್ದಾರೆ. ನಾವು ಐಒಸಿಗೆ ಪ್ರತಿಕ್ರಿಯೆ ನೀಡಿದ್ದೇವೆ~ ಎಂದು ಮಲ್ಹೋತ್ರಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>