<p>ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಸಂಜೆ ಕಾಂಗ್ರೆಸ್ ಸಾಮರಸ್ಯ ಸಮಾವೇಶದ ವೇಳೆ ಉಂಟಾದ ಗುಂಪು ಘರ್ಷಣೆ ಮತ್ತು ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.<br /> <br /> ಇವರನ್ನು ಭಾನುವಾರ ಹಿರಿಯ ಸಿವಿಲ್ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಯಿತು. ಬಂಧಿತರನ್ನು ಕಲ್ಲಡ್ಕ ಸಮೀಪದ ಅಮ್ಟೂರು<br /> ನಿವಾಸಿ ಪೂವಪ್ಪ ಟೈಲರ್, ನೆಟ್ಲ ನಿವಾಸಿಗಳಾದ ಗುರುವಪ್ಪ ಮತ್ತು ಕೇಶವ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ನಗರ ಠಾಣಾಧಿಕಾರಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.<br /> <br /> ಬಂಧಿತರಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.<br /> <br /> ನಗರ ಠಾಣಾಧಿಕಾರಿ ಸಂಜಯ ಕುಮಾರ್ ಕಲ್ಲೂರ ಮಾತ್ರವಲ್ಲದೆ ಗಾಯಾಳು ಪೊಲೀಸ್ ಸಿಬ್ಬಂದಿ ಮುರುಗೇಶ, ಲೋಕೇಶ ಮತ್ತು ರಮೇಶ<br /> ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ.<br /> <br /> ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಆದರೂ, 144 ಸೆಕ್ಷನ್ನಡಿ ಶನಿವಾರ ಜಾರಿಗೊಳಿಸಿದ್ದ ಮೂರು ದಿನಗಳ ನಿಷೇಧಾಜ್ಞೆ ಜಾರಿಯಲ್ಲಿ<br /> ಇರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಸಂಜೆ ಕಾಂಗ್ರೆಸ್ ಸಾಮರಸ್ಯ ಸಮಾವೇಶದ ವೇಳೆ ಉಂಟಾದ ಗುಂಪು ಘರ್ಷಣೆ ಮತ್ತು ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.<br /> <br /> ಇವರನ್ನು ಭಾನುವಾರ ಹಿರಿಯ ಸಿವಿಲ್ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಯಿತು. ಬಂಧಿತರನ್ನು ಕಲ್ಲಡ್ಕ ಸಮೀಪದ ಅಮ್ಟೂರು<br /> ನಿವಾಸಿ ಪೂವಪ್ಪ ಟೈಲರ್, ನೆಟ್ಲ ನಿವಾಸಿಗಳಾದ ಗುರುವಪ್ಪ ಮತ್ತು ಕೇಶವ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ನಗರ ಠಾಣಾಧಿಕಾರಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.<br /> <br /> ಬಂಧಿತರಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.<br /> <br /> ನಗರ ಠಾಣಾಧಿಕಾರಿ ಸಂಜಯ ಕುಮಾರ್ ಕಲ್ಲೂರ ಮಾತ್ರವಲ್ಲದೆ ಗಾಯಾಳು ಪೊಲೀಸ್ ಸಿಬ್ಬಂದಿ ಮುರುಗೇಶ, ಲೋಕೇಶ ಮತ್ತು ರಮೇಶ<br /> ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ.<br /> <br /> ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಆದರೂ, 144 ಸೆಕ್ಷನ್ನಡಿ ಶನಿವಾರ ಜಾರಿಗೊಳಿಸಿದ್ದ ಮೂರು ದಿನಗಳ ನಿಷೇಧಾಜ್ಞೆ ಜಾರಿಯಲ್ಲಿ<br /> ಇರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>