<p><strong>ಬಂಟ್ವಾಳ:</strong> ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಸಂಜೆ ನಡೆದ ಕಾಂಗ್ರೆಸ್ ಸಾಮರಸ್ಯ ಸಮಾವೇಶಕ್ಕೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ ಬಳಿಕ ಗುಂಪು ಘರ್ಷಣೆ ನಡೆದಿದೆ. ಘಟನೆಯಲ್ಲಿ ಸಬ್ ಇನ್್ಸಪೆಕ್ಟರ್ ಸಹಿತ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.<br /> <br /> ಈ ಹಠಾತ್ ಬೆಳವಣಿಗೆಯಿಂದಾಗಿ ಸಮಾವೇಶ ಅರ್ಧದಲ್ಲೇ ಸ್ಥಗಿತಗೊಂಡಿದೆ. ಗುಂಪು ಘರ್ಷಣೆ ವೇಳೆ ಕ್ವಾಲಿಸ್ ವಾಹನ, ಒಂದು ಬೈಕ್, ಹೋಂಡ ಆಕ್ಟಿವಾ ಸಹಿತ ಮೂರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.<br /> <br /> ಸಬ್ ಇನ್ಸ್ಪೆಕ್ಟರ್ ಗಂಭೀರ: ಘರ್ಷಣೆಯ ನಿಯಂತ್ರಿಸಲು ಪ್ರಯತ್ನಿ ಸಿದ ಬಂಟ್ವಾಳ ನಗರ ಠಾಣಾಧಿಕಾರಿ ಸಂಜಯ ಕುಮಾರ್ ಕಲ್ಲೂರ ಅವರ ಹೊಟ್ಟೆಗೆ ಕಲ್ಲು ತಗುಲಿ ಗಂಭೀರ ಗಾಯಗೊಂಡಿದ್ದಾರೆ.<br /> <br /> ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಇನ್ನೊಬ್ಬ ಯುವಕ ಕಲ್ಲೇಟಿನಿಂದ ಗಾಯಗೊಂಡಿದ್ದಾರೆ. ಇದೇ ವೇಳೆ ಸುಮಾರು 10ಕ್ಕೂ ಮಿಕ್ಕಿ ಮಂದಿಗೆ ಕಲ್ಲೇಟು ತಗುಲಿದೆ ಎನ್ನಲಾಗಿದೆ.<br /> <br /> ಸಮಾವೇಶದ ಆರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ಬಗ್ಗೆ ಸ್ಥಳೀಯ ಕೆಲವು ಯುವಕರು ಪೊಲೀಸರಲ್ಲಿ ತೆರಳಿ ಆಕ್ಷೇಪ ವ್ಯಕ್ತಪಡಿಸಿದರು.<br /> <br /> ಕೆಲವು ದುಷ್ಕರ್ಮಿಗಳು ಸಭೆಯತ್ತ ಕಲ್ಲು ತೂರಾಟ ನಡೆಸಿದರು. ಹೆದ್ದಾರಿಯಲ್ಲಿ ಉದ್ರಿಕ್ತ ಯುವಕರ ಎರಡು ಗುಂಪುಗಳು ಪರಸ್ಪರ ಕಲ್ಲು ಹಾಗೂ ಸೋಡಾ ಬಾಟಲಿ ಎಸೆಯಲು ಆರಂಭಿಸಿತು. <br /> <br /> ಇದೇ ವೇಳೆ ಸ್ಥಳದಲ್ಲಿದ್ದ ಬೆರಳೆಣಿಕೆಯ ಪೊಲೀಸರು ಘರ್ಷಣೆ ನಿಯಂತ್ರಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ವೇದಿಕೆಯಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಹಿತ ಪಕ್ಷದ ಮುಖಂಡರು ಶಾಂತಿ ಕಾಪಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡರು.<br /> <br /> ಬಳಿಕ ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕರೆಸಿ ಪರಿಸ್ಥಿತಿ ನಿಯಂತ್ರಿಸಲಾಯಿತು.<br /> <br /> ಕಾಂಗ್ರೆಸ್ ಸಾಮರಸ್ಯ ಸಮಾವೇಶಕ್ಕೆ ನಡೆದ ಕಲ್ಲು ತೂರಾಟ ಪೂರ್ವ ಯೋಜಿತ ಕೃತ್ಯ ಎಂದು ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮತ್ತಿತರರು ಆರೋಪಿಸಿದ್ದಾರೆ.<br /> <br /> ಘರ್ಷಣೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲ್ಲೂಕಿನಾದ್ಯಂತ 3 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಸಂಜೆ ನಡೆದ ಕಾಂಗ್ರೆಸ್ ಸಾಮರಸ್ಯ ಸಮಾವೇಶಕ್ಕೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ ಬಳಿಕ ಗುಂಪು ಘರ್ಷಣೆ ನಡೆದಿದೆ. ಘಟನೆಯಲ್ಲಿ ಸಬ್ ಇನ್್ಸಪೆಕ್ಟರ್ ಸಹಿತ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.<br /> <br /> ಈ ಹಠಾತ್ ಬೆಳವಣಿಗೆಯಿಂದಾಗಿ ಸಮಾವೇಶ ಅರ್ಧದಲ್ಲೇ ಸ್ಥಗಿತಗೊಂಡಿದೆ. ಗುಂಪು ಘರ್ಷಣೆ ವೇಳೆ ಕ್ವಾಲಿಸ್ ವಾಹನ, ಒಂದು ಬೈಕ್, ಹೋಂಡ ಆಕ್ಟಿವಾ ಸಹಿತ ಮೂರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.<br /> <br /> ಸಬ್ ಇನ್ಸ್ಪೆಕ್ಟರ್ ಗಂಭೀರ: ಘರ್ಷಣೆಯ ನಿಯಂತ್ರಿಸಲು ಪ್ರಯತ್ನಿ ಸಿದ ಬಂಟ್ವಾಳ ನಗರ ಠಾಣಾಧಿಕಾರಿ ಸಂಜಯ ಕುಮಾರ್ ಕಲ್ಲೂರ ಅವರ ಹೊಟ್ಟೆಗೆ ಕಲ್ಲು ತಗುಲಿ ಗಂಭೀರ ಗಾಯಗೊಂಡಿದ್ದಾರೆ.<br /> <br /> ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಇನ್ನೊಬ್ಬ ಯುವಕ ಕಲ್ಲೇಟಿನಿಂದ ಗಾಯಗೊಂಡಿದ್ದಾರೆ. ಇದೇ ವೇಳೆ ಸುಮಾರು 10ಕ್ಕೂ ಮಿಕ್ಕಿ ಮಂದಿಗೆ ಕಲ್ಲೇಟು ತಗುಲಿದೆ ಎನ್ನಲಾಗಿದೆ.<br /> <br /> ಸಮಾವೇಶದ ಆರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ಬಗ್ಗೆ ಸ್ಥಳೀಯ ಕೆಲವು ಯುವಕರು ಪೊಲೀಸರಲ್ಲಿ ತೆರಳಿ ಆಕ್ಷೇಪ ವ್ಯಕ್ತಪಡಿಸಿದರು.<br /> <br /> ಕೆಲವು ದುಷ್ಕರ್ಮಿಗಳು ಸಭೆಯತ್ತ ಕಲ್ಲು ತೂರಾಟ ನಡೆಸಿದರು. ಹೆದ್ದಾರಿಯಲ್ಲಿ ಉದ್ರಿಕ್ತ ಯುವಕರ ಎರಡು ಗುಂಪುಗಳು ಪರಸ್ಪರ ಕಲ್ಲು ಹಾಗೂ ಸೋಡಾ ಬಾಟಲಿ ಎಸೆಯಲು ಆರಂಭಿಸಿತು. <br /> <br /> ಇದೇ ವೇಳೆ ಸ್ಥಳದಲ್ಲಿದ್ದ ಬೆರಳೆಣಿಕೆಯ ಪೊಲೀಸರು ಘರ್ಷಣೆ ನಿಯಂತ್ರಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ವೇದಿಕೆಯಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಹಿತ ಪಕ್ಷದ ಮುಖಂಡರು ಶಾಂತಿ ಕಾಪಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡರು.<br /> <br /> ಬಳಿಕ ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕರೆಸಿ ಪರಿಸ್ಥಿತಿ ನಿಯಂತ್ರಿಸಲಾಯಿತು.<br /> <br /> ಕಾಂಗ್ರೆಸ್ ಸಾಮರಸ್ಯ ಸಮಾವೇಶಕ್ಕೆ ನಡೆದ ಕಲ್ಲು ತೂರಾಟ ಪೂರ್ವ ಯೋಜಿತ ಕೃತ್ಯ ಎಂದು ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮತ್ತಿತರರು ಆರೋಪಿಸಿದ್ದಾರೆ.<br /> <br /> ಘರ್ಷಣೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲ್ಲೂಕಿನಾದ್ಯಂತ 3 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>