<p>ನವದೆಹಲಿ (ಪಿಟಿಐ): ಕಲ್ಲಿದ್ದಲು ಸಚಿವಾಲಯದ ಪರಿಶೀಲನಾ ಸಮಿತಿ ತಿರಸ್ಕರಿಸಿದ ಬಳಿಕವೂ ತಲಬೀರಾದಲ್ಲಿನ ಕಲ್ಲಿದ್ದಲು ನಿಕ್ಷೇಪವನ್ನು ಹಿಂಡಾಲ್ಕೋ ಕಂಪೆನಿಗೆ ಮಂಜೂರು ಮಾಡಿದ್ದೂ ಸೇರಿದಂತೆ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿನ ಅಕ್ರಮ ಆಪಾದನೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಲಹೆಗಾರ ಟಿ.ಕೆ.ಎ. ನಾಯರ್ ಅವರನ್ನು ಸಿಬಿಐ ಪ್ರಶ್ನಿಸಿದೆ.<br /> <br /> ಮುಂದಿನ ವಾರ ಸುಪ್ರೀಕೋರ್ಟ್ ಗೆ ತನ್ನ ವರದಿ ಒಪ್ಪಿಸಬೇಕಾದ ಹಿನ್ನೆಲೆಯಲ್ಲಿ ಸಿಬಿಐ ನಾಯರ್ ಅವರಿಗೆ ವಿಸ್ತೃತ ಪ್ರಶ್ನಾವಳಿಯನ್ನು ಕಳುಹಿಸಿದ್ದು, ನಾಯರ್ ಅವರು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.<br /> <br /> 2006ರಿಂದ 2009ರ ನಡುವಣ ಅವಧಿಯಲ್ಲಿ ಕಲ್ಲಿದ್ದಲು ಸಚಿವಾಲಯದ ಉಸ್ತುವಾರಿಯನ್ನು ಪ್ರಧಾನಿಯವರು ಹೊಂದಿದ್ದಾಗ ಅನುಸರಿಸಲಾಗಿದ್ದ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಸಂಬಂಧಿತ ಕಲ್ಲಿದ್ದಲು ನೀತಿ ಕುರಿತ ಪ್ರಶ್ನೆಗಳನ್ನು ನಾಯರ್ ಅವರಿಗೆ ಕೇಳಲಾಗಿತ್ತು ಎಂದು ಮೂಲಗಳು ಹೇಳಿವೆ.<br /> <br /> ಕಲ್ಲಿದ್ದಲು ನಿಕ್ಷೇಪಗಳ ಹರಾಜು ವಿಳಂಬ, ಕಣ್ಮರೆಯಾದ ಕಲ್ಲಿದ್ದಲು ಕಡತಗಳು ಮತ್ತು ತಲಬೀರಾ ಕಲ್ಲಿದ್ದಲು ನಿಕ್ಷೇಪವನ್ನು ಹಿಂಡಾಲ್ಕೋ ಕಂಪೆನಿಗೆ ನೀಡಲು ಕಾರಣವಾದ ಘಟನಾವಳಿಗಳ ಬಗ್ಗೆ ಉತ್ತರ ನೀಡುವಂತೆ ನಾಯರ್ ಅವರಿಗೆ ಸೂಚಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಕಲ್ಲಿದ್ದಲು ಇಲಾಖಾ ಕಾರ್ಯದರ್ಶಿ ಪಿ.ಸಿ. ಪ್ರಕಾಶ್ ಮತ್ತು ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ ಮಂಗಲಂ ಬಿರ್ಲಾ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.<br /> <br /> ಈಗ ನಾಯರ್ ಅವರು ಕಳುಹಿಸಿರುವ ಉತ್ತರಗಳನ್ನು ಸಿಬಿಐ ಸುಪ್ರಿಂಕೋರ್ಟ್ ಗೆ ಸಲ್ಲಿಸಲಿದೆ.<br /> <br /> ಸಿಬಿಐ ಈಗಾಗಲೇ ಪ್ರಧಾನ ಮಂತ್ರಿ ಸಚಿವಾಲಯದ ಇಬ್ಬರು ಮಾಜಿ ಅಧಿಕಾರಿಗಳಾದ ವಿನಿ ಮಹಾಜನ್ ಮತ್ತು ಅಶೀಷ್ ಗುಪ್ತಾ ಅವರನ್ನು ವಿಚಾರಣೆಗೆ ಗುರಿಪಡಿಸಿದೆ. ಈ ಇಬ್ಬರು ಅಧಿಕಾರಿಗಳೂ 2006ರಿಂದ 2009ರವರೆಗಿನ ಅವಧಿಯಲ್ಲಿ ಪ್ರಧಾನ ಮಂತ್ರಿ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಕಲ್ಲಿದ್ದಲು ಸಚಿವಾಲಯದ ಪರಿಶೀಲನಾ ಸಮಿತಿ ತಿರಸ್ಕರಿಸಿದ ಬಳಿಕವೂ ತಲಬೀರಾದಲ್ಲಿನ ಕಲ್ಲಿದ್ದಲು ನಿಕ್ಷೇಪವನ್ನು ಹಿಂಡಾಲ್ಕೋ ಕಂಪೆನಿಗೆ ಮಂಜೂರು ಮಾಡಿದ್ದೂ ಸೇರಿದಂತೆ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿನ ಅಕ್ರಮ ಆಪಾದನೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಲಹೆಗಾರ ಟಿ.ಕೆ.ಎ. ನಾಯರ್ ಅವರನ್ನು ಸಿಬಿಐ ಪ್ರಶ್ನಿಸಿದೆ.<br /> <br /> ಮುಂದಿನ ವಾರ ಸುಪ್ರೀಕೋರ್ಟ್ ಗೆ ತನ್ನ ವರದಿ ಒಪ್ಪಿಸಬೇಕಾದ ಹಿನ್ನೆಲೆಯಲ್ಲಿ ಸಿಬಿಐ ನಾಯರ್ ಅವರಿಗೆ ವಿಸ್ತೃತ ಪ್ರಶ್ನಾವಳಿಯನ್ನು ಕಳುಹಿಸಿದ್ದು, ನಾಯರ್ ಅವರು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.<br /> <br /> 2006ರಿಂದ 2009ರ ನಡುವಣ ಅವಧಿಯಲ್ಲಿ ಕಲ್ಲಿದ್ದಲು ಸಚಿವಾಲಯದ ಉಸ್ತುವಾರಿಯನ್ನು ಪ್ರಧಾನಿಯವರು ಹೊಂದಿದ್ದಾಗ ಅನುಸರಿಸಲಾಗಿದ್ದ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಸಂಬಂಧಿತ ಕಲ್ಲಿದ್ದಲು ನೀತಿ ಕುರಿತ ಪ್ರಶ್ನೆಗಳನ್ನು ನಾಯರ್ ಅವರಿಗೆ ಕೇಳಲಾಗಿತ್ತು ಎಂದು ಮೂಲಗಳು ಹೇಳಿವೆ.<br /> <br /> ಕಲ್ಲಿದ್ದಲು ನಿಕ್ಷೇಪಗಳ ಹರಾಜು ವಿಳಂಬ, ಕಣ್ಮರೆಯಾದ ಕಲ್ಲಿದ್ದಲು ಕಡತಗಳು ಮತ್ತು ತಲಬೀರಾ ಕಲ್ಲಿದ್ದಲು ನಿಕ್ಷೇಪವನ್ನು ಹಿಂಡಾಲ್ಕೋ ಕಂಪೆನಿಗೆ ನೀಡಲು ಕಾರಣವಾದ ಘಟನಾವಳಿಗಳ ಬಗ್ಗೆ ಉತ್ತರ ನೀಡುವಂತೆ ನಾಯರ್ ಅವರಿಗೆ ಸೂಚಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಕಲ್ಲಿದ್ದಲು ಇಲಾಖಾ ಕಾರ್ಯದರ್ಶಿ ಪಿ.ಸಿ. ಪ್ರಕಾಶ್ ಮತ್ತು ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ ಮಂಗಲಂ ಬಿರ್ಲಾ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.<br /> <br /> ಈಗ ನಾಯರ್ ಅವರು ಕಳುಹಿಸಿರುವ ಉತ್ತರಗಳನ್ನು ಸಿಬಿಐ ಸುಪ್ರಿಂಕೋರ್ಟ್ ಗೆ ಸಲ್ಲಿಸಲಿದೆ.<br /> <br /> ಸಿಬಿಐ ಈಗಾಗಲೇ ಪ್ರಧಾನ ಮಂತ್ರಿ ಸಚಿವಾಲಯದ ಇಬ್ಬರು ಮಾಜಿ ಅಧಿಕಾರಿಗಳಾದ ವಿನಿ ಮಹಾಜನ್ ಮತ್ತು ಅಶೀಷ್ ಗುಪ್ತಾ ಅವರನ್ನು ವಿಚಾರಣೆಗೆ ಗುರಿಪಡಿಸಿದೆ. ಈ ಇಬ್ಬರು ಅಧಿಕಾರಿಗಳೂ 2006ರಿಂದ 2009ರವರೆಗಿನ ಅವಧಿಯಲ್ಲಿ ಪ್ರಧಾನ ಮಂತ್ರಿ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>