<p><strong>ಕೃಷ್ಣಗಿರಿ (ತಮಿಳುನಾಡು), (ಪಿಟಿಐ):</strong> ಜಿಲ್ಲೆಯ ಮಥುರಾ ಪ್ರದೇಶದಲ್ಲಿ ಸಾರ್ವಜನಿಕರ ದಾಳಿಯಿಂದ ಗಾಯಗೊಂಡು ಆರು ತಿಂಗಳ ಗಂಡು ಚಿರತೆ ಮರಿಯೊಂದು ಬುಧವಾರ ಮೃತಪಟ್ಟಿದೆ. ಹತ್ತಿರದ ತಿರುಪತ್ತೂರು ಅರಣ್ಯದಿಂದ ಬಂದಿದ್ದ ಈ ಮರಿ ಸಾರ್ವಜನಿಕರ ಮೇಲೆ ದಾಳಿ ಮಾಡಿ, 30 ವರ್ಷದ ವ್ಯಕ್ತಿಯೊಬ್ಬನನ್ನು ಗಾಯಗೊಳಿಸಿತ್ತು.<br /> <br /> ಇದರಿಂದ ಕ್ರೋಧಗೊಂಡ ಜನ ಅದರ ಮೇಲೆ ಕಲ್ಲುಗಳನ್ನು ತೂರಿದ್ದರು. ಆಗ ಹೊಲಗಳ ಕಡೆ ಓಡಿ ಹೋದ ಅದು ನೀರಿಲ್ಲದ 50 ಅಡಿ ಆಳದ ಬಾವಿಯಲ್ಲಿ ಬಿದ್ದಿತ್ತು. ಆಗ ಮರಿಯ ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣಗಿರಿ (ತಮಿಳುನಾಡು), (ಪಿಟಿಐ):</strong> ಜಿಲ್ಲೆಯ ಮಥುರಾ ಪ್ರದೇಶದಲ್ಲಿ ಸಾರ್ವಜನಿಕರ ದಾಳಿಯಿಂದ ಗಾಯಗೊಂಡು ಆರು ತಿಂಗಳ ಗಂಡು ಚಿರತೆ ಮರಿಯೊಂದು ಬುಧವಾರ ಮೃತಪಟ್ಟಿದೆ. ಹತ್ತಿರದ ತಿರುಪತ್ತೂರು ಅರಣ್ಯದಿಂದ ಬಂದಿದ್ದ ಈ ಮರಿ ಸಾರ್ವಜನಿಕರ ಮೇಲೆ ದಾಳಿ ಮಾಡಿ, 30 ವರ್ಷದ ವ್ಯಕ್ತಿಯೊಬ್ಬನನ್ನು ಗಾಯಗೊಳಿಸಿತ್ತು.<br /> <br /> ಇದರಿಂದ ಕ್ರೋಧಗೊಂಡ ಜನ ಅದರ ಮೇಲೆ ಕಲ್ಲುಗಳನ್ನು ತೂರಿದ್ದರು. ಆಗ ಹೊಲಗಳ ಕಡೆ ಓಡಿ ಹೋದ ಅದು ನೀರಿಲ್ಲದ 50 ಅಡಿ ಆಳದ ಬಾವಿಯಲ್ಲಿ ಬಿದ್ದಿತ್ತು. ಆಗ ಮರಿಯ ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>