<p><strong>ಧಾರವಾಡ: </strong>ಇಲ್ಲಿಯ ಸಪ್ತಾಪುರದಲ್ಲಿ ಬಿಸಿಎಂ ಇಲಾಖೆ ನಡೆಸುತ್ತಿರುವ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸೋಮವಾರ ರಾತ್ರಿ ಊಟ ಬಿಟ್ಟು ಪ್ರತಿಭಟನೆ ನಡೆಸಿದರು.<br /> <br /> ‘ಕಳೆದ ಹಲವು ತಿಂಗಳುಗಳಿಂದ ಕಲಬೆರಕೆ ಆಹಾರ ನೀಡಲಾಗುತ್ತಿದೆ. ಬಿಸಿ ಊಟದೊಂದಿಗೆ ತಂಗಳನ್ನವನ್ನು ಸೇರಿಸಿ ನೀಡಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪರಿಸ್ಥಿತಿ ಸುಧಾರಿಸಿಲ್ಲ’ ಎಂದು ವಿದ್ಯಾರ್ಥಿಗಳು ಆರೋಪಿಸಿದರು.<br /> <br /> ‘ಹಲವು ಬಾರಿ ಹಳಸಿದ ಅನ್ನವನ್ನು ನೀಡಲಾಗುತ್ತಿದ್ದು, ಕೊಳೆತ ತರಕಾರಿಯನ್ನೂ ಅಡುಗೆಯಲ್ಲಿ ಬಳಸಲಾಗುತ್ತಿದೆ. ಆ ಕುರಿತು ಪ್ರಶ್ನಿಸಿದವರ ವಿರುದ್ಧ ಅಡುಗೆಯವರು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಸೋಮವಾರ ರಾತ್ರಿ ಕಳಪೆ ಆಹಾರ ನೀಡಿದ್ದರಿಂದ ಕೆಲ ವಿದ್ಯಾರ್ಥಿಗಳು ಊಟ ಮಾಡದೇ ಮಲಗಿದರು.<br /> <br /> ಸಮಸ್ಯೆ ಕುರಿತು ‘<strong>ಪ್ರಜಾವಾಣಿ’ಗೆ </strong>ಪ್ರತಿಕ್ರಿಯೆ ನೀಡಿದ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಸಿದ್ಧಲಿಂಗಯ್ಯ ಹಿರೇಮಠ, ‘ಈ ಬಗ್ಗೆ ನಾನು ಅಡುಗೆಯವರಿಗೆ ಸಾಕಷ್ಟು ಬಾರಿ ಹೇಳಿದ್ದೇನೆ. ಆದರೂ ಒಮ್ಮೊಮ್ಮೆ ಹೀಗಾಗುತ್ತಿದೆ. ಈ ಬಗ್ಗೆ ವಿದ್ಯಾರ್ಥಿಗಳೂ ಗಮನಕ್ಕೆ ತಂದಿದ್ದಾರೆ. ಆದರೂ, ಮಧ್ಯಾಹ್ನ ಮಾಡಿದ ಅಡುಗೆಯನ್ನು ರಾತ್ರಿ ಊಟ ಮಾಡಲು ಕಷ್ಟವೇನು? ನಾನು ನಮ್ಮ ಮನೆಯಲ್ಲಿ ಮಧ್ಯಾಹ್ನ ಮಾಡಿದ ಅನ್ನವನ್ನೇ ಊಟ ಮಾಡಿದೆ’ ಎಂದರು. ವಿದ್ಯಾರ್ಥಿಗಳು ನಂತರ ಜಿಲ್ಲಾಧಿಕಾರಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಇಲ್ಲಿಯ ಸಪ್ತಾಪುರದಲ್ಲಿ ಬಿಸಿಎಂ ಇಲಾಖೆ ನಡೆಸುತ್ತಿರುವ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸೋಮವಾರ ರಾತ್ರಿ ಊಟ ಬಿಟ್ಟು ಪ್ರತಿಭಟನೆ ನಡೆಸಿದರು.<br /> <br /> ‘ಕಳೆದ ಹಲವು ತಿಂಗಳುಗಳಿಂದ ಕಲಬೆರಕೆ ಆಹಾರ ನೀಡಲಾಗುತ್ತಿದೆ. ಬಿಸಿ ಊಟದೊಂದಿಗೆ ತಂಗಳನ್ನವನ್ನು ಸೇರಿಸಿ ನೀಡಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪರಿಸ್ಥಿತಿ ಸುಧಾರಿಸಿಲ್ಲ’ ಎಂದು ವಿದ್ಯಾರ್ಥಿಗಳು ಆರೋಪಿಸಿದರು.<br /> <br /> ‘ಹಲವು ಬಾರಿ ಹಳಸಿದ ಅನ್ನವನ್ನು ನೀಡಲಾಗುತ್ತಿದ್ದು, ಕೊಳೆತ ತರಕಾರಿಯನ್ನೂ ಅಡುಗೆಯಲ್ಲಿ ಬಳಸಲಾಗುತ್ತಿದೆ. ಆ ಕುರಿತು ಪ್ರಶ್ನಿಸಿದವರ ವಿರುದ್ಧ ಅಡುಗೆಯವರು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಸೋಮವಾರ ರಾತ್ರಿ ಕಳಪೆ ಆಹಾರ ನೀಡಿದ್ದರಿಂದ ಕೆಲ ವಿದ್ಯಾರ್ಥಿಗಳು ಊಟ ಮಾಡದೇ ಮಲಗಿದರು.<br /> <br /> ಸಮಸ್ಯೆ ಕುರಿತು ‘<strong>ಪ್ರಜಾವಾಣಿ’ಗೆ </strong>ಪ್ರತಿಕ್ರಿಯೆ ನೀಡಿದ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಸಿದ್ಧಲಿಂಗಯ್ಯ ಹಿರೇಮಠ, ‘ಈ ಬಗ್ಗೆ ನಾನು ಅಡುಗೆಯವರಿಗೆ ಸಾಕಷ್ಟು ಬಾರಿ ಹೇಳಿದ್ದೇನೆ. ಆದರೂ ಒಮ್ಮೊಮ್ಮೆ ಹೀಗಾಗುತ್ತಿದೆ. ಈ ಬಗ್ಗೆ ವಿದ್ಯಾರ್ಥಿಗಳೂ ಗಮನಕ್ಕೆ ತಂದಿದ್ದಾರೆ. ಆದರೂ, ಮಧ್ಯಾಹ್ನ ಮಾಡಿದ ಅಡುಗೆಯನ್ನು ರಾತ್ರಿ ಊಟ ಮಾಡಲು ಕಷ್ಟವೇನು? ನಾನು ನಮ್ಮ ಮನೆಯಲ್ಲಿ ಮಧ್ಯಾಹ್ನ ಮಾಡಿದ ಅನ್ನವನ್ನೇ ಊಟ ಮಾಡಿದೆ’ ಎಂದರು. ವಿದ್ಯಾರ್ಥಿಗಳು ನಂತರ ಜಿಲ್ಲಾಧಿಕಾರಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>