<p><strong>ಯಲಬುರ್ಗಾ:</strong> ತಾಲ್ಲೂಕಿನ ತುಮ್ಮರಗುದ್ದಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳಪೆ ಬಿಸಿಯೂಟ ಹಾಗೂ ಮುಖ್ಯೋಪಾಧ್ಯಾಯರ ಅಸಭ್ಯ ವರ್ತನೆಗೆ ಬೇಸತ್ತು ಶುಕ್ರವಾರ ಮಕ್ಕಳು ಪ್ರತಿಭಟನೆ ನಡೆಸಿದರು.<br /> <br /> ಸುಮಾರು ವರ್ಷಗಳಿಂದ ಇದೇ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ದೇವಪ್ಪ ಅವರು ಮಕ್ಕಳೊಂದಿಗೆ ಹಾಗೂ ಪಾಲಕರೊಂದಿಗೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದರು.<br /> <br /> ಬಿಸಿಯೂಟಕ್ಕೆ ಬೇಕಾದ ಅಗತ್ಯ ಸಾಮಗ್ರಿ ಖರೀದಿಗೆ ಹಣ ಖರ್ಚು ಹಾಕಿದರೂ ಆಹಾರ ತಯಾರಿಕೆಯಲ್ಲಿ ಬಳಸುವುದಿಲ್ಲ. ಕಳಪೆ ಆಹಾರ ತಯಾರಿಸಿ ಮಕ್ಕಳಿಗೆ ಹಾಕುತ್ತಿದ್ದಾರೆ. ಈ ಧೋರಣೆಯನ್ನು ಪ್ರಶ್ನಿಸುವ ವಿದ್ಯಾರ್ಥಿಗಳನ್ನು ಫೇಲು ಮಾಡುವುದಾಗಿ ಬೆದರಿಕೆ ಹಾಕುತ್ತಾರೆ ಎಂದು ಗ್ರಾಮದ ಶರಣಪ್ಪ ಈಳಿಗೇರ, ಮುದಕನಗೌಡ ಪಾಟೀಲ ಹಾಗೂ ಬಸವರಾಜ ಹವಳದ ಆರೋಪಿಸಿದರು.<br /> <br /> ಒಂದರಿಂದ 8ನೇ ತರಗತಿವರೆಗೆ 350ಕ್ಕೂ ಅಧಿಕ ಮಕ್ಕಳಿದ್ದಾರೆ. 4 ಜನ ಅಡುಗೆಯವರಿದ್ದಾರೆ. ಆದರೆ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದೇ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಮುಖ್ಯೋಪಾಧ್ಯಾಯ ಮಕ್ಕಳ ಹಿತಿ ಕಾಪಾಡದೆ ಬರೀ ಅಡುಗೆ ಮನೆಯಲ್ಲಿಯೇ ಇದ್ದು ಅಡುಗೆಯವರೊಂದಿಗೆ ಹೊತ್ತು ಕಳೆಯುತ್ತಾರೆ. ಈ ಬಗ್ಗೆ ಗ್ರಾಮಸ್ಥರು ಸಾಕಷ್ಟು ಸಲ ಎಚ್ಚರಿಕೆ ನೀಡಿದ್ದರೂ ಸುಧಾರಿಸಿಕೊಂಡಿಲ್ಲ. ಮೇಲಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದರಿಂದ ಈ ಅಕ್ರಮದಲ್ಲಿ ಅವರು ಶಾಮೀಲಾಗಿದ್ದಾರೆ ಎಂಬ ಸಂಶಯ ಮೂಡುತ್ತಿದೆ ಎಂದು ಪ್ರವೀಣ ಮುಸಿಗೇರಿ ಹಾಗೂ ಶಿವರಾಜ ಆಕ್ರೋಶ ಪಡಿಸಿದ್ದಾರೆ.<br /> <br /> ಪಾಠ, ಆಟ ಹಾಗೂ ಇನ್ನಿತರ ಚಟುವಟಿಕೆ ಸಮಪರ್ಕಕವಾಗಿ ನಡೆಯುತ್ತಿಲ್ಲ. ಅವರು ಏನು ಹೇಳುತ್ತಾರೋ ಅದನ್ನೇ ಕೇಳಬೇಕು. ಮುಖ್ಯಶಿಕ್ಷಕರ ವರ್ತನೆಯಿಂದ ಶಾಲೆಗೆ ಹೋಗುವುದಕ್ಕೆ ಬೇಸರವಾಗಿದೆ. ಆಹಾರ ತೀರಾ ಕಳಪೆಯಾಗಿದ್ದು, ನೆನಸಿಕೊಂಡರೆ ವಾಂತಿಯಾದಂತಾಗುತ್ತದೆ ಎಂದು ವಿದ್ಯಾರ್ಥಿಗಳಾದ ಸುರೇಶ ರಾಠೋಡ, ಪ್ರಭು ತಳವಾರ, ಬಸವರಾಜ ಕುದ್ರಿಕೋಟಗಿ ಆಪಾದಿಸಿದರು.<br /> <br /> ಶೈಕ್ಷಣಿಕವಾಗಿ ಯಾವುದೇ ಸುಧಾರಣೆಗೆ ಶ್ರಮಿಸದೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಮುಖ್ಯೋಪಾಧ್ಯಾಯರು, ಸರಿಯಾಗಿ ಪಾಠ ಮಾಡದ ಶಿಕ್ಷಕರು, ಸರಿಯಾಗಿ ಬಿಸಿಯೂಟ ತಯಾರಿಸದೆ ಇರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮೇಲಧಿಕಾರಿಗಳು ಶಾಲೆಗೆ ಭೇಟಿ ನೀಡಿ ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.<br /> <br /> <strong><em>ಕೋಳಿ, ಕುರಿ ತಿಂದು ದಕ್ಕಿಸಿ ಕೊಳ್ಳುವರಿಗೆ ಸಣ್ಣ ನುಸಿ ತಿನ್ನೋಕೆ ಆಗೋದಿಲ್ವಾ ಎನ್ನುವ ಮುಖ್ಯಶಿಕ್ಷಕ ರನ್ನು ಅಮಾನತು ಮಾಡಬೇಕು.<br /> – </em></strong><strong>ಶಿವರಾಜ ಚಿಕ್ಕೊಪ್ಪ,</strong><br /> ಜನಪರ ಸಂಘಟನೆ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ತಾಲ್ಲೂಕಿನ ತುಮ್ಮರಗುದ್ದಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳಪೆ ಬಿಸಿಯೂಟ ಹಾಗೂ ಮುಖ್ಯೋಪಾಧ್ಯಾಯರ ಅಸಭ್ಯ ವರ್ತನೆಗೆ ಬೇಸತ್ತು ಶುಕ್ರವಾರ ಮಕ್ಕಳು ಪ್ರತಿಭಟನೆ ನಡೆಸಿದರು.<br /> <br /> ಸುಮಾರು ವರ್ಷಗಳಿಂದ ಇದೇ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ದೇವಪ್ಪ ಅವರು ಮಕ್ಕಳೊಂದಿಗೆ ಹಾಗೂ ಪಾಲಕರೊಂದಿಗೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದರು.<br /> <br /> ಬಿಸಿಯೂಟಕ್ಕೆ ಬೇಕಾದ ಅಗತ್ಯ ಸಾಮಗ್ರಿ ಖರೀದಿಗೆ ಹಣ ಖರ್ಚು ಹಾಕಿದರೂ ಆಹಾರ ತಯಾರಿಕೆಯಲ್ಲಿ ಬಳಸುವುದಿಲ್ಲ. ಕಳಪೆ ಆಹಾರ ತಯಾರಿಸಿ ಮಕ್ಕಳಿಗೆ ಹಾಕುತ್ತಿದ್ದಾರೆ. ಈ ಧೋರಣೆಯನ್ನು ಪ್ರಶ್ನಿಸುವ ವಿದ್ಯಾರ್ಥಿಗಳನ್ನು ಫೇಲು ಮಾಡುವುದಾಗಿ ಬೆದರಿಕೆ ಹಾಕುತ್ತಾರೆ ಎಂದು ಗ್ರಾಮದ ಶರಣಪ್ಪ ಈಳಿಗೇರ, ಮುದಕನಗೌಡ ಪಾಟೀಲ ಹಾಗೂ ಬಸವರಾಜ ಹವಳದ ಆರೋಪಿಸಿದರು.<br /> <br /> ಒಂದರಿಂದ 8ನೇ ತರಗತಿವರೆಗೆ 350ಕ್ಕೂ ಅಧಿಕ ಮಕ್ಕಳಿದ್ದಾರೆ. 4 ಜನ ಅಡುಗೆಯವರಿದ್ದಾರೆ. ಆದರೆ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದೇ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಮುಖ್ಯೋಪಾಧ್ಯಾಯ ಮಕ್ಕಳ ಹಿತಿ ಕಾಪಾಡದೆ ಬರೀ ಅಡುಗೆ ಮನೆಯಲ್ಲಿಯೇ ಇದ್ದು ಅಡುಗೆಯವರೊಂದಿಗೆ ಹೊತ್ತು ಕಳೆಯುತ್ತಾರೆ. ಈ ಬಗ್ಗೆ ಗ್ರಾಮಸ್ಥರು ಸಾಕಷ್ಟು ಸಲ ಎಚ್ಚರಿಕೆ ನೀಡಿದ್ದರೂ ಸುಧಾರಿಸಿಕೊಂಡಿಲ್ಲ. ಮೇಲಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದರಿಂದ ಈ ಅಕ್ರಮದಲ್ಲಿ ಅವರು ಶಾಮೀಲಾಗಿದ್ದಾರೆ ಎಂಬ ಸಂಶಯ ಮೂಡುತ್ತಿದೆ ಎಂದು ಪ್ರವೀಣ ಮುಸಿಗೇರಿ ಹಾಗೂ ಶಿವರಾಜ ಆಕ್ರೋಶ ಪಡಿಸಿದ್ದಾರೆ.<br /> <br /> ಪಾಠ, ಆಟ ಹಾಗೂ ಇನ್ನಿತರ ಚಟುವಟಿಕೆ ಸಮಪರ್ಕಕವಾಗಿ ನಡೆಯುತ್ತಿಲ್ಲ. ಅವರು ಏನು ಹೇಳುತ್ತಾರೋ ಅದನ್ನೇ ಕೇಳಬೇಕು. ಮುಖ್ಯಶಿಕ್ಷಕರ ವರ್ತನೆಯಿಂದ ಶಾಲೆಗೆ ಹೋಗುವುದಕ್ಕೆ ಬೇಸರವಾಗಿದೆ. ಆಹಾರ ತೀರಾ ಕಳಪೆಯಾಗಿದ್ದು, ನೆನಸಿಕೊಂಡರೆ ವಾಂತಿಯಾದಂತಾಗುತ್ತದೆ ಎಂದು ವಿದ್ಯಾರ್ಥಿಗಳಾದ ಸುರೇಶ ರಾಠೋಡ, ಪ್ರಭು ತಳವಾರ, ಬಸವರಾಜ ಕುದ್ರಿಕೋಟಗಿ ಆಪಾದಿಸಿದರು.<br /> <br /> ಶೈಕ್ಷಣಿಕವಾಗಿ ಯಾವುದೇ ಸುಧಾರಣೆಗೆ ಶ್ರಮಿಸದೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಮುಖ್ಯೋಪಾಧ್ಯಾಯರು, ಸರಿಯಾಗಿ ಪಾಠ ಮಾಡದ ಶಿಕ್ಷಕರು, ಸರಿಯಾಗಿ ಬಿಸಿಯೂಟ ತಯಾರಿಸದೆ ಇರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮೇಲಧಿಕಾರಿಗಳು ಶಾಲೆಗೆ ಭೇಟಿ ನೀಡಿ ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.<br /> <br /> <strong><em>ಕೋಳಿ, ಕುರಿ ತಿಂದು ದಕ್ಕಿಸಿ ಕೊಳ್ಳುವರಿಗೆ ಸಣ್ಣ ನುಸಿ ತಿನ್ನೋಕೆ ಆಗೋದಿಲ್ವಾ ಎನ್ನುವ ಮುಖ್ಯಶಿಕ್ಷಕ ರನ್ನು ಅಮಾನತು ಮಾಡಬೇಕು.<br /> – </em></strong><strong>ಶಿವರಾಜ ಚಿಕ್ಕೊಪ್ಪ,</strong><br /> ಜನಪರ ಸಂಘಟನೆ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>