<p>ಮುನವಳ್ಳಿ: ಕಳಸಾ-ಬಂಡೂರಿ ಯೋಜನೆ ಜಾರಿಯಾದಾಗ ಮಾತ್ರ ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಾಧ್ಯ. ಇದಕ್ಕೆ ನಿರಂತರ ಹೋರಾಟದ ಅವಶ್ಯಕತೆ ಇದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಂಚನಗೌಡ ದ್ಯಾಮನಗೌಡರ ಹೇಳಿದರು.<br /> <br /> ಕಳಸಾ-ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ಒತ್ತಾಯಿಸಿ ಕೈಗೊಂಡಿರುವ ರಥ ಯಾತ್ರೆ ಮುನವಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದರು. ಅನೇಕ ಗ್ರಾಮ ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವ ಕಳಸಾ-ಬಂಡೂರಿ ಯೋಜನೆ ಕುರಿತು ಜನಜಾಗೃತಿ ಜನಸಾಮಾನ್ಯರಿಗೆ ತಲುಪಿ ಅವರು ಸಹ ಈ ಹೋರಾಟದಲ್ಲಿ ಪಾಲ್ಗೊಂಡು ಬಹುನಿರೀಕ್ಷೆಯ ಈ ಯೋಜನೆ ಅನುಷ್ಠಾನಕ್ಕೆ ಬರಬೇಕು ಎಂದು ಒತ್ತಾಯಿಸಿದರು. <br /> <br /> ಸೋಮಶೇಖರ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಉಮೇಶ ಬಾಳಿ ಮಾತನಾಡಿದರು. ಸಮಿತಿ ಜಿಲ್ಲಾ ಸಂಚಾಲಕ ಶಿವಾನಂದ ಮೇಟಿ, ನಿಂಗನಗೌಡ ಮಲಗೌಡರ, ಲಕ್ಷ್ಮಣ ಮೊಹರೆ, ಘಟವಾಳಿಮಠ, ಪ್ರಸಾದ ವಿರುಪಯ್ಯನವರಮಠ, ಅಶೋಕ ಹಾದಿಮನಿ, ಬಿಜಲಿ, ಕಾಮಣ್ಣವರ. ಬಿಕ್ಕನಗೌಡರ. ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುನವಳ್ಳಿ: ಕಳಸಾ-ಬಂಡೂರಿ ಯೋಜನೆ ಜಾರಿಯಾದಾಗ ಮಾತ್ರ ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಾಧ್ಯ. ಇದಕ್ಕೆ ನಿರಂತರ ಹೋರಾಟದ ಅವಶ್ಯಕತೆ ಇದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಂಚನಗೌಡ ದ್ಯಾಮನಗೌಡರ ಹೇಳಿದರು.<br /> <br /> ಕಳಸಾ-ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ಒತ್ತಾಯಿಸಿ ಕೈಗೊಂಡಿರುವ ರಥ ಯಾತ್ರೆ ಮುನವಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದರು. ಅನೇಕ ಗ್ರಾಮ ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವ ಕಳಸಾ-ಬಂಡೂರಿ ಯೋಜನೆ ಕುರಿತು ಜನಜಾಗೃತಿ ಜನಸಾಮಾನ್ಯರಿಗೆ ತಲುಪಿ ಅವರು ಸಹ ಈ ಹೋರಾಟದಲ್ಲಿ ಪಾಲ್ಗೊಂಡು ಬಹುನಿರೀಕ್ಷೆಯ ಈ ಯೋಜನೆ ಅನುಷ್ಠಾನಕ್ಕೆ ಬರಬೇಕು ಎಂದು ಒತ್ತಾಯಿಸಿದರು. <br /> <br /> ಸೋಮಶೇಖರ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಉಮೇಶ ಬಾಳಿ ಮಾತನಾಡಿದರು. ಸಮಿತಿ ಜಿಲ್ಲಾ ಸಂಚಾಲಕ ಶಿವಾನಂದ ಮೇಟಿ, ನಿಂಗನಗೌಡ ಮಲಗೌಡರ, ಲಕ್ಷ್ಮಣ ಮೊಹರೆ, ಘಟವಾಳಿಮಠ, ಪ್ರಸಾದ ವಿರುಪಯ್ಯನವರಮಠ, ಅಶೋಕ ಹಾದಿಮನಿ, ಬಿಜಲಿ, ಕಾಮಣ್ಣವರ. ಬಿಕ್ಕನಗೌಡರ. ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>