<p><strong>ದೊಡ್ಡಬಳ್ಳಾಪುರ:</strong> ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಸವನ್ನು ತಾಲ್ಲೂಕಿನ ಗುಂಡ್ಲಹಳ್ಳಿ ಗ್ರಾಮದ ಸಮೀಪ ಸುರಿಯಲು ಬಿಡುವುದಿಲ್ಲ ಎಂದು ಸ್ಥಳೀಯರ, ಸಂಘಸಂಸ್ಥೆಗಳು ಕೈಗೊಂಡಿರುವ ನಿರ್ಣಯ ಹಾಗೂ ಅಲ್ಲಿನ ಸಮಸ್ಯೆಗಳನ್ನು ಗೃಹಸಚಿವ ಆರ್.ಅಶೋಕ್ ಅವರಿಗೆ ಮನವರಿಕೆ ಮಾಡಿಕೊಡಲು ನ.7ರಂದು ಸಂಜೆ 4 ಗಂಟೆಗೆ ಭೇಟಿ ಮಾಡಲಾಗುವುದು ಎಂದು ಶಾಸಕ ಜೆ.ನರಸಿಂಹಸ್ವಾಮಿ ಹೇಳಿದರು.<br /> <br /> ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರು, ದೊಡ್ಡಬೆಳವಂಗಲ ಹೋಬಳಿ ಮುಖಂಡರ ಸಭೆಯ ನಂತರ ಅವರು ಮಾಹಿತಿ ನೀಡಿದರು.<br /> <br /> ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವವರೆಗೂ ಮತ್ತೆ ಇಲ್ಲಿಗೆ ಕಸ ತಂದು ಸುರಿಯಲು ಅವಕಾಶ ನೀಡುವುದಿಲ್ಲ. ಇಲ್ಲಿನ ಕಸದ ಸಮಸ್ಯೆಯನ್ನು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲು ಬೆಂಗಳೂರು ಮೇಯರ್, ಆಯುಕ್ತರು, ಗೃಹ ಸಚಿವರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಸವನ್ನು ತಾಲ್ಲೂಕಿನ ಗುಂಡ್ಲಹಳ್ಳಿ ಗ್ರಾಮದ ಸಮೀಪ ಸುರಿಯಲು ಬಿಡುವುದಿಲ್ಲ ಎಂದು ಸ್ಥಳೀಯರ, ಸಂಘಸಂಸ್ಥೆಗಳು ಕೈಗೊಂಡಿರುವ ನಿರ್ಣಯ ಹಾಗೂ ಅಲ್ಲಿನ ಸಮಸ್ಯೆಗಳನ್ನು ಗೃಹಸಚಿವ ಆರ್.ಅಶೋಕ್ ಅವರಿಗೆ ಮನವರಿಕೆ ಮಾಡಿಕೊಡಲು ನ.7ರಂದು ಸಂಜೆ 4 ಗಂಟೆಗೆ ಭೇಟಿ ಮಾಡಲಾಗುವುದು ಎಂದು ಶಾಸಕ ಜೆ.ನರಸಿಂಹಸ್ವಾಮಿ ಹೇಳಿದರು.<br /> <br /> ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರು, ದೊಡ್ಡಬೆಳವಂಗಲ ಹೋಬಳಿ ಮುಖಂಡರ ಸಭೆಯ ನಂತರ ಅವರು ಮಾಹಿತಿ ನೀಡಿದರು.<br /> <br /> ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವವರೆಗೂ ಮತ್ತೆ ಇಲ್ಲಿಗೆ ಕಸ ತಂದು ಸುರಿಯಲು ಅವಕಾಶ ನೀಡುವುದಿಲ್ಲ. ಇಲ್ಲಿನ ಕಸದ ಸಮಸ್ಯೆಯನ್ನು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲು ಬೆಂಗಳೂರು ಮೇಯರ್, ಆಯುಕ್ತರು, ಗೃಹ ಸಚಿವರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>