<p>ಕನ್ನಡ ಸಾಹಿತ್ಯ ಪರಿಷತ್ತಿನ ಮತ್ತೊಂದು ಅವಧಿಯ ಅಧ್ಯಕ್ಷರ ಆಯ್ಕೆಗೆ ಈಗ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿವೆ. ಪ್ರಚಾರ ಕಾರ್ಯವೂ ಬಿರುಸಾಗಿದೆ. ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯುತ್ತಿದೆ. <br /> <br /> ಕಣದಲ್ಲಿರುವ ಅಭ್ಯರ್ಥಿಗಳು ಲಕ್ಷಾಂತರ ರೂಪಾಯಿಗಳನ್ನು ಮುದ್ರಣ, ಅಂಚೆ ವೆಚ್ಚ, ಮತದಾರರನ್ನು ಓಲೈಕೆಯ ಭೋಜನ ಕೂಟಗಳಿಗೆ ವೆಚ್ಚ ಮಾಡುತ್ತಿರುವ ವರದಿಗಳು ಬರುತ್ತಿವೆ. <br /> <br /> ಪೂಜೆ, ಪುಸ್ತಕ ಬಿಡುಗಡೆಯಂತಹ ಕಾರ್ಯಕ್ರಮ ಹಮ್ಮಿಕೊಂಡು ಆ ಮೂಲಕ ಪ್ರಚಾರದಲ್ಲಿ ತೊಡಗಿದ್ದಾರೆ. ಸಾಹಿತ್ಯ ಪರಿಷತ್ತಿನ ಚುನಾವಣೆಗಳು ಹೀಗೆ ನಡೆಯಬೇಕೆ? ಅಭ್ಯರ್ಥಿಗಳು ಇಷ್ಟು ಹಣ ಖರ್ಚು ಮಾಡುವ ಉದ್ದೇಶವೇನು? ಹಣದ ಮೂಲ ಯಾವುದು? ಖರ್ಚು ಮಾಡಿದ ಹಣವನ್ನು ಮತ್ತೆ ಗಳಿಸುವ ದಾರಿಗಳಿವೆಯೇ? ಎಂಬ ಪ್ರಶ್ನೆಗಳು ಜನರ ಮನಸ್ಸಿನಲ್ಲಿದೆ.<br /> <br /> ಈ ಹಿನ್ನೆಲೆಯಲ್ಲಿ ಎಲ್ಲ ಅಭ್ಯರ್ಥಿಗಳು ತಮ್ಮ ಆದಾಯ ಮೂಲವನ್ನು ಮತ್ತು ಚುನಾವಣಾ ಖರ್ಚಿನ ವಿವರಗಳನ್ನು ಸಾರ್ವಜನಿಕರಿಗೆ ತಿಳಿಸಬೇಕು. ಕಸಾಪ ಚುನಾವಣೆಗೆ ಭಾರಿ ಹಣ ಖರ್ಚು ಮಾಡುತ್ತಿರುವ ಅಭ್ಯರ್ಥಿಗಳ ಬಗ್ಗೆ ಸಾಹಿತ್ಯ ಪರಿಷತ್ತಿನ ಪ್ರಜ್ಞಾವಂತ ಮತದಾರರು ಎಚ್ಚರ ವಹಿಸಬೇಕು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡ ಸಾಹಿತ್ಯ ಪರಿಷತ್ತಿನ ಮತ್ತೊಂದು ಅವಧಿಯ ಅಧ್ಯಕ್ಷರ ಆಯ್ಕೆಗೆ ಈಗ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿವೆ. ಪ್ರಚಾರ ಕಾರ್ಯವೂ ಬಿರುಸಾಗಿದೆ. ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯುತ್ತಿದೆ. <br /> <br /> ಕಣದಲ್ಲಿರುವ ಅಭ್ಯರ್ಥಿಗಳು ಲಕ್ಷಾಂತರ ರೂಪಾಯಿಗಳನ್ನು ಮುದ್ರಣ, ಅಂಚೆ ವೆಚ್ಚ, ಮತದಾರರನ್ನು ಓಲೈಕೆಯ ಭೋಜನ ಕೂಟಗಳಿಗೆ ವೆಚ್ಚ ಮಾಡುತ್ತಿರುವ ವರದಿಗಳು ಬರುತ್ತಿವೆ. <br /> <br /> ಪೂಜೆ, ಪುಸ್ತಕ ಬಿಡುಗಡೆಯಂತಹ ಕಾರ್ಯಕ್ರಮ ಹಮ್ಮಿಕೊಂಡು ಆ ಮೂಲಕ ಪ್ರಚಾರದಲ್ಲಿ ತೊಡಗಿದ್ದಾರೆ. ಸಾಹಿತ್ಯ ಪರಿಷತ್ತಿನ ಚುನಾವಣೆಗಳು ಹೀಗೆ ನಡೆಯಬೇಕೆ? ಅಭ್ಯರ್ಥಿಗಳು ಇಷ್ಟು ಹಣ ಖರ್ಚು ಮಾಡುವ ಉದ್ದೇಶವೇನು? ಹಣದ ಮೂಲ ಯಾವುದು? ಖರ್ಚು ಮಾಡಿದ ಹಣವನ್ನು ಮತ್ತೆ ಗಳಿಸುವ ದಾರಿಗಳಿವೆಯೇ? ಎಂಬ ಪ್ರಶ್ನೆಗಳು ಜನರ ಮನಸ್ಸಿನಲ್ಲಿದೆ.<br /> <br /> ಈ ಹಿನ್ನೆಲೆಯಲ್ಲಿ ಎಲ್ಲ ಅಭ್ಯರ್ಥಿಗಳು ತಮ್ಮ ಆದಾಯ ಮೂಲವನ್ನು ಮತ್ತು ಚುನಾವಣಾ ಖರ್ಚಿನ ವಿವರಗಳನ್ನು ಸಾರ್ವಜನಿಕರಿಗೆ ತಿಳಿಸಬೇಕು. ಕಸಾಪ ಚುನಾವಣೆಗೆ ಭಾರಿ ಹಣ ಖರ್ಚು ಮಾಡುತ್ತಿರುವ ಅಭ್ಯರ್ಥಿಗಳ ಬಗ್ಗೆ ಸಾಹಿತ್ಯ ಪರಿಷತ್ತಿನ ಪ್ರಜ್ಞಾವಂತ ಮತದಾರರು ಎಚ್ಚರ ವಹಿಸಬೇಕು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>