<p><strong>ಬೆಂಗಳೂರು: </strong>ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾರರೂ ಆಗಿರುವ ಶಿಕ್ಷಕರಿಗೆ, ಇದೇ 29ರಂದು ನಡೆಯುವ ಕಸಾಪ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುಮತಿ ನೀಡಿದೆ.<br /> <br /> ಕಸಾಪ ಮತದಾರರ ಪಟ್ಟಿಯಲ್ಲಿ ಶಿಕ್ಷಕರು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ಮತದಾನದ ದಿನ ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವೂ ಇದೆ. ಹಲವು ಶಿಕ್ಷಕರನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಾಕಷ್ಟು ಮಂದಿ ಮನವಿ ಮಾಡಿದ್ದರು. ಇದನ್ನು ಮಂಡಳಿಯ ಗಮನಕ್ಕೆ ತಂದು ಅವರಿಂದ ಅನುಮತಿ ಪಡೆದುಕೊಳ್ಳಲಾಗಿದೆ ಎಂದು ಕಸಾಪ ಕೇಂದ್ರ ಚುನಾವಣಾ ಅಧಿಕಾರಿ ಎಸ್.ಟಿ. ಮೋಹನ ರಾಜು `ಪ್ರಜಾವಾಣಿ~ಗೆ ತಿಳಿಸಿದರು.</p>.<p>ಶಿಕ್ಷಕರು ಮತದಾನದ ದಿನ ಕೆಲವು ಗಂಟೆಗಳ ಕಾಲ ಪರೀಕ್ಷಾ ಕೇಂದ್ರದಿಂದ ಹೊರಬಂದು, ಮತದಾನದಲ್ಲಿ ಪಾಲ್ಗೊಳ್ಳಲು ಮಂಡಳಿ ಅವಕಾಶ ನೀಡಿದೆ ಎಂದು ಅವರು ಮಾಹಿತಿ ನೀಡಿದರು. ಇದೇ 23ರಿಂದ 30ರವರೆಗೆ ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾರರೂ ಆಗಿರುವ ಶಿಕ್ಷಕರಿಗೆ, ಇದೇ 29ರಂದು ನಡೆಯುವ ಕಸಾಪ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುಮತಿ ನೀಡಿದೆ.<br /> <br /> ಕಸಾಪ ಮತದಾರರ ಪಟ್ಟಿಯಲ್ಲಿ ಶಿಕ್ಷಕರು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ಮತದಾನದ ದಿನ ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವೂ ಇದೆ. ಹಲವು ಶಿಕ್ಷಕರನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಾಕಷ್ಟು ಮಂದಿ ಮನವಿ ಮಾಡಿದ್ದರು. ಇದನ್ನು ಮಂಡಳಿಯ ಗಮನಕ್ಕೆ ತಂದು ಅವರಿಂದ ಅನುಮತಿ ಪಡೆದುಕೊಳ್ಳಲಾಗಿದೆ ಎಂದು ಕಸಾಪ ಕೇಂದ್ರ ಚುನಾವಣಾ ಅಧಿಕಾರಿ ಎಸ್.ಟಿ. ಮೋಹನ ರಾಜು `ಪ್ರಜಾವಾಣಿ~ಗೆ ತಿಳಿಸಿದರು.</p>.<p>ಶಿಕ್ಷಕರು ಮತದಾನದ ದಿನ ಕೆಲವು ಗಂಟೆಗಳ ಕಾಲ ಪರೀಕ್ಷಾ ಕೇಂದ್ರದಿಂದ ಹೊರಬಂದು, ಮತದಾನದಲ್ಲಿ ಪಾಲ್ಗೊಳ್ಳಲು ಮಂಡಳಿ ಅವಕಾಶ ನೀಡಿದೆ ಎಂದು ಅವರು ಮಾಹಿತಿ ನೀಡಿದರು. ಇದೇ 23ರಿಂದ 30ರವರೆಗೆ ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>