<p>ಮಡಿಕೇರಿ: ಕೊಡಗು ಜಿಲ್ಲೆಯ ಕನ್ನಡಾಭಿಮಾನಿಗಳ ಬಹುದಿನಗಳ ಕನಸಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು. <br /> <br /> ಸುದರ್ಶನ ಅತಿಥಿ ಗೃಹದ ಬಳಿ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕಸಾಪ ರಾಜ್ಯ ಘಟಕದ ಅಧ್ಯಕ್ಷ ನಲ್ಲೂರು ಪ್ರಸಾದ್ ಪಾಲ್ಗೊಂಡಿದ್ದರು. <br /> <br /> ಎಸ್.ಬಂಗಾರಪ್ಪ ಅವರು 1988ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ (ಸುಮಾರು 24 ವರ್ಷಗಳ ಹಿಂದೆ) ಭವನ ನಿರ್ಮಾಣಕ್ಕೆ ದೊರೆತ ನಿವೇಶನದಲ್ಲಿ ಮಂಗಳವಾರಸ ಶಂಕುಸ್ಥಾಪನೆ ನೆರವೇರಿತು. <br /> <br /> ಸುಮಾರು 60 ಸೆಂಟ್ ಜಾಗವಿದ್ದು, ರೂ 1.30 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಅನುದಾನ ದೊರೆತರೆ 11 ತಿಂಗಳಲ್ಲಿಯೇ ಕಟ್ಟಡ ನಿರ್ಮಾಣ ಪೂರ್ಣಗೊಳಿಸುವುದಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಟಿ.ಪಿ. ರಮೇಶ್ ವಿಶ್ವಾಸ ವ್ಯಕ್ತಪಡಿಸಿದರು. <br /> <br /> ಶಾಸಕರ ಅನುದಾನದಿಂದ ಅಗತ್ಯವಾದ ಆರ್ಥಿಕ ಸಹಕಾರ ನೀಡುವುದಾಗಿ ಶಾಸಕ ಅಪ್ಪಚ್ಚು ರಂಜನ್ ಮತ್ತು ಜಿ.ಪಂ. ಅಧ್ಯಕ್ಷ ರವಿ ಕುಶಾಲಪ್ಪ ಭರವಸೆ ನೀಡಿದರು. <br /> <br /> ವಿಧಾನ ಪರಿಷತ್ ಸದಸ್ಯ ಎಂ.ಸಿ.ನಾಣಯ್ಯ ಮಾತನಾಡಿ, ಎಲ್ಲಾ ಜಿಲ್ಲೆಗಳಲ್ಲಿಯೂ ಸಾಹಿತ್ಯ ಭವನ ನಿರ್ಮಿಸಲು ತಲಾ ರೂ. 1 ಕೋಟಿ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಯವರನ್ನು ಕೋರಲಾಗುವುದು ಎಂದು ತಿಳಿಸಿದರು.<br /> <br /> ಇದೇ ರೀತಿ ಪ್ರತಿಯೊಂದು ತಾಲ್ಲೂಕು ಘಟಕಗಳಲ್ಲಿಯೂ ಕನ್ನಡ ಭವನ ನಿರ್ಮಿಸಬೇಕೆಂದು ಜಿ.ಪಂ. ಉಪಾಧ್ಯಕ್ಷ ಎಚ್.ಎಂ. ಕಾವೇರಿ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕೊಡಗು ಜಿಲ್ಲೆಯ ಕನ್ನಡಾಭಿಮಾನಿಗಳ ಬಹುದಿನಗಳ ಕನಸಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು. <br /> <br /> ಸುದರ್ಶನ ಅತಿಥಿ ಗೃಹದ ಬಳಿ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕಸಾಪ ರಾಜ್ಯ ಘಟಕದ ಅಧ್ಯಕ್ಷ ನಲ್ಲೂರು ಪ್ರಸಾದ್ ಪಾಲ್ಗೊಂಡಿದ್ದರು. <br /> <br /> ಎಸ್.ಬಂಗಾರಪ್ಪ ಅವರು 1988ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ (ಸುಮಾರು 24 ವರ್ಷಗಳ ಹಿಂದೆ) ಭವನ ನಿರ್ಮಾಣಕ್ಕೆ ದೊರೆತ ನಿವೇಶನದಲ್ಲಿ ಮಂಗಳವಾರಸ ಶಂಕುಸ್ಥಾಪನೆ ನೆರವೇರಿತು. <br /> <br /> ಸುಮಾರು 60 ಸೆಂಟ್ ಜಾಗವಿದ್ದು, ರೂ 1.30 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಅನುದಾನ ದೊರೆತರೆ 11 ತಿಂಗಳಲ್ಲಿಯೇ ಕಟ್ಟಡ ನಿರ್ಮಾಣ ಪೂರ್ಣಗೊಳಿಸುವುದಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಟಿ.ಪಿ. ರಮೇಶ್ ವಿಶ್ವಾಸ ವ್ಯಕ್ತಪಡಿಸಿದರು. <br /> <br /> ಶಾಸಕರ ಅನುದಾನದಿಂದ ಅಗತ್ಯವಾದ ಆರ್ಥಿಕ ಸಹಕಾರ ನೀಡುವುದಾಗಿ ಶಾಸಕ ಅಪ್ಪಚ್ಚು ರಂಜನ್ ಮತ್ತು ಜಿ.ಪಂ. ಅಧ್ಯಕ್ಷ ರವಿ ಕುಶಾಲಪ್ಪ ಭರವಸೆ ನೀಡಿದರು. <br /> <br /> ವಿಧಾನ ಪರಿಷತ್ ಸದಸ್ಯ ಎಂ.ಸಿ.ನಾಣಯ್ಯ ಮಾತನಾಡಿ, ಎಲ್ಲಾ ಜಿಲ್ಲೆಗಳಲ್ಲಿಯೂ ಸಾಹಿತ್ಯ ಭವನ ನಿರ್ಮಿಸಲು ತಲಾ ರೂ. 1 ಕೋಟಿ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಯವರನ್ನು ಕೋರಲಾಗುವುದು ಎಂದು ತಿಳಿಸಿದರು.<br /> <br /> ಇದೇ ರೀತಿ ಪ್ರತಿಯೊಂದು ತಾಲ್ಲೂಕು ಘಟಕಗಳಲ್ಲಿಯೂ ಕನ್ನಡ ಭವನ ನಿರ್ಮಿಸಬೇಕೆಂದು ಜಿ.ಪಂ. ಉಪಾಧ್ಯಕ್ಷ ಎಚ್.ಎಂ. ಕಾವೇರಿ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>