<p><strong>ಬೆಂಗಳೂರು:</strong> `ಶತಮಾನೋತ್ಸವದ ಹೊಸ್ತಿಲಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಪ್ರೋತ್ಸಾಹ ನೀಡಲಿದೆ' ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಮಂಗಳವಾರ ಆಯೋಜಿಸಿದ್ದ `ವಸುದೇವ ಭೂಪಾಲಂ ದತ್ತಿ' ಹಾಗೂ ವಿವಿಧ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.<br /> <br /> `ಪರಿಷತ್ತಿನ ಆವರಣದಲ್ಲಿ ಭವನ ನಿರ್ಮಾಣಕ್ಕೆ ಅಗತ್ಯವಿರುವ ಆರ್ಥಿಕ ಸಹಕಾರವನ್ನು ನೀಡಲು ಸರ್ಕಾರ ಬದ್ಧವಾಗಿದೆ' ಎಂದ ಅವರು, `ಕನ್ನಡ ಮಾಧ್ಯಮದಲ್ಲಿ ಕಲಿತವರೆಲ್ಲರಿಗೂ ಇಂಗ್ಲಿಷ್ ಮಾಧ್ಯಮದಲ್ಲಿ ಸಂವಹನ ನಡೆಸಲು ಸಾಧ್ಯವಿದೆ. ಹಾಗಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯುವುದರಿಂದ ಉದ್ಯೋಗ ಪಡೆಯಲು ಯಾವುದೇ ತೊಂದೆಯಾಗದು' ಎಂದು ಅಭಿಪ್ರಾಯಪಟ್ಟರು.<br /> <br /> ಸಾಹಿತಿ ಡಾ.ಆರ್.ಕೆ.ನಲ್ಲೂರು ಪ್ರಸಾದ್, `ಪರಿಷತ್ತಿನಲ್ಲಿ ರೂ 15 ಮೌಲ್ಯದ ದತ್ತಿಯಿಂದ ರೂ 7ಲಕ್ಷ ಮೊತ್ತದ ದತ್ತಿಯಿದೆ. ಲಾಬಿ ಇಲ್ಲದೇ ಪ್ರಶಸ್ತಿ ನೀಡುವುದೇ ಈ ಸಂಸ್ಥೆಯ ಹೆಗ್ಗಳಿಕೆ ಮತ್ತು ಶಕ್ತಿ' ಎಂದು ತಿಳಿಸಿದರು.<br /> <br /> ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಾಹಿತಿ ಕೃಷ್ಣಮೂರ್ತಿ ಹನೂರು ಅವರು, `ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆ ನಶಿಸಿರುತ್ತಿರುವುದು ಆತಂಕದ ವಿಚಾರ. ಆದರೆ ಇದರ ನಡುವೆಯು ಸಾಹಿತ್ಯ ಪರಿಷತ್ತು ಕನ್ನಡಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಉತ್ತಮ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿರುವುದು ಸಂತೋಷದ ತಂದಿದೆ' ಎಂದು ತಿಳಿಸಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಶತಮಾನೋತ್ಸವದ ಹೊಸ್ತಿಲಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಪ್ರೋತ್ಸಾಹ ನೀಡಲಿದೆ' ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಮಂಗಳವಾರ ಆಯೋಜಿಸಿದ್ದ `ವಸುದೇವ ಭೂಪಾಲಂ ದತ್ತಿ' ಹಾಗೂ ವಿವಿಧ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.<br /> <br /> `ಪರಿಷತ್ತಿನ ಆವರಣದಲ್ಲಿ ಭವನ ನಿರ್ಮಾಣಕ್ಕೆ ಅಗತ್ಯವಿರುವ ಆರ್ಥಿಕ ಸಹಕಾರವನ್ನು ನೀಡಲು ಸರ್ಕಾರ ಬದ್ಧವಾಗಿದೆ' ಎಂದ ಅವರು, `ಕನ್ನಡ ಮಾಧ್ಯಮದಲ್ಲಿ ಕಲಿತವರೆಲ್ಲರಿಗೂ ಇಂಗ್ಲಿಷ್ ಮಾಧ್ಯಮದಲ್ಲಿ ಸಂವಹನ ನಡೆಸಲು ಸಾಧ್ಯವಿದೆ. ಹಾಗಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯುವುದರಿಂದ ಉದ್ಯೋಗ ಪಡೆಯಲು ಯಾವುದೇ ತೊಂದೆಯಾಗದು' ಎಂದು ಅಭಿಪ್ರಾಯಪಟ್ಟರು.<br /> <br /> ಸಾಹಿತಿ ಡಾ.ಆರ್.ಕೆ.ನಲ್ಲೂರು ಪ್ರಸಾದ್, `ಪರಿಷತ್ತಿನಲ್ಲಿ ರೂ 15 ಮೌಲ್ಯದ ದತ್ತಿಯಿಂದ ರೂ 7ಲಕ್ಷ ಮೊತ್ತದ ದತ್ತಿಯಿದೆ. ಲಾಬಿ ಇಲ್ಲದೇ ಪ್ರಶಸ್ತಿ ನೀಡುವುದೇ ಈ ಸಂಸ್ಥೆಯ ಹೆಗ್ಗಳಿಕೆ ಮತ್ತು ಶಕ್ತಿ' ಎಂದು ತಿಳಿಸಿದರು.<br /> <br /> ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಾಹಿತಿ ಕೃಷ್ಣಮೂರ್ತಿ ಹನೂರು ಅವರು, `ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆ ನಶಿಸಿರುತ್ತಿರುವುದು ಆತಂಕದ ವಿಚಾರ. ಆದರೆ ಇದರ ನಡುವೆಯು ಸಾಹಿತ್ಯ ಪರಿಷತ್ತು ಕನ್ನಡಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಉತ್ತಮ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿರುವುದು ಸಂತೋಷದ ತಂದಿದೆ' ಎಂದು ತಿಳಿಸಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>