<p><strong>ಮಡಿಕೇರಿ: </strong>ಕಸ್ತೂರಿರಂಗನ್ ಸಮಿತಿ ಗುರುತಿಸಿರುವ ಪರಿಸರ ಸೂಕ್ಷ್ಮವಲಯ ವ್ಯಾಪ್ತಿಯಿಂದ ಕೊಡಗಿನ 55 ಗ್ರಾಮಗಳನ್ನು ಕೈ ಬಿಡುವಂತೆ ವಿಧಾನ ಪರಿಷತ್ ಮಾಜಿ ಸದಸ್ಯಎ.ಕೆ. ಸುಬ್ಬಯ್ಯ ಒತ್ತಾಯಿಸಿದರು.<br /> <br /> ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವಸತಿ ಇರುವ ಗ್ರಾಮಗಳು ಹಾಗೂ ಖಾಸಗಿ ಜಮೀನುಗಳನ್ನು ಪರಿಸರ ಸೂಕ್ಷ್ಮವಲಯ ವ್ಯಾಪ್ತಿಯಿಂದ ಕೈಬಿಡಬೇಕು ಎಂದು ಅಭಿಪ್ರಾಯಪಟ್ಟರು.<br /> <br /> ಪಶ್ಚಿಮಘಟ್ಟ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶವನ್ನು ಕಸ್ತೂರಿ ರಂಗನ್ ಸಮಿತಿಯು ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಿದೆ. ಈ ಪ್ರದೇಶದಲ್ಲಿ ಗಣಿಗಾರಿಕೆ, ಆಸ್ಪತ್ರೆ ತೆರೆಯದಂತೆ ಹಾಗೂ ಕೃಷಿಯಲ್ಲಿ ರಸಾಯನಿಕ ಪದಾರ್ಥ ಬಳಸದಂತೆ ನಿರ್ಬಂಧ ಹೇರಲಾಗಿದೆ. ವರದಿಯ ಶಿಫಾರಸು ಜಾರಿಗೆ ಬಂದರೆ ಜನಜೀವನ ಅಸ್ತವ್ಯಸ್ತಗೊಳ್ಳಲಿದೆ. ಹಾಗಾಗಿ, ಜನವಸತಿ ಇರುವ ಗ್ರಾಮಗಳನ್ನು ಹಾಗೂ ಖಾಸಗಿ ಜಮೀನುಗಳನ್ನು ಪರಿಸರ ಸೂಕ್ಷ್ಮವಲಯದಿಂದ ಕೈಬಿಡಬೇಕು ಎಂದು ಹೇಳಿದರು.<br /> <br /> ಸಹಜವಾಗಿ ಬೆಳೆದಿರುವ ಅರಣ್ಯ ಪ್ರದೇಶವನ್ನು (ಅರಣ್ಯ ಕಾಯ್ದೆಗಳು ಜಾರಿಯಲ್ಲಿರುವಂತಹ ಪ್ರದೇಶ) ‘ನ್ಯಾಚುರಲ್ ಲ್ಯಾಂಡ್ಸ್ಕೇಪ್’ ಎಂದೂ ಹಾಗೂ ಖಾಸಗಿ ಜಾಗಗಳನ್ನು ‘ಕಲ್ಚರಲ್ ಲ್ಯಾಂಡ್ಸ್ಕೇಪ್’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.<br /> <br /> ಇವೆರಡೂ ಪ್ರದೇಶವನ್ನು ಸ್ಪಷ್ಟವಾಗಿ ಗುರುತಿಸಬೇಕು ಹಾಗೂ ‘ಕಲ್ಚರಲ್ ಲ್ಯಾಂಡ್ಸ್ಕೇಪ್’ ಪ್ರದೇಶವನ್ನು ಪರಿಸರ ಸೂಕ್ಷ್ಮವಲಯದ ವ್ಯಾಪ್ತಿಯಿಂದ ಕೈಬಿಡಬೇಕು ಎಂದು ಮನವಿ ಮಾಡಿದರು.<br /> <br /> ಈ ವಿಷಯದಲ್ಲಿ ಈಗಾಗಲೇ ಕೇರಳ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ, ಅಲ್ಲಿರುವ ‘ಕಲ್ಚರಲ್ ಲ್ಯಾಂಡ್ಸ್ಕೇಪ್’ ಪ್ರದೇಶವನ್ನು ಸೂಕ್ಷ್ಮಪರಿಸರ ವಲಯದಿಂದ ವಿನಾಯಿತಿ ಪಡೆದುಕೊಂಡಿದೆ. ಇದೇ ಕ್ರಮವನ್ನು ಕರ್ನಾಟಕದ ಸರ್ಕಾರ ಕೂಡ ಮಾಡಬೇಕಾಗಿದೆ ಎಂದರು.<br /> ಸಮಿತಿಯ ವರದಿಯನ್ನು ಸ್ವೀಕರಿಸಿರುವ ಕೇಂದ್ರ ಪರಿಸರ ಸಚಿವಾಲಯವು ಈಗಾಗಲೇ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ವರದಿಯ ಬಗ್ಗೆ ಅಭಿಪ್ರಾಯ ತಿಳಿಸುವಂತೆ ರಾಜ್ಯ ಸರ್ಕಾರಗಳಿಗೆ 60 ದಿನಗಳ ಕಾಲಾವಕಾಶ ಕೂಡ ನೀಡಿದೆ.<br /> <br /> ಈ ಅವಕಾಶವನ್ನು ರಾಜ್ಯ ಸರ್ಕಾರ ಉಪಯೋಗಿಸಿಕೊಂಡು, ತನ್ನ ವಾದವನ್ನು ಮಂಡಿಸಬೇಕಾಗಿದೆ ಎಂದು ಹೇಳಿದರು.<br /> <br /> <strong>ಏನಿದು ವರದಿ?</strong><br /> ಕರ್ನಾಟಕ, ಕೇರಳ, ತಮಿಳುನಾಡು, ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಲ್ಲಿ 1,600 ಕಿ.ಮೀ ಉದ್ದದಷ್ಟು ಪಶ್ಚಿಮಘಟ್ಟ ಹರಡಿಕೊಂಡಿದೆ. ಇಲ್ಲಿರುವ ಜೀವವೈವಿಧ್ಯ ಸಂರಕ್ಷಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಕಸ್ತೂರಿರಂಗನ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಸಮಿತಿಯು 6 ರಾಜ್ಯಗಳ 59,940 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮವಲಯ ಎಂದು ಗುರುತಿಸಿತ್ತು. ಇದರಲ್ಲಿ ಕರ್ನಾಟಕದ 1,550 ಗ್ರಾಮಗಳು ಕೂಡ ಸೇರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಕಸ್ತೂರಿರಂಗನ್ ಸಮಿತಿ ಗುರುತಿಸಿರುವ ಪರಿಸರ ಸೂಕ್ಷ್ಮವಲಯ ವ್ಯಾಪ್ತಿಯಿಂದ ಕೊಡಗಿನ 55 ಗ್ರಾಮಗಳನ್ನು ಕೈ ಬಿಡುವಂತೆ ವಿಧಾನ ಪರಿಷತ್ ಮಾಜಿ ಸದಸ್ಯಎ.ಕೆ. ಸುಬ್ಬಯ್ಯ ಒತ್ತಾಯಿಸಿದರು.<br /> <br /> ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವಸತಿ ಇರುವ ಗ್ರಾಮಗಳು ಹಾಗೂ ಖಾಸಗಿ ಜಮೀನುಗಳನ್ನು ಪರಿಸರ ಸೂಕ್ಷ್ಮವಲಯ ವ್ಯಾಪ್ತಿಯಿಂದ ಕೈಬಿಡಬೇಕು ಎಂದು ಅಭಿಪ್ರಾಯಪಟ್ಟರು.<br /> <br /> ಪಶ್ಚಿಮಘಟ್ಟ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶವನ್ನು ಕಸ್ತೂರಿ ರಂಗನ್ ಸಮಿತಿಯು ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಿದೆ. ಈ ಪ್ರದೇಶದಲ್ಲಿ ಗಣಿಗಾರಿಕೆ, ಆಸ್ಪತ್ರೆ ತೆರೆಯದಂತೆ ಹಾಗೂ ಕೃಷಿಯಲ್ಲಿ ರಸಾಯನಿಕ ಪದಾರ್ಥ ಬಳಸದಂತೆ ನಿರ್ಬಂಧ ಹೇರಲಾಗಿದೆ. ವರದಿಯ ಶಿಫಾರಸು ಜಾರಿಗೆ ಬಂದರೆ ಜನಜೀವನ ಅಸ್ತವ್ಯಸ್ತಗೊಳ್ಳಲಿದೆ. ಹಾಗಾಗಿ, ಜನವಸತಿ ಇರುವ ಗ್ರಾಮಗಳನ್ನು ಹಾಗೂ ಖಾಸಗಿ ಜಮೀನುಗಳನ್ನು ಪರಿಸರ ಸೂಕ್ಷ್ಮವಲಯದಿಂದ ಕೈಬಿಡಬೇಕು ಎಂದು ಹೇಳಿದರು.<br /> <br /> ಸಹಜವಾಗಿ ಬೆಳೆದಿರುವ ಅರಣ್ಯ ಪ್ರದೇಶವನ್ನು (ಅರಣ್ಯ ಕಾಯ್ದೆಗಳು ಜಾರಿಯಲ್ಲಿರುವಂತಹ ಪ್ರದೇಶ) ‘ನ್ಯಾಚುರಲ್ ಲ್ಯಾಂಡ್ಸ್ಕೇಪ್’ ಎಂದೂ ಹಾಗೂ ಖಾಸಗಿ ಜಾಗಗಳನ್ನು ‘ಕಲ್ಚರಲ್ ಲ್ಯಾಂಡ್ಸ್ಕೇಪ್’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.<br /> <br /> ಇವೆರಡೂ ಪ್ರದೇಶವನ್ನು ಸ್ಪಷ್ಟವಾಗಿ ಗುರುತಿಸಬೇಕು ಹಾಗೂ ‘ಕಲ್ಚರಲ್ ಲ್ಯಾಂಡ್ಸ್ಕೇಪ್’ ಪ್ರದೇಶವನ್ನು ಪರಿಸರ ಸೂಕ್ಷ್ಮವಲಯದ ವ್ಯಾಪ್ತಿಯಿಂದ ಕೈಬಿಡಬೇಕು ಎಂದು ಮನವಿ ಮಾಡಿದರು.<br /> <br /> ಈ ವಿಷಯದಲ್ಲಿ ಈಗಾಗಲೇ ಕೇರಳ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ, ಅಲ್ಲಿರುವ ‘ಕಲ್ಚರಲ್ ಲ್ಯಾಂಡ್ಸ್ಕೇಪ್’ ಪ್ರದೇಶವನ್ನು ಸೂಕ್ಷ್ಮಪರಿಸರ ವಲಯದಿಂದ ವಿನಾಯಿತಿ ಪಡೆದುಕೊಂಡಿದೆ. ಇದೇ ಕ್ರಮವನ್ನು ಕರ್ನಾಟಕದ ಸರ್ಕಾರ ಕೂಡ ಮಾಡಬೇಕಾಗಿದೆ ಎಂದರು.<br /> ಸಮಿತಿಯ ವರದಿಯನ್ನು ಸ್ವೀಕರಿಸಿರುವ ಕೇಂದ್ರ ಪರಿಸರ ಸಚಿವಾಲಯವು ಈಗಾಗಲೇ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ವರದಿಯ ಬಗ್ಗೆ ಅಭಿಪ್ರಾಯ ತಿಳಿಸುವಂತೆ ರಾಜ್ಯ ಸರ್ಕಾರಗಳಿಗೆ 60 ದಿನಗಳ ಕಾಲಾವಕಾಶ ಕೂಡ ನೀಡಿದೆ.<br /> <br /> ಈ ಅವಕಾಶವನ್ನು ರಾಜ್ಯ ಸರ್ಕಾರ ಉಪಯೋಗಿಸಿಕೊಂಡು, ತನ್ನ ವಾದವನ್ನು ಮಂಡಿಸಬೇಕಾಗಿದೆ ಎಂದು ಹೇಳಿದರು.<br /> <br /> <strong>ಏನಿದು ವರದಿ?</strong><br /> ಕರ್ನಾಟಕ, ಕೇರಳ, ತಮಿಳುನಾಡು, ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಲ್ಲಿ 1,600 ಕಿ.ಮೀ ಉದ್ದದಷ್ಟು ಪಶ್ಚಿಮಘಟ್ಟ ಹರಡಿಕೊಂಡಿದೆ. ಇಲ್ಲಿರುವ ಜೀವವೈವಿಧ್ಯ ಸಂರಕ್ಷಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಕಸ್ತೂರಿರಂಗನ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಸಮಿತಿಯು 6 ರಾಜ್ಯಗಳ 59,940 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮವಲಯ ಎಂದು ಗುರುತಿಸಿತ್ತು. ಇದರಲ್ಲಿ ಕರ್ನಾಟಕದ 1,550 ಗ್ರಾಮಗಳು ಕೂಡ ಸೇರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>