<p><strong>ನವದೆಹಲಿ (ಪಿಟಿಐ): </strong>ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಬಗ್ಗೆ ಮುನಿಸಿಕೊಂಡಿರುವ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ಮಂಗಳವಾರ ಭೇಟಿ ಮಾಡಿದರು. ಕಳೆದ ವಾರದ ಬೆಳವಣಿಗೆಯಿಂದ ಉಂಟಾಗಿರುವ ಕಹಿಯನ್ನು ಮರೆಯುವಂತೆ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.<br /> <br /> ಮೋದಿ ಅವರಿಗೆ ಪಕ್ಷದ ಚುನಾವಣಾ ಪ್ರಚಾರ ಸಮಿತಿ ನೇತೃತ್ವ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಅಡ್ವಾಣಿ ಪಕ್ಷದ ಪ್ರಮುಖ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ನಂತರ ಆರ್ಎಸ್ಎಸ್ ಮುಖ್ಯಸ್ಥರ ಸಂಧಾನದಿಂದ ತಮ್ಮ ನಿಲುವನ್ನು ಬದಲಿಸಿದರು.<br /> <br /> ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಮೋದಿ ಅವರು ನವದೆಹಲಿಗೆ ಆಗಮಿಸಿದರು. ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಅವರು, 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು.<br /> <br /> `ಈ ಭೇಟಿ ಉತ್ತಮ ಬೆಳೆವಣಿಗೆ' ಎಂದು ಅಡ್ವಾಣಿ ಹೇಳಿದ್ದಾರೆಂದು ಅವರ ಆಪ್ತ ಮೂಲಗಳು ತಿಳಿಸಿವೆ.ಪಕ್ಷದ ಆಂತರಿಕ ಮತ್ತು ಎನ್ಡಿಎ ಮೈತ್ರಿ ಕೂಟದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಇಬ್ಬರು ಮುಖಂಡರು ಚರ್ಚಿಸಿದ್ದಾರೆಂದು ಮೂಲಗಳು ಹೇಳಿವೆ.<br /> <br /> `ತಮ್ಮ ಬಗ್ಗೆ ಮುನಿಸಿಕೊಂಡಿದ್ದ ಅಡ್ವಾಣಿ ಅವರನ್ನು ಸಮಾಧಾನ ಪಡಿಸುವ ಸಲುವಾಗಿಯೇ ಅವರನ್ನು ಮೋದಿ ಭೇಟಿ ಮಾಡಿದ್ದರೆ' ಎಂಬ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ವಕ್ತಾರ ಸುಧಾನ್ಷು ತ್ರಿವೇದಿ, `ಅವರಿಬ್ಬರ ಮಧ್ಯೆ ಯಾವುದೇ ಅಸಮಾಧಾನ ಇಲ್ಲ. ಆಕ್ಷೇಪವೂ ಇಲ್ಲ. ಅಡ್ವಾಣಿ ಅವರು ಪಕ್ಷದ ಹಿರಿಯ ನಾಯಕ ಅವರನ್ನು ಪಕ್ಷದ ಮುಖಂಡರು ಭೇಟಿಯಾಗುವುದು ಸರ್ವೇಸಾಮಾನ್ಯ' ಎಂದರು.<br /> <br /> `ಮೋದಿ ಅವರನ್ನು ಚುನಾವಣಾ ಪ್ರಚಾರ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವುದಕ್ಕೂ ಮುನ್ನ ಈ ಕುರಿತು ಪಕ್ಷದಲ್ಲಿ ವಿವರವಾಗಿ ಚರ್ಚಿಸಲಾಯಿತು. ನಂತರವಷ್ಟೆ ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಯಲ್ಲಿ ಈ ಘೋಷಣೆ ಮಾಡಲಾಯಿತು' ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ರಾಜಕೀಯ ಸಲಹೆಗಾರರೂ ಆಗಿರುವ ತ್ರಿವೇದಿ ಹೇಳಿದರು.<br /> <br /> <strong>ಪ್ರಚಾರ ಸಮಿತಿ ಮೊದಲ ಸಭೆ:</strong> ಚುನಾವಣಾ ಪ್ರಚಾರ ಸಮಿತಿಯ ಸದಸ್ಯರೂ ಆಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಮಿತಿ ಅಧ್ಯಕ್ಷರಾದ ಮೋದಿ ಸಭೆ ನಡೆಸಿದರು. ಮುಂದಿನ ಏಪ್ರಿಲ್- ಮೇ ಒಳಗೆ ನಡೆಯಲಿರುವ ಲೋಕಸಭಾ ಚುನಾವಣೆ ಮತ್ತು ಆರು ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ಚರ್ಚಿಸಿದರು ಎಂದು ಮೂಲಗಳು ಹೇಳಿವೆ.<br /> <br /> <strong>ಅಟಲ್, ಜೋಷಿ ಭೇಟಿ: </strong>ಮಾಜಿ ಪ್ರಧಾನಿ ಮತ್ತು ಪಕ್ಷದ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸಕ್ಕೂ ಭೇಟಿ ನೀಡಿದ್ದರು.<br /> ಇದಕ್ಕೂ ಮೊದಲ ಪಕ್ಷದ ಹಿರಿಯ ಮುಖಂಡ ಮುರಳಿ ಮನೋಹರ ಜೋಷಿ ಅವರನ್ನು ಮೋದಿ ಭೇಟಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೋಷಿ, `ಚುನಾವಣಾ ಪ್ರಚಾರದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದಕ್ಕೆ ಅವರು ಕೃತಜ್ಞತೆ ಹೇಳಲು ಬಂದಿದ್ದರು' ಎಂದರು.</p>.<p><strong>ಅಯೋಧ್ಯೆ ಭೇಟಿ ರದ್ದು<br /> ಅಹಮದಾಬಾದ್ ವರದಿ: </strong>ನರೇಂದ್ರ ಮೋದಿ ಅವರು ಅಯೋಧ್ಯೆ ಭೇಟಿಯನ್ನು ರದ್ದು ಮಾಡಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ಕಚೇರಿ ಮೂಲಗಳು ಹೇಳಿವೆ. ಜೆಡಿಯು ಮೈತ್ರಿ ಮುರಿದಿರುವ ಹಿನ್ನೆಲೆಯಲ್ಲಿ ಮತ್ತೊಂದು ವಿವಾದಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕಾಗಿ ಅವರು ಅಯೋಧ್ಯೆ ಭೇಟಿಯನ್ನು ರದ್ದು ಮಾಡಿದ್ದಾರೆ ಎನ್ನಲಾಗಿದೆ.<br /> <br /> ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಅವರ 75ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೋದಿ ಅವರು ಅಯೋಧ್ಯೆಗೆ ಭೇಟಿ ನೀಡಬೇಕಿತ್ತು.<br /> <br /> ಯೋಜನಾ ವೆಚ್ಚಕ್ಕೆ ಒಪ್ಪಿಗೆ: ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ಸಿಂಗ್ ಅಹ್ಲುವಾಲಿಯಾ ಅವರನ್ನು ಭೇಟಿ ಮಾಡಿದ ಮೋದಿ, ಪ್ರಸಕ್ತ ಸಾಲಿಗೆ ರೂ 59,000 ಕೋಟಿ ಮೊತ್ತದ ಯೋಜನಾ ವೆಚ್ಚಕ್ಕೆ ಒಪ್ಪಿಗೆ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಬಗ್ಗೆ ಮುನಿಸಿಕೊಂಡಿರುವ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ಮಂಗಳವಾರ ಭೇಟಿ ಮಾಡಿದರು. ಕಳೆದ ವಾರದ ಬೆಳವಣಿಗೆಯಿಂದ ಉಂಟಾಗಿರುವ ಕಹಿಯನ್ನು ಮರೆಯುವಂತೆ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.<br /> <br /> ಮೋದಿ ಅವರಿಗೆ ಪಕ್ಷದ ಚುನಾವಣಾ ಪ್ರಚಾರ ಸಮಿತಿ ನೇತೃತ್ವ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಅಡ್ವಾಣಿ ಪಕ್ಷದ ಪ್ರಮುಖ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ನಂತರ ಆರ್ಎಸ್ಎಸ್ ಮುಖ್ಯಸ್ಥರ ಸಂಧಾನದಿಂದ ತಮ್ಮ ನಿಲುವನ್ನು ಬದಲಿಸಿದರು.<br /> <br /> ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಮೋದಿ ಅವರು ನವದೆಹಲಿಗೆ ಆಗಮಿಸಿದರು. ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಅವರು, 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು.<br /> <br /> `ಈ ಭೇಟಿ ಉತ್ತಮ ಬೆಳೆವಣಿಗೆ' ಎಂದು ಅಡ್ವಾಣಿ ಹೇಳಿದ್ದಾರೆಂದು ಅವರ ಆಪ್ತ ಮೂಲಗಳು ತಿಳಿಸಿವೆ.ಪಕ್ಷದ ಆಂತರಿಕ ಮತ್ತು ಎನ್ಡಿಎ ಮೈತ್ರಿ ಕೂಟದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಇಬ್ಬರು ಮುಖಂಡರು ಚರ್ಚಿಸಿದ್ದಾರೆಂದು ಮೂಲಗಳು ಹೇಳಿವೆ.<br /> <br /> `ತಮ್ಮ ಬಗ್ಗೆ ಮುನಿಸಿಕೊಂಡಿದ್ದ ಅಡ್ವಾಣಿ ಅವರನ್ನು ಸಮಾಧಾನ ಪಡಿಸುವ ಸಲುವಾಗಿಯೇ ಅವರನ್ನು ಮೋದಿ ಭೇಟಿ ಮಾಡಿದ್ದರೆ' ಎಂಬ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ವಕ್ತಾರ ಸುಧಾನ್ಷು ತ್ರಿವೇದಿ, `ಅವರಿಬ್ಬರ ಮಧ್ಯೆ ಯಾವುದೇ ಅಸಮಾಧಾನ ಇಲ್ಲ. ಆಕ್ಷೇಪವೂ ಇಲ್ಲ. ಅಡ್ವಾಣಿ ಅವರು ಪಕ್ಷದ ಹಿರಿಯ ನಾಯಕ ಅವರನ್ನು ಪಕ್ಷದ ಮುಖಂಡರು ಭೇಟಿಯಾಗುವುದು ಸರ್ವೇಸಾಮಾನ್ಯ' ಎಂದರು.<br /> <br /> `ಮೋದಿ ಅವರನ್ನು ಚುನಾವಣಾ ಪ್ರಚಾರ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವುದಕ್ಕೂ ಮುನ್ನ ಈ ಕುರಿತು ಪಕ್ಷದಲ್ಲಿ ವಿವರವಾಗಿ ಚರ್ಚಿಸಲಾಯಿತು. ನಂತರವಷ್ಟೆ ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಯಲ್ಲಿ ಈ ಘೋಷಣೆ ಮಾಡಲಾಯಿತು' ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ರಾಜಕೀಯ ಸಲಹೆಗಾರರೂ ಆಗಿರುವ ತ್ರಿವೇದಿ ಹೇಳಿದರು.<br /> <br /> <strong>ಪ್ರಚಾರ ಸಮಿತಿ ಮೊದಲ ಸಭೆ:</strong> ಚುನಾವಣಾ ಪ್ರಚಾರ ಸಮಿತಿಯ ಸದಸ್ಯರೂ ಆಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಮಿತಿ ಅಧ್ಯಕ್ಷರಾದ ಮೋದಿ ಸಭೆ ನಡೆಸಿದರು. ಮುಂದಿನ ಏಪ್ರಿಲ್- ಮೇ ಒಳಗೆ ನಡೆಯಲಿರುವ ಲೋಕಸಭಾ ಚುನಾವಣೆ ಮತ್ತು ಆರು ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ಚರ್ಚಿಸಿದರು ಎಂದು ಮೂಲಗಳು ಹೇಳಿವೆ.<br /> <br /> <strong>ಅಟಲ್, ಜೋಷಿ ಭೇಟಿ: </strong>ಮಾಜಿ ಪ್ರಧಾನಿ ಮತ್ತು ಪಕ್ಷದ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸಕ್ಕೂ ಭೇಟಿ ನೀಡಿದ್ದರು.<br /> ಇದಕ್ಕೂ ಮೊದಲ ಪಕ್ಷದ ಹಿರಿಯ ಮುಖಂಡ ಮುರಳಿ ಮನೋಹರ ಜೋಷಿ ಅವರನ್ನು ಮೋದಿ ಭೇಟಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೋಷಿ, `ಚುನಾವಣಾ ಪ್ರಚಾರದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದಕ್ಕೆ ಅವರು ಕೃತಜ್ಞತೆ ಹೇಳಲು ಬಂದಿದ್ದರು' ಎಂದರು.</p>.<p><strong>ಅಯೋಧ್ಯೆ ಭೇಟಿ ರದ್ದು<br /> ಅಹಮದಾಬಾದ್ ವರದಿ: </strong>ನರೇಂದ್ರ ಮೋದಿ ಅವರು ಅಯೋಧ್ಯೆ ಭೇಟಿಯನ್ನು ರದ್ದು ಮಾಡಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ಕಚೇರಿ ಮೂಲಗಳು ಹೇಳಿವೆ. ಜೆಡಿಯು ಮೈತ್ರಿ ಮುರಿದಿರುವ ಹಿನ್ನೆಲೆಯಲ್ಲಿ ಮತ್ತೊಂದು ವಿವಾದಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕಾಗಿ ಅವರು ಅಯೋಧ್ಯೆ ಭೇಟಿಯನ್ನು ರದ್ದು ಮಾಡಿದ್ದಾರೆ ಎನ್ನಲಾಗಿದೆ.<br /> <br /> ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಅವರ 75ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೋದಿ ಅವರು ಅಯೋಧ್ಯೆಗೆ ಭೇಟಿ ನೀಡಬೇಕಿತ್ತು.<br /> <br /> ಯೋಜನಾ ವೆಚ್ಚಕ್ಕೆ ಒಪ್ಪಿಗೆ: ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ಸಿಂಗ್ ಅಹ್ಲುವಾಲಿಯಾ ಅವರನ್ನು ಭೇಟಿ ಮಾಡಿದ ಮೋದಿ, ಪ್ರಸಕ್ತ ಸಾಲಿಗೆ ರೂ 59,000 ಕೋಟಿ ಮೊತ್ತದ ಯೋಜನಾ ವೆಚ್ಚಕ್ಕೆ ಒಪ್ಪಿಗೆ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>