<p><strong>ಬೆಂಗಳೂರು: </strong>ಚುನಾವಣಾ ತಯಾರಿಯನ್ನು ಮತ್ತಷ್ಟು ಬಿರುಸುಗೊಳಿಸಿರುವ ಕೆಪಿಸಿಸಿ, `ಕಾಂಗ್ರೆಸ್ಗೆ ಬನ್ನಿ- ಬದಲಾವಣೆ ತನ್ನಿ~ ಎಂಬ ರಾಜ್ಯವ್ಯಾಪಿ ಅಭಿಯಾನಕ್ಕೆ ಸಜ್ಜಾಗಿದೆ. ಮತದಾರರನ್ನು ಕಾಂಗ್ರೆಸ್ನತ್ತ ಸೆಳೆಯುವ ಗುರಿ ಹೊಂದಿರುವ ಈ ಅಭಿಯಾನಕ್ಕೆ ಏಪ್ರಿಲ್ 8ರಂದು ಚಾಲನೆ ದೊರೆಯಲಿದ್ದು, ಐದು ತಿಂಗಳ ಕಾಲ ನಡೆಯಲಿದೆ.<br /> <br /> ಶನಿವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ನಿರಂತರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮತ್ತು ಶ್ರೀಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ವಿಫಲವಾದ ಬಿಜೆಪಿ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶ. ಆ ಮೂಲಕ ಜನರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯಲು ಪ್ರಯತ್ನಿಸಲಾಗುವುದು ಎಂದರು.<br /> <br /> ಏ. 8ರಂದು ಮಾಗಡಿ ರಸ್ತೆಯ ಗೊಲ್ಲರಹಟ್ಟಿ ಬಳಿ ಬೃಹತ್ ಸಮಾವೇಶದೊಂದಿಗೆ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಸೆಪ್ಟೆಂಬರ್ನಲ್ಲಿ ಅಭಿಯಾನಕ್ಕೆ ತೆರೆ ಬೀಳಲಿದೆ. ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಅಭಿಯಾನ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರು, ವಿಧಾನಸಭೆ ಮತ್ತು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರು, ಸಂಸದರು, ಶಾಸಕರು, ಪಕ್ಷದ ಹಿರಿಯ ಮುಖಂಡರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಅಭಿಯಾನದಲ್ಲಿ ಪಾಲ್ಗೊಳ್ಳುವರು ಎಂದು ವಿವರಿಸಿದರು.<br /> <br /> ರಾಜ್ಯವನ್ನು ಪ್ರತಿನಿಧಿಸುವ ಎಲ್ಲ ಕೇಂದ್ರ ಸಚಿವರು, ಪಕ್ಷದ ರಾಜ್ಯ ಉಸ್ತುವಾರಿ ಮಧುಸೂದನ ಮಿಸ್ತ್ರಿ, ಶಾಂತರಾಂ ನಾಯ್ಕ, ವಿ.ಹನುಮಂತರಾವ್ ಮೊದಲಾದ ಹಿರಿಯ ಮುಖಂಡರು ಅಭಿಯಾನದಲ್ಲಿ ಪಾಲ್ಗೊಳ್ಳುತ್ತಾರೆ. ಏಪ್ರಿಲ್ 9ರಿಂದ ಲೋಕಸಭಾ ಕ್ಷೇತ್ರವಾರು ಪ್ರವಾಸದ ಮೂಲಕ ಅಭಿಯಾನ ಮುನ್ನಡೆಸಲಾಗುವುದು. ಈ ಅವಧಿಯಲ್ಲಿ ಕಾರ್ಯಕರ್ತರ ಸಭೆ ಮತ್ತು ಬೃಹತ್ ಸಮಾವೇಶಗಳನ್ನು ನಡೆಸಲಾಗುವುದು. ಚುನಾವಣೆಗೆ ಪೂರಕವಾಗಿ ಈ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.<br /> <br /> ಅರ್ಜಿ ಹಾಕಿದರೂ ಪ್ರವೇಶವಿಲ್ಲ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷ ಸೇರಲು ಪ್ರಯತ್ನಿಸುತ್ತಿದ್ದಾರೆ ಎಂಬ ವದಂತಿ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, `ಯಡಿಯೂರಪ್ಪ ಅವರು ಅರ್ಜಿ ಹಾಕಿದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅಂತಹ ಅಗತ್ಯವೂ ನಮ್ಮ ಪಕ್ಷಕ್ಕೆ ಇಲ್ಲ~ ಎಂದರು.<br /> <br /> ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಯಡಿಯೂರಪ್ಪ ವಿರುದ್ಧ ತನಿಖೆ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ನ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ನ್ಯಾಯಾಲಯಕ್ಕೆ ಶಿಫಾರಸು ಮಾಡಿದೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಯಾವುದೇ ವ್ಯಕ್ತಿಗಳ ಒತ್ತಡಕ್ಕೆ ಮಣಿಯಬಾರದು ಎಂದು ಎಂದು ಹೇಳಿದರು.<br /> <br /> `ಸದನದಲ್ಲಿ ಮಾಜಿ ಸಚಿವರು ಬ್ಲೂ ಫಿಲಂ ವೀಕ್ಷಿಸಿದ ಪ್ರಕರಣಕ್ಕೆ ಸಾಕ್ಷ್ಯಾಧಾರಗಳಿದ್ದವು ಎಂಬುದು ಜಗತ್ತಿಗೇ ಗೊತ್ತಿದೆ. ಪ್ರಕರಣದಲ್ಲಿ ಭಾಗಿಯಾದವರೇ ಮಾಧ್ಯಮಗಳ ಎದುರು ಒಪ್ಪಿಕೊಂಡಿದ್ದರು. ಆದರೆ, ಸದನದ ವಿಚಾರಣಾ ಸಮಿತಿಯು ಅವರನ್ನು ಆರೋಪಮುಕ್ತಗೊಳಿಸಿರುವುದು ಆಶ್ಚರ್ಯ ತಂದಿದೆ. ಇಂತಹವರನ್ನು ಜನತೆಯೇ ಶಿಕ್ಷಿಸಬೇಕು~ ಎಂದರು.<br /> <br /> <strong>ಅಭಿನಂದನೆ ಸಲ್ಲಿಕೆ: </strong>ಇತ್ತೀಚೆಗೆ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಯ ಗಳಿಸಿರುವ ಕಾಂಗ್ರೆಸ್ನ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದಿಸಲಾಯಿತು.<br /> <br /> ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕಿ ಮೋಟಮ್ಮ, ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರನ್, ಶಾಸಕ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಜೆ.ಅಲೆಕ್ಸಾಂಡರ್, ಬಿಬಿಎಂಪಿ ವಿರೋಧಪಕ್ಷದ ನಾಯಕ ಎಂ.ಉದಯಶಂಕರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚುನಾವಣಾ ತಯಾರಿಯನ್ನು ಮತ್ತಷ್ಟು ಬಿರುಸುಗೊಳಿಸಿರುವ ಕೆಪಿಸಿಸಿ, `ಕಾಂಗ್ರೆಸ್ಗೆ ಬನ್ನಿ- ಬದಲಾವಣೆ ತನ್ನಿ~ ಎಂಬ ರಾಜ್ಯವ್ಯಾಪಿ ಅಭಿಯಾನಕ್ಕೆ ಸಜ್ಜಾಗಿದೆ. ಮತದಾರರನ್ನು ಕಾಂಗ್ರೆಸ್ನತ್ತ ಸೆಳೆಯುವ ಗುರಿ ಹೊಂದಿರುವ ಈ ಅಭಿಯಾನಕ್ಕೆ ಏಪ್ರಿಲ್ 8ರಂದು ಚಾಲನೆ ದೊರೆಯಲಿದ್ದು, ಐದು ತಿಂಗಳ ಕಾಲ ನಡೆಯಲಿದೆ.<br /> <br /> ಶನಿವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ನಿರಂತರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮತ್ತು ಶ್ರೀಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ವಿಫಲವಾದ ಬಿಜೆಪಿ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶ. ಆ ಮೂಲಕ ಜನರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯಲು ಪ್ರಯತ್ನಿಸಲಾಗುವುದು ಎಂದರು.<br /> <br /> ಏ. 8ರಂದು ಮಾಗಡಿ ರಸ್ತೆಯ ಗೊಲ್ಲರಹಟ್ಟಿ ಬಳಿ ಬೃಹತ್ ಸಮಾವೇಶದೊಂದಿಗೆ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಸೆಪ್ಟೆಂಬರ್ನಲ್ಲಿ ಅಭಿಯಾನಕ್ಕೆ ತೆರೆ ಬೀಳಲಿದೆ. ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಅಭಿಯಾನ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರು, ವಿಧಾನಸಭೆ ಮತ್ತು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರು, ಸಂಸದರು, ಶಾಸಕರು, ಪಕ್ಷದ ಹಿರಿಯ ಮುಖಂಡರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಅಭಿಯಾನದಲ್ಲಿ ಪಾಲ್ಗೊಳ್ಳುವರು ಎಂದು ವಿವರಿಸಿದರು.<br /> <br /> ರಾಜ್ಯವನ್ನು ಪ್ರತಿನಿಧಿಸುವ ಎಲ್ಲ ಕೇಂದ್ರ ಸಚಿವರು, ಪಕ್ಷದ ರಾಜ್ಯ ಉಸ್ತುವಾರಿ ಮಧುಸೂದನ ಮಿಸ್ತ್ರಿ, ಶಾಂತರಾಂ ನಾಯ್ಕ, ವಿ.ಹನುಮಂತರಾವ್ ಮೊದಲಾದ ಹಿರಿಯ ಮುಖಂಡರು ಅಭಿಯಾನದಲ್ಲಿ ಪಾಲ್ಗೊಳ್ಳುತ್ತಾರೆ. ಏಪ್ರಿಲ್ 9ರಿಂದ ಲೋಕಸಭಾ ಕ್ಷೇತ್ರವಾರು ಪ್ರವಾಸದ ಮೂಲಕ ಅಭಿಯಾನ ಮುನ್ನಡೆಸಲಾಗುವುದು. ಈ ಅವಧಿಯಲ್ಲಿ ಕಾರ್ಯಕರ್ತರ ಸಭೆ ಮತ್ತು ಬೃಹತ್ ಸಮಾವೇಶಗಳನ್ನು ನಡೆಸಲಾಗುವುದು. ಚುನಾವಣೆಗೆ ಪೂರಕವಾಗಿ ಈ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.<br /> <br /> ಅರ್ಜಿ ಹಾಕಿದರೂ ಪ್ರವೇಶವಿಲ್ಲ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷ ಸೇರಲು ಪ್ರಯತ್ನಿಸುತ್ತಿದ್ದಾರೆ ಎಂಬ ವದಂತಿ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, `ಯಡಿಯೂರಪ್ಪ ಅವರು ಅರ್ಜಿ ಹಾಕಿದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅಂತಹ ಅಗತ್ಯವೂ ನಮ್ಮ ಪಕ್ಷಕ್ಕೆ ಇಲ್ಲ~ ಎಂದರು.<br /> <br /> ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಯಡಿಯೂರಪ್ಪ ವಿರುದ್ಧ ತನಿಖೆ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ನ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ನ್ಯಾಯಾಲಯಕ್ಕೆ ಶಿಫಾರಸು ಮಾಡಿದೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಯಾವುದೇ ವ್ಯಕ್ತಿಗಳ ಒತ್ತಡಕ್ಕೆ ಮಣಿಯಬಾರದು ಎಂದು ಎಂದು ಹೇಳಿದರು.<br /> <br /> `ಸದನದಲ್ಲಿ ಮಾಜಿ ಸಚಿವರು ಬ್ಲೂ ಫಿಲಂ ವೀಕ್ಷಿಸಿದ ಪ್ರಕರಣಕ್ಕೆ ಸಾಕ್ಷ್ಯಾಧಾರಗಳಿದ್ದವು ಎಂಬುದು ಜಗತ್ತಿಗೇ ಗೊತ್ತಿದೆ. ಪ್ರಕರಣದಲ್ಲಿ ಭಾಗಿಯಾದವರೇ ಮಾಧ್ಯಮಗಳ ಎದುರು ಒಪ್ಪಿಕೊಂಡಿದ್ದರು. ಆದರೆ, ಸದನದ ವಿಚಾರಣಾ ಸಮಿತಿಯು ಅವರನ್ನು ಆರೋಪಮುಕ್ತಗೊಳಿಸಿರುವುದು ಆಶ್ಚರ್ಯ ತಂದಿದೆ. ಇಂತಹವರನ್ನು ಜನತೆಯೇ ಶಿಕ್ಷಿಸಬೇಕು~ ಎಂದರು.<br /> <br /> <strong>ಅಭಿನಂದನೆ ಸಲ್ಲಿಕೆ: </strong>ಇತ್ತೀಚೆಗೆ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಯ ಗಳಿಸಿರುವ ಕಾಂಗ್ರೆಸ್ನ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದಿಸಲಾಯಿತು.<br /> <br /> ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕಿ ಮೋಟಮ್ಮ, ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರನ್, ಶಾಸಕ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಜೆ.ಅಲೆಕ್ಸಾಂಡರ್, ಬಿಬಿಎಂಪಿ ವಿರೋಧಪಕ್ಷದ ನಾಯಕ ಎಂ.ಉದಯಶಂಕರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>