<p><strong>ರಾಯಚೂರು</strong>: ಪಕ್ಷದ ಹಿರಿಯ ಮುಖಂಡರು, ಕೇಂದ್ರ ಮಾಜಿ ಸಚಿವ ಜಾಫರ್ ಷರೀಫ್ ಅವರಿಗೆ ಪಕ್ಷ ಟಿಕೆಟ್ ಈ ಬಾರಿ ಕೊಟ್ಟಿಲ್ಲ. ಹಾಗಂತ ಅದರಿಂದ ಪಕ್ಷದ ಮೇಲೆ ಯಾವುದೇ ತೊಂದರೆ ಆಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ವ್ಯಕ್ತಿಗಿಂತ ಪಕ್ಷದ<br /> ಸಿದ್ಧಾಂತ ಮುಖ್ಯವಾಗಿದೆ.<br /> <br /> ಮುಖ್ಯಮಂತ್ರಿಗಳು ಶರೀಫ್ ಅವರ ಜೊತೆಗೆ ಮಾತುಕತೆ ನಡೆಸಿ ಅಸಮಾಧಾನ ಹೋಗಲಾಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ರಾಜ್ಯ ಅಬಕಾರಿ ಖಾತೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.<br /> <br /> ಬುಧವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು, ಮುಖಂಡರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಲು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಷರೀಫ್ ಅವರಿಗೆ ಟಿಕೆಟ್ ದೊರಕಿಲ್ಲ ಎಂಬ ಕಾರಣಕ್ಕೆ ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್ ಪಕ್ಷದಿಂದ ವಿಭಜನೆ ಆಗುತ್ತದೆ ಎಂಬುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.<br /> <br /> ರಾಜ್ಯದಲ್ಲಿ ಮೋದಿ ಅವರ ಅಲೆ ಎಲ್ಲೂ ಇಲ್ಲ. ಕಾಂಗ್ರೆಸ್ ಪಕ್ಷವು ತನ್ನ ಶಕ್ತಿಯೊಂದಿಗೆ ರಾಜ್ಯದ ಎಲ್ಲ ಸ್ಥಾನ ಗೆಲ್ಲುವ ಆಶಯ ಹೊಂದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಪಕ್ಷದ ಹಿರಿಯ ಮುಖಂಡರು, ಕೇಂದ್ರ ಮಾಜಿ ಸಚಿವ ಜಾಫರ್ ಷರೀಫ್ ಅವರಿಗೆ ಪಕ್ಷ ಟಿಕೆಟ್ ಈ ಬಾರಿ ಕೊಟ್ಟಿಲ್ಲ. ಹಾಗಂತ ಅದರಿಂದ ಪಕ್ಷದ ಮೇಲೆ ಯಾವುದೇ ತೊಂದರೆ ಆಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ವ್ಯಕ್ತಿಗಿಂತ ಪಕ್ಷದ<br /> ಸಿದ್ಧಾಂತ ಮುಖ್ಯವಾಗಿದೆ.<br /> <br /> ಮುಖ್ಯಮಂತ್ರಿಗಳು ಶರೀಫ್ ಅವರ ಜೊತೆಗೆ ಮಾತುಕತೆ ನಡೆಸಿ ಅಸಮಾಧಾನ ಹೋಗಲಾಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ರಾಜ್ಯ ಅಬಕಾರಿ ಖಾತೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.<br /> <br /> ಬುಧವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು, ಮುಖಂಡರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಲು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಷರೀಫ್ ಅವರಿಗೆ ಟಿಕೆಟ್ ದೊರಕಿಲ್ಲ ಎಂಬ ಕಾರಣಕ್ಕೆ ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್ ಪಕ್ಷದಿಂದ ವಿಭಜನೆ ಆಗುತ್ತದೆ ಎಂಬುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.<br /> <br /> ರಾಜ್ಯದಲ್ಲಿ ಮೋದಿ ಅವರ ಅಲೆ ಎಲ್ಲೂ ಇಲ್ಲ. ಕಾಂಗ್ರೆಸ್ ಪಕ್ಷವು ತನ್ನ ಶಕ್ತಿಯೊಂದಿಗೆ ರಾಜ್ಯದ ಎಲ್ಲ ಸ್ಥಾನ ಗೆಲ್ಲುವ ಆಶಯ ಹೊಂದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>