<p><strong>ಬೆಳಗಾವಿ: ‘</strong>ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ಮತ ಕೇಳಲು ಹೊರಟಿರುವ ಬಿಜೆಪಿಗೆ ಮತದಾರರು ಮರಳಾಗುವುದಿಲ್ಲ. ಬದಲಾಗಿ ಅಭಿವೃದ್ಧಿಪರ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.<br /> <br /> ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದ ತಾಲ್ಲೂಕು ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿದ ಅವರು, ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾರರು ಸಾಮಾಜಿಕ ತಳಹದಿಯಲ್ಲಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.<br /> <br /> ಕಾಂಗ್ರೆಸ್ ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ ಮಾತನಾಡಿದರು. ಈ ಸಂದರ್ಭದಲ್ಲಿ ಬಸವರಾಜ ಮೇಳೇದ, ನಾಗೇಶ ದೇಸಾಯಿ, ಅಡಿವೇಶ ಇಟಗಿ, ಉಮೇಶ ಖನಗಾವಿ, ಮಹಾಂತೇಶ ಅಲಹಾಬಾದಿ, ಶಶಿಕಲಾ ಯಲಿಗಾರ, ಉಳವಪ್ಪ ನಂದಿ, ಬಸವರಾಜ ಅರಳೀಕಟ್ಟಿ, ಆನಂದ ಪಾಟೀಲ, ಶ್ರೀಶೈಲ ಸೊಪ್ಪಡ್ಲ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.<br /> <br /> ಎಸ್.ಎಸ್.ಖಾದ್ರಿ, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ರಾಜು ಸೇಠ್, ರಾಜು ಅಂಕಲಗಿ, ಸಿ.ಸಿ.ಪಾಟೀಲ, ಯಲ್ಲಪ್ಪ ಡೊಕೋಳಕರ, ಯುವರಾಜ ಕದಂ, ಬಿ.ಕೆ.ಇಟಗಿ, ಶಿವನಗೌಡ ಪಾಟೀಲ, ಮುಷರಪ್ ಖಾದ್ರಿ, ಎಲ್.ಎಚ್.ಪಾಟೀಲ, ಅಶ್ವಿನಿ ಪಾಟೀಲ, ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ಮತ ಕೇಳಲು ಹೊರಟಿರುವ ಬಿಜೆಪಿಗೆ ಮತದಾರರು ಮರಳಾಗುವುದಿಲ್ಲ. ಬದಲಾಗಿ ಅಭಿವೃದ್ಧಿಪರ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.<br /> <br /> ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದ ತಾಲ್ಲೂಕು ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿದ ಅವರು, ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾರರು ಸಾಮಾಜಿಕ ತಳಹದಿಯಲ್ಲಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.<br /> <br /> ಕಾಂಗ್ರೆಸ್ ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ ಮಾತನಾಡಿದರು. ಈ ಸಂದರ್ಭದಲ್ಲಿ ಬಸವರಾಜ ಮೇಳೇದ, ನಾಗೇಶ ದೇಸಾಯಿ, ಅಡಿವೇಶ ಇಟಗಿ, ಉಮೇಶ ಖನಗಾವಿ, ಮಹಾಂತೇಶ ಅಲಹಾಬಾದಿ, ಶಶಿಕಲಾ ಯಲಿಗಾರ, ಉಳವಪ್ಪ ನಂದಿ, ಬಸವರಾಜ ಅರಳೀಕಟ್ಟಿ, ಆನಂದ ಪಾಟೀಲ, ಶ್ರೀಶೈಲ ಸೊಪ್ಪಡ್ಲ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.<br /> <br /> ಎಸ್.ಎಸ್.ಖಾದ್ರಿ, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ರಾಜು ಸೇಠ್, ರಾಜು ಅಂಕಲಗಿ, ಸಿ.ಸಿ.ಪಾಟೀಲ, ಯಲ್ಲಪ್ಪ ಡೊಕೋಳಕರ, ಯುವರಾಜ ಕದಂ, ಬಿ.ಕೆ.ಇಟಗಿ, ಶಿವನಗೌಡ ಪಾಟೀಲ, ಮುಷರಪ್ ಖಾದ್ರಿ, ಎಲ್.ಎಚ್.ಪಾಟೀಲ, ಅಶ್ವಿನಿ ಪಾಟೀಲ, ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>