<p><strong>ಹೈದರಾಬಾದ್:</strong> ಆಂಧ್ರಪ್ರದೇಶದ ತೆಲಂಗಾಣ ಭಾಗದಲ್ಲಿ ಪ್ರಭಾವ ಹೊಂದಿರುವ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಅವರು ಕಾಂಗ್ರೆಸ್ ಜತೆಗಿನ ಚುನಾವಣೆ ಮೈತ್ರಿ ಸಾಧ್ಯತೆಯನ್ನು ಶನಿವಾರ ತಳ್ಳಿ ಹಾಕಿದ್ದಾರೆ.<br /> <br /> ತೆಲಂಗಾಣ ಭಾಗದ ಜನರ ದಶಕಗಳ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಈಡೇರಿಸುವ ಮೂಲಕ ಚುನಾವಣೆಯಲ್ಲಿ ಲಾಭ ಪಡೆಯುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ಗೆ ಟಿಆರ್ಎಸ್ನ ಈ ನಿರ್ಧಾರದಿಂದ ಭಾರಿ ಹಿನ್ನಡೆಯಾಗಿದೆ.<br /> <br /> ಕಾಂಗ್ರೆಸ್ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಮತ್ತು ರಾವ್ ಮಧ್ಯೆ ಎರಡು ದಿನಗಳಿಂದ ನಡೆದ ಚುನಾವಣಾ ಮೈತ್ರಿ ಮಾತುಕತೆ ಮುರಿದು ಬಿದ್ದಿದೆ.<br /> <br /> ತೆಲಂಗಾಣ ಭವನದಲ್ಲಿ ಶನಿವಾರ ನಡೆದ ಪಕ್ಷದ ಚುನಾವಣಾ ಸಮಿತಿ ಸಭೆಯ ನಂತರ ರಾವ್ ಈ ನಿರ್ಧಾರ ಪ್ರಕಟಿಸಿದರು. ತಮ್ಮ ಪಕ್ಷ ವಿಧಾನಸಭೆ ಮತ್ತು ಲೋಕಸಭೆಯ ಎಲ್ಲ ಕ್ಷೇತ್ರಗಳಿಗೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದರು.<br /> <br /> ಕಾಂಗ್ರೆಸ್ ಜತೆ ಟಿಆರ್ಎಸ್ ವಿಲೀನವನ್ನು ತಿರಸ್ಕರಿಸಿದ್ದ ರಾವ್, 13 ವರ್ಷಗಳ ಹೋರಾಟದ ನಂತರ ತೆಲಂಗಾಣ ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು, ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಧೀನದಲ್ಲಿ ಪಕ್ಷದ ನಾಯಕರು ಚುನಾವಣೆಗೆ ಸ್ಪರ್ಧಿಸುವ ಅಗತ್ಯವೇನಿದೆ ಎಂಬ ನಿಲುವು ತಾಳಿದ್ದಾರೆ.<br /> <br /> ‘ನಮ್ಮ ಶಕ್ತಿ ಏನೆಂದು ದೆಹಲಿಗೆ ತೋರಿಸುತ್ತೇವೆ. ನಾಳೆಯಿಂದ ಕಾಂಗ್ರೆಸ್ ವಿರುದ್ಧದ ನಮ್ಮ ಹೋರಾಟ ಆರಂಭವಾಗಲಿದೆ. ಕಾಂಗ್ರೆಸ್ ಶಾಸಕರು ಮತ್ತು ಸಂಸದರು ಟಿಆರ್ಎಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ’ ಎಂದು ರಾವ್ ತಿಳಿಸಿದರು.<br /> ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಮಾಜಿ ಗೃಹ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಮತ್ತು ಅವರ ಪುತ್ರ ಕಾರ್ತಿಕ್ ರೆಡ್ಡಿ ಕಾಂಗ್ರೆಸ್ ತೊರೆದು ಟಿಆರ್ಎಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.<br /> <br /> ತೆಲಂಗಾಣದ ಒಟ್ಟು 17 ಲೋಕಸಭಾ ಸ್ಥಾನಗಳ ಪೈಕಿ ಟಿಆರ್ಎಸ್ 11 ಸ್ಥಾನಗಳಲ್ಲಿ ಹಾಗೂ 119 ವಿಧಾನಸಭಾ ಕ್ಷೇತ್ರಗಳಲ್ಲಿ 74 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಇತ್ತೀಚೆಗೆ ಖಾಸಗಿ ಸುದ್ದಿವಾಹಿನಿ ಸಮೀಕ್ಷೆಯಲ್ಲಿ ಹೇಳಲಾಗಿತ್ತು.<br /> <br /> ಸದ್ಯದ ಸ್ಥಿತಿ ಪ್ರಕಾರ ಟಿಆರ್ಎಸ್ ಹತ್ತು ಜಿಲ್ಲೆಗಳ ಪೈಕಿ ಆರು ಜಿಲ್ಲೆಗಳಲ್ಲಿ ಪ್ರಭಾವ ಹೊಂದಿದೆ. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ಬಿಜೆಪಿ ಜತೆ ಕೈಜೋಡಿಸುವ ಸಾಧ್ಯತೆ ಇದೆ.<br /> <br /> ಹೀಗಾಗಿ ಟಿಆರ್ಎಸ್ ಸಿಪಿಐ ಮತ್ತು ಎಂಐಎಂ ಜತೆ ಮೈತ್ರಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆಂಧ್ರಪ್ರದೇಶದಲ್ಲಿ ರಾಜಕೀಯ ಪಕ್ಷಗಳ ಹೊಂದಾಣಿಕೆಯ ಚಿತ್ರಣ ಇನ್ನೂ ಸ್ಪಷ್ಟವಾಗಿಲ್ಲ.<br /> <br /> <strong>ಕೊಟ್ಟ ಮಾತಿಗೆ ತಪ್ಪಿದ್ದಾರೆ–ಕಾಂಗ್ರೆಸ್</strong><br /> ಮೈತ್ರಿ ಕುರಿತ ಟಿಆರ್ಎಸ್ ನಿರ್ಧಾರ ಕಾಂಗ್ರೆಸ್ಗೆ ಆಘಾತ ನೀಡಿದೆ. ಚಂದ್ರಶೇಖರ ರಾವ್ ನಿರ್ಧಾರವನ್ನು ಟೀಕಿಸಿರುವ ಕಾಂಗ್ರೆಸ್, ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಆರೋಪಿಸಿದೆ. ಟಿಆರ್ಎಸ್ ಜತೆ ಹೋಗುವ ಬದಲು ಏಕಾಂಗಿಯಾಗಿ ಚುನಾವಣೆ ಎದುರಿಸುವ ಇಂಗಿತವನ್ನು ರಾಜ್ಯ ನಾಯಕತ್ವ ವ್ಯಕ್ತಪಡಿಸಿದೆ.<br /> <br /> ‘ಕಾಂಗ್ರೆಸ್ಗೆ ಟಿಆರ್ಎಸ್ ವಿಲೀನ ಅಥವಾ ಮೈತ್ರಿಯ ಅಗತ್ಯ ಇರಲಿಲ್ಲ. ಟಿಆರ್ಎಸ್ ಮೈತ್ರಿಗೆ ಮುಂದಾಗಿತ್ತು. ಏಕಾಂಗಿಯಾಗಿ ಹೋರಾಡುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ’ ಎಂದು ತೆಲಂಗಾಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪೊನ್ನಲ ಲಕ್ಷ್ಮಯ್ಯ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಆಂಧ್ರಪ್ರದೇಶದ ತೆಲಂಗಾಣ ಭಾಗದಲ್ಲಿ ಪ್ರಭಾವ ಹೊಂದಿರುವ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಅವರು ಕಾಂಗ್ರೆಸ್ ಜತೆಗಿನ ಚುನಾವಣೆ ಮೈತ್ರಿ ಸಾಧ್ಯತೆಯನ್ನು ಶನಿವಾರ ತಳ್ಳಿ ಹಾಕಿದ್ದಾರೆ.<br /> <br /> ತೆಲಂಗಾಣ ಭಾಗದ ಜನರ ದಶಕಗಳ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಈಡೇರಿಸುವ ಮೂಲಕ ಚುನಾವಣೆಯಲ್ಲಿ ಲಾಭ ಪಡೆಯುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ಗೆ ಟಿಆರ್ಎಸ್ನ ಈ ನಿರ್ಧಾರದಿಂದ ಭಾರಿ ಹಿನ್ನಡೆಯಾಗಿದೆ.<br /> <br /> ಕಾಂಗ್ರೆಸ್ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಮತ್ತು ರಾವ್ ಮಧ್ಯೆ ಎರಡು ದಿನಗಳಿಂದ ನಡೆದ ಚುನಾವಣಾ ಮೈತ್ರಿ ಮಾತುಕತೆ ಮುರಿದು ಬಿದ್ದಿದೆ.<br /> <br /> ತೆಲಂಗಾಣ ಭವನದಲ್ಲಿ ಶನಿವಾರ ನಡೆದ ಪಕ್ಷದ ಚುನಾವಣಾ ಸಮಿತಿ ಸಭೆಯ ನಂತರ ರಾವ್ ಈ ನಿರ್ಧಾರ ಪ್ರಕಟಿಸಿದರು. ತಮ್ಮ ಪಕ್ಷ ವಿಧಾನಸಭೆ ಮತ್ತು ಲೋಕಸಭೆಯ ಎಲ್ಲ ಕ್ಷೇತ್ರಗಳಿಗೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದರು.<br /> <br /> ಕಾಂಗ್ರೆಸ್ ಜತೆ ಟಿಆರ್ಎಸ್ ವಿಲೀನವನ್ನು ತಿರಸ್ಕರಿಸಿದ್ದ ರಾವ್, 13 ವರ್ಷಗಳ ಹೋರಾಟದ ನಂತರ ತೆಲಂಗಾಣ ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು, ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಧೀನದಲ್ಲಿ ಪಕ್ಷದ ನಾಯಕರು ಚುನಾವಣೆಗೆ ಸ್ಪರ್ಧಿಸುವ ಅಗತ್ಯವೇನಿದೆ ಎಂಬ ನಿಲುವು ತಾಳಿದ್ದಾರೆ.<br /> <br /> ‘ನಮ್ಮ ಶಕ್ತಿ ಏನೆಂದು ದೆಹಲಿಗೆ ತೋರಿಸುತ್ತೇವೆ. ನಾಳೆಯಿಂದ ಕಾಂಗ್ರೆಸ್ ವಿರುದ್ಧದ ನಮ್ಮ ಹೋರಾಟ ಆರಂಭವಾಗಲಿದೆ. ಕಾಂಗ್ರೆಸ್ ಶಾಸಕರು ಮತ್ತು ಸಂಸದರು ಟಿಆರ್ಎಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ’ ಎಂದು ರಾವ್ ತಿಳಿಸಿದರು.<br /> ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಮಾಜಿ ಗೃಹ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಮತ್ತು ಅವರ ಪುತ್ರ ಕಾರ್ತಿಕ್ ರೆಡ್ಡಿ ಕಾಂಗ್ರೆಸ್ ತೊರೆದು ಟಿಆರ್ಎಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.<br /> <br /> ತೆಲಂಗಾಣದ ಒಟ್ಟು 17 ಲೋಕಸಭಾ ಸ್ಥಾನಗಳ ಪೈಕಿ ಟಿಆರ್ಎಸ್ 11 ಸ್ಥಾನಗಳಲ್ಲಿ ಹಾಗೂ 119 ವಿಧಾನಸಭಾ ಕ್ಷೇತ್ರಗಳಲ್ಲಿ 74 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಇತ್ತೀಚೆಗೆ ಖಾಸಗಿ ಸುದ್ದಿವಾಹಿನಿ ಸಮೀಕ್ಷೆಯಲ್ಲಿ ಹೇಳಲಾಗಿತ್ತು.<br /> <br /> ಸದ್ಯದ ಸ್ಥಿತಿ ಪ್ರಕಾರ ಟಿಆರ್ಎಸ್ ಹತ್ತು ಜಿಲ್ಲೆಗಳ ಪೈಕಿ ಆರು ಜಿಲ್ಲೆಗಳಲ್ಲಿ ಪ್ರಭಾವ ಹೊಂದಿದೆ. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ಬಿಜೆಪಿ ಜತೆ ಕೈಜೋಡಿಸುವ ಸಾಧ್ಯತೆ ಇದೆ.<br /> <br /> ಹೀಗಾಗಿ ಟಿಆರ್ಎಸ್ ಸಿಪಿಐ ಮತ್ತು ಎಂಐಎಂ ಜತೆ ಮೈತ್ರಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆಂಧ್ರಪ್ರದೇಶದಲ್ಲಿ ರಾಜಕೀಯ ಪಕ್ಷಗಳ ಹೊಂದಾಣಿಕೆಯ ಚಿತ್ರಣ ಇನ್ನೂ ಸ್ಪಷ್ಟವಾಗಿಲ್ಲ.<br /> <br /> <strong>ಕೊಟ್ಟ ಮಾತಿಗೆ ತಪ್ಪಿದ್ದಾರೆ–ಕಾಂಗ್ರೆಸ್</strong><br /> ಮೈತ್ರಿ ಕುರಿತ ಟಿಆರ್ಎಸ್ ನಿರ್ಧಾರ ಕಾಂಗ್ರೆಸ್ಗೆ ಆಘಾತ ನೀಡಿದೆ. ಚಂದ್ರಶೇಖರ ರಾವ್ ನಿರ್ಧಾರವನ್ನು ಟೀಕಿಸಿರುವ ಕಾಂಗ್ರೆಸ್, ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಆರೋಪಿಸಿದೆ. ಟಿಆರ್ಎಸ್ ಜತೆ ಹೋಗುವ ಬದಲು ಏಕಾಂಗಿಯಾಗಿ ಚುನಾವಣೆ ಎದುರಿಸುವ ಇಂಗಿತವನ್ನು ರಾಜ್ಯ ನಾಯಕತ್ವ ವ್ಯಕ್ತಪಡಿಸಿದೆ.<br /> <br /> ‘ಕಾಂಗ್ರೆಸ್ಗೆ ಟಿಆರ್ಎಸ್ ವಿಲೀನ ಅಥವಾ ಮೈತ್ರಿಯ ಅಗತ್ಯ ಇರಲಿಲ್ಲ. ಟಿಆರ್ಎಸ್ ಮೈತ್ರಿಗೆ ಮುಂದಾಗಿತ್ತು. ಏಕಾಂಗಿಯಾಗಿ ಹೋರಾಡುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ’ ಎಂದು ತೆಲಂಗಾಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪೊನ್ನಲ ಲಕ್ಷ್ಮಯ್ಯ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>