<p><strong>ಹೈದರಾಬಾದ್ (ಪಿಟಿಐ):</strong> ಸೀಮಾಂಧ್ರದ ಕಾಂಗ್ರೆಸ್ ಮುಖಂಡರು ಪಕ್ಷ ತ್ಯಜಿಸಿ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ವಲಸೆ ಹೋಗುತ್ತಿರುವುದು ಮುಂದುವರಿದಿದೆ.<br /> <br /> ಮಾಜಿ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ಅವರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಸತ್ರುಚರ್ಲ ವಿಜಯರಾಮ್ ಮತ್ತು ಶಾಸಕ ಜನಾರ್ದನ ಥತ್ರಾಜ್ ಭಾನುವಾರ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರ ಸಮ್ಮುಖದಲ್ಲಿ ಆ ಪಕ್ಷ ಸೇರಿದರು.<br /> <br /> ‘ಆಂಧ್ರ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಅನುಭವಿ ನಾಯಕ ನಾಯ್ಡು ಅವರೇ ಸೂಕ್ತ ವ್ಯಕ್ತಿ’ ಎಂದು ಪಕ್ಷ ಸೇರಿದ ಬಳಿಕ ನಾಯಕರು ತಿಳಿಸಿದ್ದಾರೆ.<br /> ಆಂಧ್ರ ಪ್ರದೇಶ ವಿಭಜನೆಯ ತೀರ್ಮಾನ ಕೈಗೊಂಡ ಬಳಿಕ ಕಾಂಗ್ರೆಸ್ನ ಹಲವು ಮುಖಂಡರು ಪಕ್ಷ ತೊರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ):</strong> ಸೀಮಾಂಧ್ರದ ಕಾಂಗ್ರೆಸ್ ಮುಖಂಡರು ಪಕ್ಷ ತ್ಯಜಿಸಿ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ವಲಸೆ ಹೋಗುತ್ತಿರುವುದು ಮುಂದುವರಿದಿದೆ.<br /> <br /> ಮಾಜಿ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ಅವರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಸತ್ರುಚರ್ಲ ವಿಜಯರಾಮ್ ಮತ್ತು ಶಾಸಕ ಜನಾರ್ದನ ಥತ್ರಾಜ್ ಭಾನುವಾರ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರ ಸಮ್ಮುಖದಲ್ಲಿ ಆ ಪಕ್ಷ ಸೇರಿದರು.<br /> <br /> ‘ಆಂಧ್ರ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಅನುಭವಿ ನಾಯಕ ನಾಯ್ಡು ಅವರೇ ಸೂಕ್ತ ವ್ಯಕ್ತಿ’ ಎಂದು ಪಕ್ಷ ಸೇರಿದ ಬಳಿಕ ನಾಯಕರು ತಿಳಿಸಿದ್ದಾರೆ.<br /> ಆಂಧ್ರ ಪ್ರದೇಶ ವಿಭಜನೆಯ ತೀರ್ಮಾನ ಕೈಗೊಂಡ ಬಳಿಕ ಕಾಂಗ್ರೆಸ್ನ ಹಲವು ಮುಖಂಡರು ಪಕ್ಷ ತೊರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>