<p><strong>ಇಂಫಾಲ (ಪಿಟಿಐ):</strong> ಮಣಿಪುರ ಚುನಾವಣಾ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರ ಮೇಲೆ ಕಳೆದ ಹದಿನೈದು ದಿನಗಳಿಂದಲೂ ಬಂಡುಕೋರರು ದಾಳಿ ಮುಂದುವರಿಸಿದ್ದಾರೆ.</p>.<p>ಜನವರಿ 28ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳದಂತೆ ಅಭ್ಯರ್ಥಿಗಳಿಗೆ ಬಂಡುಕೋರರು ಒತ್ತಾಯಿಸಿದ್ದಾರೆ.</p>.<p>ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿನ ಲಂಗಥಾಬಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಬ್ಲ್ಯೂ. ಶಾಮ ಮನೆ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಇದೇ ಜಿಲ್ಲೆಯಲ್ಲಿ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸ್ಫೋಟಕಗಳನ್ನು ಎಸೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>ಆದಾಗ್ಯೂ, ಯಾವುದೇ ಅನಾಹುತ ಸಂಭವಿಸಿಲ್ಲ. ಬಂಡುಕೋರರಿಂದ ಕಾಂಗ್ರೆಸ್ ವಿರೋಧ ಎದುರಿಸುತ್ತಿದ್ದು, ತಮ್ಮ ಕ್ರಾಂತಿಕಾರಿ ಚಳವಳಿಗೆ ಪಕ್ಷ ವಿರೋಧಿಸುತ್ತದೆ ಎಂದು ಬಂಡುಕೋರರು ತಿಳಿದುಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.</p>.<p>ನಿಯಂತ್ರಣ ಕೊಠಡಿಗೆ ಬಿಜೆಪಿ ಮನವಿ: ಮಣಿಪುರ ಅದರಲ್ಲೂ ಮುಖ್ಯಮಂತ್ರಿ ಓ ಇಬೊಬಿ ಸಿಂಗ್ ಅವರ ಎದುರು ತಮ್ಮ ಪಕ್ಷದಿಂದ ಇಂದಿರಾ ಸ್ಪರ್ಧಿಸಿರುವ ಥೌಬಲ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನಿಯಂತ್ರಣ ಕೊಠಡಿ ಸ್ಥಾಪಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ವಕ್ತಾರರು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದ್ದು, ನಿಯಂತ್ರಣ ಕೊಠಡಿ ಸ್ಥಾಪಿಸಿದರೆ ಇದು ದಿನವಿಡೀ ಕಾರ್ಯನಿರ್ವಹಿಸಲಿದೆ. ತಮ್ಮ ಅಭ್ಯರ್ಥಿಗೆ ಕೇಂದ್ರೀಯ ಪಡೆಗಳಿಂದ ಭದ್ರತೆ ದೊರೆಯುತ್ತದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ (ಪಿಟಿಐ):</strong> ಮಣಿಪುರ ಚುನಾವಣಾ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರ ಮೇಲೆ ಕಳೆದ ಹದಿನೈದು ದಿನಗಳಿಂದಲೂ ಬಂಡುಕೋರರು ದಾಳಿ ಮುಂದುವರಿಸಿದ್ದಾರೆ.</p>.<p>ಜನವರಿ 28ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳದಂತೆ ಅಭ್ಯರ್ಥಿಗಳಿಗೆ ಬಂಡುಕೋರರು ಒತ್ತಾಯಿಸಿದ್ದಾರೆ.</p>.<p>ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿನ ಲಂಗಥಾಬಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಬ್ಲ್ಯೂ. ಶಾಮ ಮನೆ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಇದೇ ಜಿಲ್ಲೆಯಲ್ಲಿ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸ್ಫೋಟಕಗಳನ್ನು ಎಸೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>ಆದಾಗ್ಯೂ, ಯಾವುದೇ ಅನಾಹುತ ಸಂಭವಿಸಿಲ್ಲ. ಬಂಡುಕೋರರಿಂದ ಕಾಂಗ್ರೆಸ್ ವಿರೋಧ ಎದುರಿಸುತ್ತಿದ್ದು, ತಮ್ಮ ಕ್ರಾಂತಿಕಾರಿ ಚಳವಳಿಗೆ ಪಕ್ಷ ವಿರೋಧಿಸುತ್ತದೆ ಎಂದು ಬಂಡುಕೋರರು ತಿಳಿದುಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.</p>.<p>ನಿಯಂತ್ರಣ ಕೊಠಡಿಗೆ ಬಿಜೆಪಿ ಮನವಿ: ಮಣಿಪುರ ಅದರಲ್ಲೂ ಮುಖ್ಯಮಂತ್ರಿ ಓ ಇಬೊಬಿ ಸಿಂಗ್ ಅವರ ಎದುರು ತಮ್ಮ ಪಕ್ಷದಿಂದ ಇಂದಿರಾ ಸ್ಪರ್ಧಿಸಿರುವ ಥೌಬಲ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನಿಯಂತ್ರಣ ಕೊಠಡಿ ಸ್ಥಾಪಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ವಕ್ತಾರರು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದ್ದು, ನಿಯಂತ್ರಣ ಕೊಠಡಿ ಸ್ಥಾಪಿಸಿದರೆ ಇದು ದಿನವಿಡೀ ಕಾರ್ಯನಿರ್ವಹಿಸಲಿದೆ. ತಮ್ಮ ಅಭ್ಯರ್ಥಿಗೆ ಕೇಂದ್ರೀಯ ಪಡೆಗಳಿಂದ ಭದ್ರತೆ ದೊರೆಯುತ್ತದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>