<p>ಶ್ರೀರಂಗಪಟ್ಟಣ: ರಾಜ್ಯ ಯುವ ಕಾಂಗ್ರೆಸ್ನ 3 ದಿನಗಳ ‘ಯುವದೃಷ್ಟಿ–2014’ ಖಾಸಗಿ ರೆಸಾರ್ಟ್ನಲ್ಲಿ ಸೋಮವಾರದಿಂದ ಶುರುವಾಗಿದೆ.<br /> <br /> ಯುವ ಕಾಂಗ್ರೆಸ್ನ ರಾಜ್ಯ ಸಮಿತಿ, ಲೋಕಸಭಾ ಕ್ಷೇತ್ರ ಹಾಗೂ ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳಿಗಾಗಿ ಏರ್ಪಡಿಸಿರುವ ಕಾರ್ಯಾಗಾರ ರಾಜ್ಯಾಧ್ಯಕ್ಷ ರಿಜ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.<br /> <br /> ರಾಜ್ಯ ಸಮಿತಿಯ 29 ಪದಾಧಿಕಾರಿಗಳು, ಲೋಕಸಭಾ ಕ್ಷೇತ್ರಗಳ 189 ಪದಾಧಿಕಾರಿಗಳು ಹಾಗೂ ವಿಧಾನಸಭಾ ಕ್ಷೇತ್ರಗಳ 209 ಪದಾಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದಾರೆ.<br /> <br /> ‘ಪಕ್ಷ ಸಂಘಟನೆ, ನಾಯಕತ್ವ ಗುಣ, ಹೊಂದಾಣಿಕೆಯ ಗುಣ ಬೆಳೆಸುವ ಕುರಿತು ಕಾರ್ಯಾಗಾರದಲ್ಲಿ ಯುವ ಸಾರಥಿಗಳಿಗೆ ತರಬೇತಿ ನೀಡಲಾಗುತ್ತದೆ’ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿನಟರಾಜ್ ತಿಳಿಸಿದ್ದಾರೆ.<br /> <br /> ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ತರಬೇತಿ ನೀಡಲು ನವದೆಹಲಿಯ ಜವಾಹರಲಾಲ್ ನೆಹರು ಲೀಡರ್ಶಿಪ್ ಡೆವಲಪ್ಮೆಂಟ್ ಇನ್್ಸಸ್ಟಿಟ್ಯೂಟ್ನ 20 ಮಂದಿ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿದ್ದಾರೆ ಎಂದು ಹೇಳಿದ್ದಾರೆ.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ಕಾರ್ಯಾಗಾರದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಸಲಹೆ ನೀಡಿರುವುದಾಗಿ ತಿಳಿದು ಬಂದಿದೆ.<br /> <br /> ರಾಜ್ಯ ಯುವ ಕಾಂಗ್ರೆಸ್ನ ಉಪಾಧ್ಯಕ್ಷ ವರುಣ್, ಪ್ರಧಾನ ಕಾರ್ಯದರ್ಶಿ ಪ್ರಸನ್ನ, ಜಿಲ್ಲಾಧ್ಯಕ್ಷ ಎಂ.ಆರ್. ಯತಿರಾಜ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ತೇಜಸ್ವಿನಿಗೌಡ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ರಾಜ್ಯ ಯುವ ಕಾಂಗ್ರೆಸ್ನ 3 ದಿನಗಳ ‘ಯುವದೃಷ್ಟಿ–2014’ ಖಾಸಗಿ ರೆಸಾರ್ಟ್ನಲ್ಲಿ ಸೋಮವಾರದಿಂದ ಶುರುವಾಗಿದೆ.<br /> <br /> ಯುವ ಕಾಂಗ್ರೆಸ್ನ ರಾಜ್ಯ ಸಮಿತಿ, ಲೋಕಸಭಾ ಕ್ಷೇತ್ರ ಹಾಗೂ ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳಿಗಾಗಿ ಏರ್ಪಡಿಸಿರುವ ಕಾರ್ಯಾಗಾರ ರಾಜ್ಯಾಧ್ಯಕ್ಷ ರಿಜ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.<br /> <br /> ರಾಜ್ಯ ಸಮಿತಿಯ 29 ಪದಾಧಿಕಾರಿಗಳು, ಲೋಕಸಭಾ ಕ್ಷೇತ್ರಗಳ 189 ಪದಾಧಿಕಾರಿಗಳು ಹಾಗೂ ವಿಧಾನಸಭಾ ಕ್ಷೇತ್ರಗಳ 209 ಪದಾಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದಾರೆ.<br /> <br /> ‘ಪಕ್ಷ ಸಂಘಟನೆ, ನಾಯಕತ್ವ ಗುಣ, ಹೊಂದಾಣಿಕೆಯ ಗುಣ ಬೆಳೆಸುವ ಕುರಿತು ಕಾರ್ಯಾಗಾರದಲ್ಲಿ ಯುವ ಸಾರಥಿಗಳಿಗೆ ತರಬೇತಿ ನೀಡಲಾಗುತ್ತದೆ’ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿನಟರಾಜ್ ತಿಳಿಸಿದ್ದಾರೆ.<br /> <br /> ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ತರಬೇತಿ ನೀಡಲು ನವದೆಹಲಿಯ ಜವಾಹರಲಾಲ್ ನೆಹರು ಲೀಡರ್ಶಿಪ್ ಡೆವಲಪ್ಮೆಂಟ್ ಇನ್್ಸಸ್ಟಿಟ್ಯೂಟ್ನ 20 ಮಂದಿ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿದ್ದಾರೆ ಎಂದು ಹೇಳಿದ್ದಾರೆ.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ಕಾರ್ಯಾಗಾರದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಸಲಹೆ ನೀಡಿರುವುದಾಗಿ ತಿಳಿದು ಬಂದಿದೆ.<br /> <br /> ರಾಜ್ಯ ಯುವ ಕಾಂಗ್ರೆಸ್ನ ಉಪಾಧ್ಯಕ್ಷ ವರುಣ್, ಪ್ರಧಾನ ಕಾರ್ಯದರ್ಶಿ ಪ್ರಸನ್ನ, ಜಿಲ್ಲಾಧ್ಯಕ್ಷ ಎಂ.ಆರ್. ಯತಿರಾಜ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ತೇಜಸ್ವಿನಿಗೌಡ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>