<p>ಮಂಡ್ಯ: ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಪಕ್ಷದ ಸಾಂಸ್ಥಿಕ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು, ಮೊದಲ ಹಂತದಲ್ಲಿ ಮದ್ದೂರು ಮತ್ತು ಮಳವಳ್ಳಿ ತಾಲ್ಲೂಕಿನ ಬೂತ್ ಹಂತದ ಸಮಿತಿಗಳಿಗೆ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಲಿದೆ.<br /> <br /> ಈ ಚುನಾವಣೆಗಳಲ್ಲಿ ಜಯಗಳಿಸಿದವರು ಜಿಲ್ಲಾ ಅಥವಾ ರಾಜ್ಯ ಮಟ್ಟದ ಯುವ ಕಾಂಗ್ರೆಸ್ ಘಟಕಗಳ ಪದಾಧಿಕಾರಿಗಳ ಸ್ಥಾನಗಳಿಗೆ ಸ್ಪರ್ಧಿಸುವ ಅರ್ಹತೆಯನ್ನು ಪಡೆಯಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಅಂದಾಜು 1950 ಬೂತ್ಗಳು ಇವೆ. ತಲಾ ಬೂತ್ಗೆ ಐವರನ್ನು ಆಯ್ಕೆ ಮಾಡಲು ಈಗ ಚುನಾವಣೆ ನಡೆಯುತ್ತಿದೆ.<br /> <br /> ಶುಕ್ರವಾರ ಮದ್ದೂರು ತಾಲ್ಲೂಕಿನ 25 ಮತ್ತು ಮಳವಳ್ಳಿ ತಾಲ್ಲೂಕಿನ 37 ಬೂತ್ಗಳಿಗೆ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಕ್ರಮವಾಗಿ 350 ಮತ್ತು 450 ಮಂದಿ ಸ್ಪರ್ಧೆಯಲ್ಲಿದ್ದಾರೆ. ಮಂಡ್ಯ ತಾಲ್ಲೂಕಿನಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ.<br /> <br /> ಉಳಿದಂತೆ 18 ರಂದು ಮಂಡ್ಯ, ಮೇಲುಕೋಟೆ; 19ರಂದು ಮಂಡ್ಯ ಮತ್ತು ಶ್ರೀರಂಗಪಟ್ಟಣ, 20ರಂದು ನಾಗಮಂಗಲ ಮತ್ತುಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಚುನಾವಣೆ ನಡೆಯಲಿದೆ ಎಂದು ಜಿಲ್ಲೆಯಲ್ಲಿ ಚುನಾವಣಾ ಉಸ್ತುವಾರಿ ಹೊತ್ತಿರುವ ಸಾಜಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಪಕ್ಷದ ಸಾಂಸ್ಥಿಕ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು, ಮೊದಲ ಹಂತದಲ್ಲಿ ಮದ್ದೂರು ಮತ್ತು ಮಳವಳ್ಳಿ ತಾಲ್ಲೂಕಿನ ಬೂತ್ ಹಂತದ ಸಮಿತಿಗಳಿಗೆ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಲಿದೆ.<br /> <br /> ಈ ಚುನಾವಣೆಗಳಲ್ಲಿ ಜಯಗಳಿಸಿದವರು ಜಿಲ್ಲಾ ಅಥವಾ ರಾಜ್ಯ ಮಟ್ಟದ ಯುವ ಕಾಂಗ್ರೆಸ್ ಘಟಕಗಳ ಪದಾಧಿಕಾರಿಗಳ ಸ್ಥಾನಗಳಿಗೆ ಸ್ಪರ್ಧಿಸುವ ಅರ್ಹತೆಯನ್ನು ಪಡೆಯಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಅಂದಾಜು 1950 ಬೂತ್ಗಳು ಇವೆ. ತಲಾ ಬೂತ್ಗೆ ಐವರನ್ನು ಆಯ್ಕೆ ಮಾಡಲು ಈಗ ಚುನಾವಣೆ ನಡೆಯುತ್ತಿದೆ.<br /> <br /> ಶುಕ್ರವಾರ ಮದ್ದೂರು ತಾಲ್ಲೂಕಿನ 25 ಮತ್ತು ಮಳವಳ್ಳಿ ತಾಲ್ಲೂಕಿನ 37 ಬೂತ್ಗಳಿಗೆ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಕ್ರಮವಾಗಿ 350 ಮತ್ತು 450 ಮಂದಿ ಸ್ಪರ್ಧೆಯಲ್ಲಿದ್ದಾರೆ. ಮಂಡ್ಯ ತಾಲ್ಲೂಕಿನಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ.<br /> <br /> ಉಳಿದಂತೆ 18 ರಂದು ಮಂಡ್ಯ, ಮೇಲುಕೋಟೆ; 19ರಂದು ಮಂಡ್ಯ ಮತ್ತು ಶ್ರೀರಂಗಪಟ್ಟಣ, 20ರಂದು ನಾಗಮಂಗಲ ಮತ್ತುಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಚುನಾವಣೆ ನಡೆಯಲಿದೆ ಎಂದು ಜಿಲ್ಲೆಯಲ್ಲಿ ಚುನಾವಣಾ ಉಸ್ತುವಾರಿ ಹೊತ್ತಿರುವ ಸಾಜಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>