<p><strong>ಬೆಂಗಳೂರು:</strong> ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, `ಬಿ.ಎಸ್. ಯಡಿಯೂರಪ್ಪ ಅಧಿಕಾರಾವಧಿಯಲ್ಲಿ ಪ್ರತಿ ರಾತ್ರಿ ಅವರ ನಿವಾಸಕ್ಕೆ ತೆರಳಿ ಡಿನೋಟಿಫಿಕೇಷನ್ ಕಡತಗಳಿಗೆ ಸಹಿ ಮಾಡಿಸಿಕೊಳ್ಳುತ್ತಿದ್ದ ಕಾಂಗ್ರೆಸ್ ಮುಖಂಡರು, ಈಗ ಜೆಡಿಎಸ್ ಸೂಚನೆಯ ಮೇರೆಗೆ ಬಿಜೆಪಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎನ್ನುತ್ತಿದ್ದಾರೆ. ಇವರಿಗೆ ನಾಚಿಕೆಯಾಗಬೇಕು~ ಎಂದು ಟೀಕಿಸಿದರು.<br /> <br /> ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಲಾಗಿದ್ದ ಜೆಡಿಎಸ್ನ `ಯುವ ಚೇತನ ಸಮಾವೇಶ~ದಲ್ಲಿ ಮಾತನಾಡಿದ ಅವರು, `ನಾನು ಯಾವುದೇ ಆರೋಪವನ್ನು ಅಂಕಿ-ಅಂಶಗಳ ಸಮೇತ ಮಾಡಿದ್ದೇನೆ. ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ `ಪಟಾಲಂ~ನಂತೆ ಬಾಲಿಶವಾಗಿ ಮಾತನಾಡಿಲ್ಲ~ ಎಂದು ವ್ಯಂಗ್ಯವಾಡಿದರು.<br /> ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ, `ಮಂಗಳೂರಿನಲ್ಲಿ ನೆಲೆಯಿಲ್ಲದೆ ಚಿಕ್ಕಬಳ್ಳಾಪುರಕ್ಕೆ ಬಂದು, ನಾವು ಮಾಡಿದ ಕೆಲವು ತಪ್ಪುಗಳಿಂದಾಗಿ ಗೆಲುವು ಸಾಧಿಸಿದರು. <br /> <br /> ಮೊಯಿಲಿ ಅವರು ನಮ್ಮ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಮುಖಂಡರೇ ವಿಧಾನಸೌಧದ ಮೂರನೆಯ ಮಹಡಿಯಿಂದ ಅವರನ್ನು ಓಡಿಸಿದ್ದರು~ ಎಂದರು.<br /> `ಎಸ್.ಎಂ. ಕೃಷ್ಣ, ಯಡಿಯೂರಪ್ಪ ಅವರಂತೆ ಜನತೆಯ ಆಶೀರ್ವಾದದಿಂದ ಮುಖ್ಯಮಂತ್ರಿ ಆದವ ನಾನಲ್ಲ. ಆಕಸ್ಮಿಕವಾಗಿ ನಾನು ಮುಖ್ಯಮಂತ್ರಿ ಆದೆ~ ಎಂದ ಅವರು, `ಜೆಡಿಎಸ್ ರೈತರು, ಗ್ರಾಮೀಣ ಪ್ರದೇಶದವರಿಗೆ ಮಾತ್ರ ಸೀಮಿತವಾದ ಪಕ್ಷವಲ್ಲ. ಬೆಂಗಳೂರಿನ ಅಭಿವೃದ್ಧಿಗೂ ಪಕ್ಷ ಅಧಿಕಾರದಲ್ಲಿದ್ದಾಗ ಸಾಕಷ್ಟು ಕೊಡುಗೆ ನೀಡಿದೆ~ ಎಂದು ಹೇಳಿದರು.<br /> <br /> ರಾಜ್ಯದಲ್ಲಿ ರಾಜಕಾರಣಿಗಳು ತಲೆತಗ್ಗಿಸುವಂತಾಗಲು ಯಡಿಯೂರಪ್ಪ ಸರ್ಕಾರವೇ ಕಾರಣ. ಯುವಕರು, ಮಹಿಳೆಯರು, ರೈತರ ಮತ ಪಡೆದು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಜನರ ಕುರಿತು ಕಾಳಜಿಯೇ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಆರೋಪಿಸಿದರು.<br /> <br /> ರಾಜ್ಯದ 23 ಜಿಲ್ಲೆಗಳಲ್ಲಿ ಯುವ ಸಮಾವೇಶ ಆಯೋಜಿಸಲಾಗಿದೆ. ಇನ್ನುಳಿದಿರುವ ಏಳು ಜಿಲ್ಲೆಗಳಲ್ಲಿ ಮುಂದಿನ ಹತ್ತು ದಿನಗಳಲ್ಲಿ ಸಮಾವೇಶ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.<br /> <br /> ನಟಿ ಮಾಳವಿಕಾ ಅವಿನಾಶ್ ಮಾತನಾಡಿ, `ಪಕ್ಷದಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿಸಲು ಶ್ರಮ ವಹಿಸುತ್ತೇನೆ~ ಎಂದರು. ವಿಧಾನ ಪರಿಷತ್ ಸದಸ್ಯ ಇ. ಕೃಷ್ಣಪ್ಪ, ಪಕ್ಷದ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಎಂ.ಎಸ್. ನಾರಾಯಣ ರಾವ್, ಯುವ ಜನತಾದಳದ ಬೆಂಗಳೂರು ಘಟಕದ ಅಧ್ಯಕ್ಷ ಟಿ.ಎನ್. ಹರೀಶ್ಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, `ಬಿ.ಎಸ್. ಯಡಿಯೂರಪ್ಪ ಅಧಿಕಾರಾವಧಿಯಲ್ಲಿ ಪ್ರತಿ ರಾತ್ರಿ ಅವರ ನಿವಾಸಕ್ಕೆ ತೆರಳಿ ಡಿನೋಟಿಫಿಕೇಷನ್ ಕಡತಗಳಿಗೆ ಸಹಿ ಮಾಡಿಸಿಕೊಳ್ಳುತ್ತಿದ್ದ ಕಾಂಗ್ರೆಸ್ ಮುಖಂಡರು, ಈಗ ಜೆಡಿಎಸ್ ಸೂಚನೆಯ ಮೇರೆಗೆ ಬಿಜೆಪಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎನ್ನುತ್ತಿದ್ದಾರೆ. ಇವರಿಗೆ ನಾಚಿಕೆಯಾಗಬೇಕು~ ಎಂದು ಟೀಕಿಸಿದರು.<br /> <br /> ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಲಾಗಿದ್ದ ಜೆಡಿಎಸ್ನ `ಯುವ ಚೇತನ ಸಮಾವೇಶ~ದಲ್ಲಿ ಮಾತನಾಡಿದ ಅವರು, `ನಾನು ಯಾವುದೇ ಆರೋಪವನ್ನು ಅಂಕಿ-ಅಂಶಗಳ ಸಮೇತ ಮಾಡಿದ್ದೇನೆ. ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ `ಪಟಾಲಂ~ನಂತೆ ಬಾಲಿಶವಾಗಿ ಮಾತನಾಡಿಲ್ಲ~ ಎಂದು ವ್ಯಂಗ್ಯವಾಡಿದರು.<br /> ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ, `ಮಂಗಳೂರಿನಲ್ಲಿ ನೆಲೆಯಿಲ್ಲದೆ ಚಿಕ್ಕಬಳ್ಳಾಪುರಕ್ಕೆ ಬಂದು, ನಾವು ಮಾಡಿದ ಕೆಲವು ತಪ್ಪುಗಳಿಂದಾಗಿ ಗೆಲುವು ಸಾಧಿಸಿದರು. <br /> <br /> ಮೊಯಿಲಿ ಅವರು ನಮ್ಮ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಮುಖಂಡರೇ ವಿಧಾನಸೌಧದ ಮೂರನೆಯ ಮಹಡಿಯಿಂದ ಅವರನ್ನು ಓಡಿಸಿದ್ದರು~ ಎಂದರು.<br /> `ಎಸ್.ಎಂ. ಕೃಷ್ಣ, ಯಡಿಯೂರಪ್ಪ ಅವರಂತೆ ಜನತೆಯ ಆಶೀರ್ವಾದದಿಂದ ಮುಖ್ಯಮಂತ್ರಿ ಆದವ ನಾನಲ್ಲ. ಆಕಸ್ಮಿಕವಾಗಿ ನಾನು ಮುಖ್ಯಮಂತ್ರಿ ಆದೆ~ ಎಂದ ಅವರು, `ಜೆಡಿಎಸ್ ರೈತರು, ಗ್ರಾಮೀಣ ಪ್ರದೇಶದವರಿಗೆ ಮಾತ್ರ ಸೀಮಿತವಾದ ಪಕ್ಷವಲ್ಲ. ಬೆಂಗಳೂರಿನ ಅಭಿವೃದ್ಧಿಗೂ ಪಕ್ಷ ಅಧಿಕಾರದಲ್ಲಿದ್ದಾಗ ಸಾಕಷ್ಟು ಕೊಡುಗೆ ನೀಡಿದೆ~ ಎಂದು ಹೇಳಿದರು.<br /> <br /> ರಾಜ್ಯದಲ್ಲಿ ರಾಜಕಾರಣಿಗಳು ತಲೆತಗ್ಗಿಸುವಂತಾಗಲು ಯಡಿಯೂರಪ್ಪ ಸರ್ಕಾರವೇ ಕಾರಣ. ಯುವಕರು, ಮಹಿಳೆಯರು, ರೈತರ ಮತ ಪಡೆದು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಜನರ ಕುರಿತು ಕಾಳಜಿಯೇ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಆರೋಪಿಸಿದರು.<br /> <br /> ರಾಜ್ಯದ 23 ಜಿಲ್ಲೆಗಳಲ್ಲಿ ಯುವ ಸಮಾವೇಶ ಆಯೋಜಿಸಲಾಗಿದೆ. ಇನ್ನುಳಿದಿರುವ ಏಳು ಜಿಲ್ಲೆಗಳಲ್ಲಿ ಮುಂದಿನ ಹತ್ತು ದಿನಗಳಲ್ಲಿ ಸಮಾವೇಶ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.<br /> <br /> ನಟಿ ಮಾಳವಿಕಾ ಅವಿನಾಶ್ ಮಾತನಾಡಿ, `ಪಕ್ಷದಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿಸಲು ಶ್ರಮ ವಹಿಸುತ್ತೇನೆ~ ಎಂದರು. ವಿಧಾನ ಪರಿಷತ್ ಸದಸ್ಯ ಇ. ಕೃಷ್ಣಪ್ಪ, ಪಕ್ಷದ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಎಂ.ಎಸ್. ನಾರಾಯಣ ರಾವ್, ಯುವ ಜನತಾದಳದ ಬೆಂಗಳೂರು ಘಟಕದ ಅಧ್ಯಕ್ಷ ಟಿ.ಎನ್. ಹರೀಶ್ಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>