<p><strong>ಬೆಂಗಳೂರು:</strong> ಹಿಂದಿನ ಸರ್ಕಾರದ ಕಾರ್ಯವೈಖರಿ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಟೀಕಿಸಿರುವುದನ್ನು ಬಿಜೆಪಿ ಉಗ್ರವಾಗಿ ಖಂಡಿಸಿದ್ದು, ಈ ಸಂಬಂಧ ವಿಧಾನಸಭೆ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲು ತೀರ್ಮಾನಿಸಿದೆ.<br /> <br /> ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು.<br /> <br /> `ಕಳೆದ ಕೆಲವು ವರ್ಷಗಳಲ್ಲಿ ಬಯಲಿಗೆ ಬಂದ ಭ್ರಷ್ಟಾಚಾರದ ಹಗರಣಗಳಿಂದಾಗಿ ದೇಶದ ಎದುರು ಕರ್ನಾಟಕ ತಲೆ ತಗ್ಗಿಸುವಂತಾಗಿದೆ' ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಟೀಕಿಸಿರುವುದನ್ನು ಬಿಜೆಪಿ ಖಂಡಿಸಿದೆ.<br /> <br /> ಹಿಂದಿನ ಸರ್ಕಾರಗಳ ಕಾರ್ಯವೈಖರಿಯನ್ನು ಟೀಕೆ ಮಾಡುವುದರ ಮೂಲಕ ರಾಜ್ಯಪಾಲರು ಹೊಸ ಸಂಪ್ರದಾಯಕ್ಕೆ ನಾಂದಿಹಾಡಿದ್ದಾರೆ. ದ್ವೇಷ ರಾಜಕಾರಣ ಇದರಲ್ಲಿ ಕಾಣುತ್ತಿದ್ದು, ಅದರ ವಿರುದ್ಧವೂ ಸದನದಲ್ಲಿ ಪ್ರತಿಭಟಿಸಲು ತೀರ್ಮಾನಿಸಲಾಗಿದೆ ಎಂದು ಜೋಶಿ ತಿಳಿಸಿದರು.<br /> <br /> ಹೊಸ ತಾಲ್ಲೂಕು ರಚನೆ ಸೇರಿದಂತೆ ಇತರ ಪ್ರಮುಖ ನಿರ್ಧಾರಗಳನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ತೆಗೆದುಕೊಳ್ಳಲಾಗಿತ್ತು. ಈಗಿನ ಸರ್ಕಾರ ಆ ಎಲ್ಲ ನಿರ್ಧಾರಗಳನ್ನು ರದ್ದು ಮಾಡಲು ಮುಂದಾಗಿದೆ. ಇದರ ವಿರುದ್ಧವೂ ಹೋರಾಟ ನಡೆಸುವುದಾಗಿ ಅವರು ಹೇಳಿದರು.<br /> <br /> ಪದಾಧಿಕಾರಿಗಳ ಸಭೆ: ಇದೇ 6ರಂದು ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದು, ಅಲ್ಲಿ ಪಕ್ಷದ ಸಾಂಸ್ಥಿಕ ಚುನಾವಣೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.<br /> <br /> ರಾಷ್ಟ್ರೀಯ ಕಾರ್ಯಕಾರಿಣಿ ಇದೇ 7ರಿಂದ 9ರವರೆಗೆ ಗೋವಾದಲ್ಲಿ ನಡೆಯಲಿದೆ. ಅದರ ಬಳಿಕ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುವ ಕುರಿತು ಚರ್ಚಿಸಲಾಗುವುದು ಎಂದರು.<br /> <br /> ವಿಧಾನಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿ ಯಾರನ್ನು ನೇಮಕ ಮಾಡಬೇಕು ಎಂಬುದನ್ನು ಮುಖಂಡರಾದ ಡಿ.ವಿ.ಸದಾನಂದ ಗೌಡ ಮತ್ತು ಜಗದೀಶ ಶೆಟ್ಟರ್ ಅವರು ನಿರ್ಧರಿಸಲಿದ್ದಾರೆ. ಅವರಿಗೆ ಸಭೆ ಅಧಿಕಾರ ನೀಡಿತು ಎಂದರು.<br /> <br /> ಯಡಿಯೂರಪ್ಪ ಅವರನ್ನು ಬಿಜೆಪಿಗೆ ವಾಪಸ್ ಕರೆತರುವ ವದಂತಿ ಬಗ್ಗೆ ಕೇಳಿದಾಗ `ಅಂತಹ ಪ್ರಯತ್ನ ನಡೆದಿಲ್ಲ. ಅದು ಚರ್ಚೆ ಕೂಡ ಆಗಿಲ್ಲ' ಎಂದು ಜೋಶಿ ಸ್ಪಷ್ಟಪಡಿಸಿದರು. <br /> <br /> 4ಬಿಜೆಪಿ ಮುಖಂಡರ ವಿರುದ್ಧ ಶಾಸಕರ ಆಕ್ರೋಶ: ಪುಟ 5</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಿಂದಿನ ಸರ್ಕಾರದ ಕಾರ್ಯವೈಖರಿ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಟೀಕಿಸಿರುವುದನ್ನು ಬಿಜೆಪಿ ಉಗ್ರವಾಗಿ ಖಂಡಿಸಿದ್ದು, ಈ ಸಂಬಂಧ ವಿಧಾನಸಭೆ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲು ತೀರ್ಮಾನಿಸಿದೆ.<br /> <br /> ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು.<br /> <br /> `ಕಳೆದ ಕೆಲವು ವರ್ಷಗಳಲ್ಲಿ ಬಯಲಿಗೆ ಬಂದ ಭ್ರಷ್ಟಾಚಾರದ ಹಗರಣಗಳಿಂದಾಗಿ ದೇಶದ ಎದುರು ಕರ್ನಾಟಕ ತಲೆ ತಗ್ಗಿಸುವಂತಾಗಿದೆ' ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಟೀಕಿಸಿರುವುದನ್ನು ಬಿಜೆಪಿ ಖಂಡಿಸಿದೆ.<br /> <br /> ಹಿಂದಿನ ಸರ್ಕಾರಗಳ ಕಾರ್ಯವೈಖರಿಯನ್ನು ಟೀಕೆ ಮಾಡುವುದರ ಮೂಲಕ ರಾಜ್ಯಪಾಲರು ಹೊಸ ಸಂಪ್ರದಾಯಕ್ಕೆ ನಾಂದಿಹಾಡಿದ್ದಾರೆ. ದ್ವೇಷ ರಾಜಕಾರಣ ಇದರಲ್ಲಿ ಕಾಣುತ್ತಿದ್ದು, ಅದರ ವಿರುದ್ಧವೂ ಸದನದಲ್ಲಿ ಪ್ರತಿಭಟಿಸಲು ತೀರ್ಮಾನಿಸಲಾಗಿದೆ ಎಂದು ಜೋಶಿ ತಿಳಿಸಿದರು.<br /> <br /> ಹೊಸ ತಾಲ್ಲೂಕು ರಚನೆ ಸೇರಿದಂತೆ ಇತರ ಪ್ರಮುಖ ನಿರ್ಧಾರಗಳನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ತೆಗೆದುಕೊಳ್ಳಲಾಗಿತ್ತು. ಈಗಿನ ಸರ್ಕಾರ ಆ ಎಲ್ಲ ನಿರ್ಧಾರಗಳನ್ನು ರದ್ದು ಮಾಡಲು ಮುಂದಾಗಿದೆ. ಇದರ ವಿರುದ್ಧವೂ ಹೋರಾಟ ನಡೆಸುವುದಾಗಿ ಅವರು ಹೇಳಿದರು.<br /> <br /> ಪದಾಧಿಕಾರಿಗಳ ಸಭೆ: ಇದೇ 6ರಂದು ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದು, ಅಲ್ಲಿ ಪಕ್ಷದ ಸಾಂಸ್ಥಿಕ ಚುನಾವಣೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.<br /> <br /> ರಾಷ್ಟ್ರೀಯ ಕಾರ್ಯಕಾರಿಣಿ ಇದೇ 7ರಿಂದ 9ರವರೆಗೆ ಗೋವಾದಲ್ಲಿ ನಡೆಯಲಿದೆ. ಅದರ ಬಳಿಕ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುವ ಕುರಿತು ಚರ್ಚಿಸಲಾಗುವುದು ಎಂದರು.<br /> <br /> ವಿಧಾನಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿ ಯಾರನ್ನು ನೇಮಕ ಮಾಡಬೇಕು ಎಂಬುದನ್ನು ಮುಖಂಡರಾದ ಡಿ.ವಿ.ಸದಾನಂದ ಗೌಡ ಮತ್ತು ಜಗದೀಶ ಶೆಟ್ಟರ್ ಅವರು ನಿರ್ಧರಿಸಲಿದ್ದಾರೆ. ಅವರಿಗೆ ಸಭೆ ಅಧಿಕಾರ ನೀಡಿತು ಎಂದರು.<br /> <br /> ಯಡಿಯೂರಪ್ಪ ಅವರನ್ನು ಬಿಜೆಪಿಗೆ ವಾಪಸ್ ಕರೆತರುವ ವದಂತಿ ಬಗ್ಗೆ ಕೇಳಿದಾಗ `ಅಂತಹ ಪ್ರಯತ್ನ ನಡೆದಿಲ್ಲ. ಅದು ಚರ್ಚೆ ಕೂಡ ಆಗಿಲ್ಲ' ಎಂದು ಜೋಶಿ ಸ್ಪಷ್ಟಪಡಿಸಿದರು. <br /> <br /> 4ಬಿಜೆಪಿ ಮುಖಂಡರ ವಿರುದ್ಧ ಶಾಸಕರ ಆಕ್ರೋಶ: ಪುಟ 5</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>