<p><strong>ಬೆಂಗಳೂರು</strong>: ಶಿರಸಿ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಭದ್ರಾವತಿಯ ಸಿ.ಎಸ್. ಶಿವಮೂರ್ತಿ ಎಂಬುವರು ನೀಡಿದ್ದ ದೂರು ಆಧರಿಸಿ, ಶಿವಮೊಗ್ಗದ ಲೋಕಾಯುಕ್ತ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು.<br /> <br /> ಲೋಕಾಯುಕ್ತ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕಾಗೇರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ನಡೆಸಿದರು.<br /> <br /> ಸರ್ಕಾರದ ಇಲಾಖೆಗಳಿಗೆ ಬೇಕಿರುವ ಮುದ್ರಣ ಕಾಗದಗಳನ್ನು ಮೈಸೂರು ಪೇಪರ್ ಮಿಲ್ನಿಂದ ಖರೀದಿಸಬೇಕು ಎಂದು 2009ರಲ್ಲಿ ಆದೇಶಿಸಲಾಗಿದೆ. ಆದರೆ ಕಾಗೇರಿ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದಾಗ ಈ ನಿಯಮ ಉಲ್ಲಂಘಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿತರಿಸಲು ಪುಣೆ ಮೂಲದ `ಬಾಫ್ನಾ ಎಕ್ಸ್ಪೋರ್ಟ್ ಕಂಪೆನಿ'ಯಿಂದ ನೋಟ್ ಬುಕ್ ಖರೀದಿ ಮಾಡಿದ್ದಾರೆ. ಇದರಿಂದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಶಿವಮೂರ್ತಿ ದೂರು ದಾಖಲಿಸಿದ್ದರು.<br /> <br /> ಕಾಗೇರಿ ಪರ ಹಾಜರಾದ ಹಿರಿಯ ವಕೀಲ ಕೆ.ಎಂ. ನಟರಾಜ್, `ಕಾನೂನು ಬದ್ಧವಾಗಿ ಟೆಂಡರ್ ಕರೆಯಲಾಗಿತ್ತು. ಅತ್ಯಂತ ಕಡಿಮೆ ದರ ನಮೂದಿಸಿದ ಕಂಪೆನಿಗೆ ಟೆಂಡರ್ ನೀಡಲಾಗಿದೆ. ರಾಜಕೀಯ ಉದ್ದೇಶದಿಂದ ದೂರು ದಾಖಲು ಮಾಡಲಾಗಿದೆ' ಎಂದು ವಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಿರಸಿ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಭದ್ರಾವತಿಯ ಸಿ.ಎಸ್. ಶಿವಮೂರ್ತಿ ಎಂಬುವರು ನೀಡಿದ್ದ ದೂರು ಆಧರಿಸಿ, ಶಿವಮೊಗ್ಗದ ಲೋಕಾಯುಕ್ತ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು.<br /> <br /> ಲೋಕಾಯುಕ್ತ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕಾಗೇರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ನಡೆಸಿದರು.<br /> <br /> ಸರ್ಕಾರದ ಇಲಾಖೆಗಳಿಗೆ ಬೇಕಿರುವ ಮುದ್ರಣ ಕಾಗದಗಳನ್ನು ಮೈಸೂರು ಪೇಪರ್ ಮಿಲ್ನಿಂದ ಖರೀದಿಸಬೇಕು ಎಂದು 2009ರಲ್ಲಿ ಆದೇಶಿಸಲಾಗಿದೆ. ಆದರೆ ಕಾಗೇರಿ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದಾಗ ಈ ನಿಯಮ ಉಲ್ಲಂಘಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿತರಿಸಲು ಪುಣೆ ಮೂಲದ `ಬಾಫ್ನಾ ಎಕ್ಸ್ಪೋರ್ಟ್ ಕಂಪೆನಿ'ಯಿಂದ ನೋಟ್ ಬುಕ್ ಖರೀದಿ ಮಾಡಿದ್ದಾರೆ. ಇದರಿಂದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಶಿವಮೂರ್ತಿ ದೂರು ದಾಖಲಿಸಿದ್ದರು.<br /> <br /> ಕಾಗೇರಿ ಪರ ಹಾಜರಾದ ಹಿರಿಯ ವಕೀಲ ಕೆ.ಎಂ. ನಟರಾಜ್, `ಕಾನೂನು ಬದ್ಧವಾಗಿ ಟೆಂಡರ್ ಕರೆಯಲಾಗಿತ್ತು. ಅತ್ಯಂತ ಕಡಿಮೆ ದರ ನಮೂದಿಸಿದ ಕಂಪೆನಿಗೆ ಟೆಂಡರ್ ನೀಡಲಾಗಿದೆ. ರಾಜಕೀಯ ಉದ್ದೇಶದಿಂದ ದೂರು ದಾಖಲು ಮಾಡಲಾಗಿದೆ' ಎಂದು ವಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>