<p><strong>ಸಾಗರ: </strong>ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕಾಗೋಡು ಸತ್ಯಾಗ್ರಹದ ರೂವಾರಿ ಎಚ್.ಗಣಪತಿಯಪ್ಪ (91) ಅವರು, ತಾಲ್ಲೂಕಿನ ವಡ್ನಾಲ ಗ್ರಾಮದ ತಮ್ಮ ನಿವಾಸದಲ್ಲಿ ಮಂಗಳವಾರ ತೀವ್ರ ಹೃದಯಘಾತದಿಂದ ನಿಧನರಾದರು.<br /> <br /> ಮೃತರಿಗೆ ಪತ್ನಿ, ಐವರು ಪುತ್ರರು, ಐವರು ಪುತ್ರಿಯರು ಇದ್ದಾರೆ.<br /> ಮೃತರ ಅಂತ್ಯಸಂಸ್ಕಾರ ಬುಧವಾರ ಬೆಳಿಗ್ಗೆ 10ಕ್ಕೆ ವಡ್ನಾಲ ಗ್ರಾಮದಲ್ಲಿ ನೆರವೇರಲಿದೆ. ಕಳೆದ ತಿಂಗಳು ಪಾರ್ಶ್ವವಾಯು ಪೀಡಿತರಾಗಿದ್ದ ಗಣಪತಿಯಪ್ಪ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೆಲವು ದಿನಗಳ ಹಿಂದೆ ಅವರನ್ನು ವಡ್ನಾಲ ಗ್ರಾಮದ ಮನೆಗೆ ಕರೆ ತರಲಾಗಿತ್ತು.<br /> <br /> ಮಂಗಳವಾರ ಮಧ್ಯಾಹ್ನ 11.30ರ ವೇಳೆಗೆ ಉಸಿರಾಟದ ತೊಂದರೆಯಿಂದ ಅವರು ತೀವ್ರ ಬಳಲಿದ್ದರು. ಕುಟುಂಬ ವರ್ಗದವರು ತಕ್ಷಣ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದರೂ ಫಲಕಾಣದೆ 11.55ರ ವೇಳೆಗೆ ಗಣಪತಿಯಪ್ಪ ಕೊನೆಯುಸಿರೆಳೆದರು.<br /> <br /> ಗಣಪತಿಯಪ್ಪ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ಗ್ರಾಮದವರು.<br /> ಗಣಪತಿಯಪ್ಪ ಅವರ ಜನಪರ ಹೋರಾಟವನ್ನು ಗುರುತಿಸಿ ರಾಜ್ಯ ಸರ್ಕಾರ 1992ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2004ರಲ್ಲಿ ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಿದೆ. ಚಿತ್ರದುರ್ಗದ ಮುರುಘಾಮಠ ಗಣಪತಿಯಪ್ಪ ಅವರಿಗೆ ‘ಬಸವ ಶ್ರೀ ’ ಪ್ರಶಸ್ತಿ ಪ್ರದಾನ ಮಾಡಿತ್ತು.<br /> <br /> ಬದುಕಿನ ಕೊನೆಯ ಘಟ್ಟದವರೆಗೂ ಗಣಪತಿಯಪ್ಪ ಅವರು ಸಾಮಾ ಜಿಕವಾಗಿ ಕ್ರಿಯಾಶೀಲರಾಗಿದ್ದು ಪ್ರಗತಿ ಪರ ಚಳವಳಿಗಳೊಂದಿಗೆ ತಮ್ಮನ್ನು ಗುರುತಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕಾಗೋಡು ಸತ್ಯಾಗ್ರಹದ ರೂವಾರಿ ಎಚ್.ಗಣಪತಿಯಪ್ಪ (91) ಅವರು, ತಾಲ್ಲೂಕಿನ ವಡ್ನಾಲ ಗ್ರಾಮದ ತಮ್ಮ ನಿವಾಸದಲ್ಲಿ ಮಂಗಳವಾರ ತೀವ್ರ ಹೃದಯಘಾತದಿಂದ ನಿಧನರಾದರು.<br /> <br /> ಮೃತರಿಗೆ ಪತ್ನಿ, ಐವರು ಪುತ್ರರು, ಐವರು ಪುತ್ರಿಯರು ಇದ್ದಾರೆ.<br /> ಮೃತರ ಅಂತ್ಯಸಂಸ್ಕಾರ ಬುಧವಾರ ಬೆಳಿಗ್ಗೆ 10ಕ್ಕೆ ವಡ್ನಾಲ ಗ್ರಾಮದಲ್ಲಿ ನೆರವೇರಲಿದೆ. ಕಳೆದ ತಿಂಗಳು ಪಾರ್ಶ್ವವಾಯು ಪೀಡಿತರಾಗಿದ್ದ ಗಣಪತಿಯಪ್ಪ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೆಲವು ದಿನಗಳ ಹಿಂದೆ ಅವರನ್ನು ವಡ್ನಾಲ ಗ್ರಾಮದ ಮನೆಗೆ ಕರೆ ತರಲಾಗಿತ್ತು.<br /> <br /> ಮಂಗಳವಾರ ಮಧ್ಯಾಹ್ನ 11.30ರ ವೇಳೆಗೆ ಉಸಿರಾಟದ ತೊಂದರೆಯಿಂದ ಅವರು ತೀವ್ರ ಬಳಲಿದ್ದರು. ಕುಟುಂಬ ವರ್ಗದವರು ತಕ್ಷಣ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದರೂ ಫಲಕಾಣದೆ 11.55ರ ವೇಳೆಗೆ ಗಣಪತಿಯಪ್ಪ ಕೊನೆಯುಸಿರೆಳೆದರು.<br /> <br /> ಗಣಪತಿಯಪ್ಪ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ಗ್ರಾಮದವರು.<br /> ಗಣಪತಿಯಪ್ಪ ಅವರ ಜನಪರ ಹೋರಾಟವನ್ನು ಗುರುತಿಸಿ ರಾಜ್ಯ ಸರ್ಕಾರ 1992ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2004ರಲ್ಲಿ ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಿದೆ. ಚಿತ್ರದುರ್ಗದ ಮುರುಘಾಮಠ ಗಣಪತಿಯಪ್ಪ ಅವರಿಗೆ ‘ಬಸವ ಶ್ರೀ ’ ಪ್ರಶಸ್ತಿ ಪ್ರದಾನ ಮಾಡಿತ್ತು.<br /> <br /> ಬದುಕಿನ ಕೊನೆಯ ಘಟ್ಟದವರೆಗೂ ಗಣಪತಿಯಪ್ಪ ಅವರು ಸಾಮಾ ಜಿಕವಾಗಿ ಕ್ರಿಯಾಶೀಲರಾಗಿದ್ದು ಪ್ರಗತಿ ಪರ ಚಳವಳಿಗಳೊಂದಿಗೆ ತಮ್ಮನ್ನು ಗುರುತಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>