<p>ಗೋಣಿಕೊಪ್ಪಲು: ಕಾಫಿ ತೋಟದಲ್ಲಿ ತಂಗಿದ್ದ ಕಾಡಾನೆಯನ್ನು ಮರಳಿ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ತಿತಿಮತಿ ಸಮೀಪದ ಮರಪಾಲದಲ್ಲಿ ಸೋಮವಾರ ಸಂಭವಿಸಿದೆ.<br /> <br /> ಮೃತಪಟ್ಟವರನ್ನು ದಾಸ್ (54) ಎಂದು ಗುರುತಿಸಲಾಗಿದೆ. ಅರಣ್ಯ ಇಲಾಖೆ ತಿತಿಮತಿಯ ಮರಪಾಲದ ಕಾಫಿ ತೋಟದಲ್ಲಿ ಕಳೆದ 15 ದಿನಗಳಿಂದ ಬೀಡು ಬಿಟ್ಟಿದ್ದ ಕಾಡಾನೆಯನ್ನು ಮರಳಿ ಕಾಡಿಗಟ್ಟಲು ದಸರಾ ಆನೆ `ಅಭಿಮನ್ಯು~ವನ್ನು ಬಳಸಿಕೊಳ್ಳಲಾಗಿತ್ತು.<br /> <br /> ಅಭಿಮನ್ಯುವಿನ ಮೂಲಕ ಕಾಡಾನೆಯನ್ನು ಕಾಡಿನತ್ತ ಓಡಿಸುವ ಸಂದರ್ಭದಲ್ಲಿ ದೇವರಪುರದ ಚರ್ಚ್ಗೆ ಸೇರಿದ ಕಾಫಿ ತೋಟದಲ್ಲಿ ಕಟ್ಟಿ ಹಾಕಿದ್ದ ಹಸುವೊಂದನ್ನು ಬಿಚ್ಚುತ್ತಿದ್ದ ದಾಸ್ ಅವರ ಮೇಲೆ ಕಾಡಾನೆ ದಾಳಿ ನಡೆಸಿತು. <br /> ಇದರಿಂದ ತೀವ್ರ ಗಾಯಗೊಂಡ ದಾಸ್ ಅವರನ್ನು ಕಾರ್ಯಾಚರಣೆಯಲ್ಲಿದ್ದ ತಿತಿಮತಿ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ದೇವರಾಜ್ ಮತ್ತು ಸಿಬ್ಬಂದಿ ತಿತಿಮತಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವಷ್ಟರಲ್ಲಿ ಅವರು ಕೊನೆಯುಸಿರಳೆದಿದ್ದರು.<br /> <br /> ವಲಯಾಧಿಕಾರಿ ದೇವರಾಜ್ ಅವರು 2.5 ಲಕ್ಷ ರೂಪಾಯಿ ಪರಿಹಾರದ ಚೆಕ್ನ್ನು ದಾಸ್ ಕುಟುಂಬದವರಿಗೆ ನೀಡಿದರು. ಉಳಿದ 2.5 ಲಕ್ಷ ಮೊತ್ತದ ಪರಿಹಾರವನ್ನು ತಕ್ಷಣ ಕೊಡಿಸಿಕೊಡುವುದಾಗಿ ಹೇಳಿದರು. ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಣಿಕೊಪ್ಪಲು: ಕಾಫಿ ತೋಟದಲ್ಲಿ ತಂಗಿದ್ದ ಕಾಡಾನೆಯನ್ನು ಮರಳಿ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ತಿತಿಮತಿ ಸಮೀಪದ ಮರಪಾಲದಲ್ಲಿ ಸೋಮವಾರ ಸಂಭವಿಸಿದೆ.<br /> <br /> ಮೃತಪಟ್ಟವರನ್ನು ದಾಸ್ (54) ಎಂದು ಗುರುತಿಸಲಾಗಿದೆ. ಅರಣ್ಯ ಇಲಾಖೆ ತಿತಿಮತಿಯ ಮರಪಾಲದ ಕಾಫಿ ತೋಟದಲ್ಲಿ ಕಳೆದ 15 ದಿನಗಳಿಂದ ಬೀಡು ಬಿಟ್ಟಿದ್ದ ಕಾಡಾನೆಯನ್ನು ಮರಳಿ ಕಾಡಿಗಟ್ಟಲು ದಸರಾ ಆನೆ `ಅಭಿಮನ್ಯು~ವನ್ನು ಬಳಸಿಕೊಳ್ಳಲಾಗಿತ್ತು.<br /> <br /> ಅಭಿಮನ್ಯುವಿನ ಮೂಲಕ ಕಾಡಾನೆಯನ್ನು ಕಾಡಿನತ್ತ ಓಡಿಸುವ ಸಂದರ್ಭದಲ್ಲಿ ದೇವರಪುರದ ಚರ್ಚ್ಗೆ ಸೇರಿದ ಕಾಫಿ ತೋಟದಲ್ಲಿ ಕಟ್ಟಿ ಹಾಕಿದ್ದ ಹಸುವೊಂದನ್ನು ಬಿಚ್ಚುತ್ತಿದ್ದ ದಾಸ್ ಅವರ ಮೇಲೆ ಕಾಡಾನೆ ದಾಳಿ ನಡೆಸಿತು. <br /> ಇದರಿಂದ ತೀವ್ರ ಗಾಯಗೊಂಡ ದಾಸ್ ಅವರನ್ನು ಕಾರ್ಯಾಚರಣೆಯಲ್ಲಿದ್ದ ತಿತಿಮತಿ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ದೇವರಾಜ್ ಮತ್ತು ಸಿಬ್ಬಂದಿ ತಿತಿಮತಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವಷ್ಟರಲ್ಲಿ ಅವರು ಕೊನೆಯುಸಿರಳೆದಿದ್ದರು.<br /> <br /> ವಲಯಾಧಿಕಾರಿ ದೇವರಾಜ್ ಅವರು 2.5 ಲಕ್ಷ ರೂಪಾಯಿ ಪರಿಹಾರದ ಚೆಕ್ನ್ನು ದಾಸ್ ಕುಟುಂಬದವರಿಗೆ ನೀಡಿದರು. ಉಳಿದ 2.5 ಲಕ್ಷ ಮೊತ್ತದ ಪರಿಹಾರವನ್ನು ತಕ್ಷಣ ಕೊಡಿಸಿಕೊಡುವುದಾಗಿ ಹೇಳಿದರು. ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>