<p><strong>ಕನಕಪುರ</strong>: ಕಾಡಾನೆಗಳ ಹಿಂಡು ರೈತನನ್ನು ತುಳಿದು ಸಾಯಿಸಿರುವ ಘಟನೆ ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಚಿಲಂದವಾಡಿ ಅರಣ್ಯದಲ್ಲಿ ಗುರುವಾರ ನಡೆದಿದೆ.<br /> <br /> ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಬೋರನದೊಡ್ಡಿ ಗ್ರಾಮದ ಅಂಬೇಡ್ಕರ್ ಕಾಲೊನಿ ನಿವಾಸಿ ದೇವಯ್ಯ(65) ಮೃತ ವ್ಯಕ್ತಿ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, 5 ಪುತ್ರಿಯರಿದ್ದಾರೆ. ಗುರುವಾರ ಬೆಳಿಗ್ಗೆ ಗ್ರಾಮದ ಪಕ್ಕದಲ್ಲಿರುವ ಕೆರೆಯ ಬಳಿ ಕಾಲು ದಾರಿಯಲ್ಲಿ ದೇವಯ್ಯ ನಡೆದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆನೆಯ ಹಿಂಡು ದಾಳಿ ಮಾಡುತ್ತಿದ್ದಂತೆ ಗ್ರಾಮಸ್ಥರು ಕೂಗಿಕೊಂಡಿದ್ದಾರೆ. ಜನರ ಧ್ವನಿಗೆ ಹೆದರಿ ಆನೆಗಳು ಸ್ಥಳದಿಂದ ಹೋಗಿವೆ.<br /> <br /> ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ದೇವಯ್ಯ ಅವರನ್ನು ಕನಕಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ. ಸಾತನೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> ವನ್ಯ ಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಸುನಿತಾಬಾಯಿ ಮತ್ತು ಸಾತನೂರು ಉಪ ವಲಯ ಅರಣ್ಯಾಧಿಕಾರಿ ಭೈರವ ಸಾರ್ವಜನಿಕ ಆಸ್ಪತ್ರೆಗೆ ಬಂದು ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಕಾಡಾನೆಗಳ ಹಿಂಡು ರೈತನನ್ನು ತುಳಿದು ಸಾಯಿಸಿರುವ ಘಟನೆ ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಚಿಲಂದವಾಡಿ ಅರಣ್ಯದಲ್ಲಿ ಗುರುವಾರ ನಡೆದಿದೆ.<br /> <br /> ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಬೋರನದೊಡ್ಡಿ ಗ್ರಾಮದ ಅಂಬೇಡ್ಕರ್ ಕಾಲೊನಿ ನಿವಾಸಿ ದೇವಯ್ಯ(65) ಮೃತ ವ್ಯಕ್ತಿ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, 5 ಪುತ್ರಿಯರಿದ್ದಾರೆ. ಗುರುವಾರ ಬೆಳಿಗ್ಗೆ ಗ್ರಾಮದ ಪಕ್ಕದಲ್ಲಿರುವ ಕೆರೆಯ ಬಳಿ ಕಾಲು ದಾರಿಯಲ್ಲಿ ದೇವಯ್ಯ ನಡೆದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆನೆಯ ಹಿಂಡು ದಾಳಿ ಮಾಡುತ್ತಿದ್ದಂತೆ ಗ್ರಾಮಸ್ಥರು ಕೂಗಿಕೊಂಡಿದ್ದಾರೆ. ಜನರ ಧ್ವನಿಗೆ ಹೆದರಿ ಆನೆಗಳು ಸ್ಥಳದಿಂದ ಹೋಗಿವೆ.<br /> <br /> ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ದೇವಯ್ಯ ಅವರನ್ನು ಕನಕಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ. ಸಾತನೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> ವನ್ಯ ಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಸುನಿತಾಬಾಯಿ ಮತ್ತು ಸಾತನೂರು ಉಪ ವಲಯ ಅರಣ್ಯಾಧಿಕಾರಿ ಭೈರವ ಸಾರ್ವಜನಿಕ ಆಸ್ಪತ್ರೆಗೆ ಬಂದು ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>