<p><strong>ಹುಣಸೂ</strong>ರು: ತಾಲ್ಲೂಕಿನ ಹನಗೋಡು ಹೋಬಳಿ ಕರ್ಣಕುಪ್ಪೆ ಗ್ರಾ.ಪಂ ವ್ಯಾಪ್ತಿ ಉಡುವೇಪುರ ಗ್ರಾಮದ ರೈತ ರಾಜಶೇಖರ್, ರಾಮಚಂದ್ರ ಮತ್ತು ಮಹೇಂದ್ರ ಅವರು ಬೆಳೆದಿದ್ದ ಶುಂಠಿ ಮತ್ತು ಮುಸುಕಿನ ಜೋಳ ಫಸಲಿನ ಮೇಲೆ ಮಂಗಳವಾರ ರಾತ್ರಿ ಕಾಡಾನೆ ದಾಳಿಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.<br /> <br /> ವೀರನಹೊಸಹಳ್ಳಿ ಕಾಡಂಚಿನ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸದೆ ಕಾಡಂಚಿನ ಪ್ರದೇಶದ ರೈತ ಬೆಳೆಯುವ ಫಸಲು ಕೈಸೇರುತ್ತಿಲ್ಲ ಎಂದಿದ್ದಾರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೆ ಕಾಲ ವ್ಯಯ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.<br /> <br /> 20- 25 ಎಕರೆ ಪ್ರದೇಶದಲ್ಲಿ ಬೆಳೆದ ಫಸಲು ಬಹುತೇಕ ಕಠಾವಿಗೆ ಬಂದಿದ್ದು, ಅಂತಿಮ ಹಂತದಲ್ಲಿ ಕಾಡಾನೆ ದಾಳಿಗೆ ನೆಲಕ್ಕುರುಳಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ರೈತ ರಾಜಶೇಖರ್ ತಿಳಿಸಿದರು. ಅರಣ್ಯ ಇಲಾಖೆ ಕಾಡು ಪ್ರಾಣಿ ದಾಳಿಯಲ್ಲಿ ನಾಶಗೊಂಡ ಫಸಲಿಗೆ ಸೂಕ್ತ ಪರಿಹಾರ ನೀಡುತ್ತಿಲ್ಲ.<br /> <br /> ಸರ್ಕಾರ, ವಿಜಯಶಂಕರ್ ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿ ಪರಿಹಾರದ ಮೊತ್ತ ಹೆಚ್ಚಿಸಿತ್ತಾದರೂ ಈವರಗೆ ರೈತನ ಕೈ ಸೇರಿಲ್ಲ ಎಂದು ಕಾಡಂಚಿನ ರೈತರು ಆರೋಪಿಸಿದ್ದಾರೆ. <br /> <br /> ಸ್ಥಳಕ್ಕೆ ಅರಣ್ಯ ಇಲಾಖೆಯ ವನಪಾಲಕ ಶಿವಕುಮಾರ್ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂ</strong>ರು: ತಾಲ್ಲೂಕಿನ ಹನಗೋಡು ಹೋಬಳಿ ಕರ್ಣಕುಪ್ಪೆ ಗ್ರಾ.ಪಂ ವ್ಯಾಪ್ತಿ ಉಡುವೇಪುರ ಗ್ರಾಮದ ರೈತ ರಾಜಶೇಖರ್, ರಾಮಚಂದ್ರ ಮತ್ತು ಮಹೇಂದ್ರ ಅವರು ಬೆಳೆದಿದ್ದ ಶುಂಠಿ ಮತ್ತು ಮುಸುಕಿನ ಜೋಳ ಫಸಲಿನ ಮೇಲೆ ಮಂಗಳವಾರ ರಾತ್ರಿ ಕಾಡಾನೆ ದಾಳಿಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.<br /> <br /> ವೀರನಹೊಸಹಳ್ಳಿ ಕಾಡಂಚಿನ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸದೆ ಕಾಡಂಚಿನ ಪ್ರದೇಶದ ರೈತ ಬೆಳೆಯುವ ಫಸಲು ಕೈಸೇರುತ್ತಿಲ್ಲ ಎಂದಿದ್ದಾರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೆ ಕಾಲ ವ್ಯಯ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.<br /> <br /> 20- 25 ಎಕರೆ ಪ್ರದೇಶದಲ್ಲಿ ಬೆಳೆದ ಫಸಲು ಬಹುತೇಕ ಕಠಾವಿಗೆ ಬಂದಿದ್ದು, ಅಂತಿಮ ಹಂತದಲ್ಲಿ ಕಾಡಾನೆ ದಾಳಿಗೆ ನೆಲಕ್ಕುರುಳಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ರೈತ ರಾಜಶೇಖರ್ ತಿಳಿಸಿದರು. ಅರಣ್ಯ ಇಲಾಖೆ ಕಾಡು ಪ್ರಾಣಿ ದಾಳಿಯಲ್ಲಿ ನಾಶಗೊಂಡ ಫಸಲಿಗೆ ಸೂಕ್ತ ಪರಿಹಾರ ನೀಡುತ್ತಿಲ್ಲ.<br /> <br /> ಸರ್ಕಾರ, ವಿಜಯಶಂಕರ್ ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿ ಪರಿಹಾರದ ಮೊತ್ತ ಹೆಚ್ಚಿಸಿತ್ತಾದರೂ ಈವರಗೆ ರೈತನ ಕೈ ಸೇರಿಲ್ಲ ಎಂದು ಕಾಡಂಚಿನ ರೈತರು ಆರೋಪಿಸಿದ್ದಾರೆ. <br /> <br /> ಸ್ಥಳಕ್ಕೆ ಅರಣ್ಯ ಇಲಾಖೆಯ ವನಪಾಲಕ ಶಿವಕುಮಾರ್ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>