<p>ಮೂಡಿಗೆರೆ: ತಾಲ್ಲೂಕಿನಾದ್ಯಂತ ಆನೆ ಹಾವಳಿ ಮುಂದುವರೆದಿದ್ದು, ಕಾಫಿ ತೋಟ, ಗದ್ದೆ, ಏಲಕ್ಕಿ ಬೆಳೆಯನ್ನು ನೆಲಸಮ ಮಾಡಿದ್ದು, ಪಟ್ಟಣ ಪಂಚಾಯತಿಯ ಘನತ್ಯಾಜ್ಯ ನಿರ್ವಹಣೆಯ ಘಟಕದ ತಡೆಗೋಡೆ ಕೆಡವಿ ಸುಮಾರು ಮೂರು ಲಕ್ಷದಷ್ಟು ಹಾನಿ ಮಾಡಿವೆ. <br /> <br /> ನಾಲ್ಕು ತಿಂಗಳ ಹಿಂದೆ ಪಟ್ಟಣದ ಡಿಎಸ್ಬಿಜಿ ಕಾಲೇಜಿನ ತಡೆಗೋಡೆಯನ್ನು ಆನೆಗಳ ಹಿಂಡು ಕೆಡವಿ ಹಾಕಿದ್ದವು. ಪಟ್ಟಣದಿಂದ ಎಂಟು ಕಿಲೋಮೀಟರ್ ದೂರದಲ್ಲಿರುವ ನಂದೀಪುರದಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕವಿದ್ದು, ಸೋಮವಾರ ರಾತ್ರಿ ದಾಳಿ ಮಾಡಿರುವ ಕಾಡಾನೆಗಳು ತಡೆಗೋಡೆಯನ್ನು ನೆಲಕ್ಕುರುಳಿಸಿವೆ. <br /> <br /> ತಡೆಗೋಡೆಯನ್ನು ಸಿಮೆಂಟ್ ಇಟ್ಟಿಗೆಯಿಂದ ಕಟ್ಟಲಾಗಿದ್ದು, ಸುಮಾರು 175 ಮೀಟರಿನಷ್ಟು ದೂರದ ತಡೆಗೋಡೆಯನ್ನು ಕೆಡವಿ ಹಾಕಿವೆ. ಸುದ್ದಿ ತಿಳಿಯುತಿದ್ದಂತೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಲತಾಲಕ್ಷ್ಮಣ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎ.ವಿ. ಗಣೇಶ್, ಕಿರಿಯ ಎಂಜಿನಿಯರ್ ಜಯಸಿಂಗ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡಿಗೆರೆ: ತಾಲ್ಲೂಕಿನಾದ್ಯಂತ ಆನೆ ಹಾವಳಿ ಮುಂದುವರೆದಿದ್ದು, ಕಾಫಿ ತೋಟ, ಗದ್ದೆ, ಏಲಕ್ಕಿ ಬೆಳೆಯನ್ನು ನೆಲಸಮ ಮಾಡಿದ್ದು, ಪಟ್ಟಣ ಪಂಚಾಯತಿಯ ಘನತ್ಯಾಜ್ಯ ನಿರ್ವಹಣೆಯ ಘಟಕದ ತಡೆಗೋಡೆ ಕೆಡವಿ ಸುಮಾರು ಮೂರು ಲಕ್ಷದಷ್ಟು ಹಾನಿ ಮಾಡಿವೆ. <br /> <br /> ನಾಲ್ಕು ತಿಂಗಳ ಹಿಂದೆ ಪಟ್ಟಣದ ಡಿಎಸ್ಬಿಜಿ ಕಾಲೇಜಿನ ತಡೆಗೋಡೆಯನ್ನು ಆನೆಗಳ ಹಿಂಡು ಕೆಡವಿ ಹಾಕಿದ್ದವು. ಪಟ್ಟಣದಿಂದ ಎಂಟು ಕಿಲೋಮೀಟರ್ ದೂರದಲ್ಲಿರುವ ನಂದೀಪುರದಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕವಿದ್ದು, ಸೋಮವಾರ ರಾತ್ರಿ ದಾಳಿ ಮಾಡಿರುವ ಕಾಡಾನೆಗಳು ತಡೆಗೋಡೆಯನ್ನು ನೆಲಕ್ಕುರುಳಿಸಿವೆ. <br /> <br /> ತಡೆಗೋಡೆಯನ್ನು ಸಿಮೆಂಟ್ ಇಟ್ಟಿಗೆಯಿಂದ ಕಟ್ಟಲಾಗಿದ್ದು, ಸುಮಾರು 175 ಮೀಟರಿನಷ್ಟು ದೂರದ ತಡೆಗೋಡೆಯನ್ನು ಕೆಡವಿ ಹಾಕಿವೆ. ಸುದ್ದಿ ತಿಳಿಯುತಿದ್ದಂತೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಲತಾಲಕ್ಷ್ಮಣ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎ.ವಿ. ಗಣೇಶ್, ಕಿರಿಯ ಎಂಜಿನಿಯರ್ ಜಯಸಿಂಗ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>