<p><strong>ಕುಶಾಲನಗರ:</strong> ಉತ್ತರ ಕೊಡಗಿನ ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಕಂಬಿಬಾಣೆ, ಅತ್ತೂರು-ನಲ್ಲೂರು, ಚೆಟ್ಟಳ್ಳಿ, ಭೂತನಕಾಡು ವ್ಯಾಪ್ತಿಯಲ್ಲಿಯ ಕಾಫಿ ತೋಟಗಳಿಗೆ ದಾಳಿಯಿಟ್ಟು ಬೆಳೆ ನಾಶಪಡಿಸುತ್ತಿದ್ದ ಕಾಡಾನೆಗಳ ಹಿಂಡನ್ನು ಮರಳಿ ಕಾಡಿಗೆ ಅಟ್ಟಲು ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮಂಗಳವಾರ ಯಶಸ್ವಿಯಾದರು.<br /> <br /> ವಲಯ ಅರಣ್ಯಾಧಿಕಾರಿ ಎಂ.ಎಂ.ಅಚ್ಚಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದುಬಾರೆ ಸಾಕಾನೆ ಶಿಬಿರದ ಗೋಪಿ, ಹರ್ಷ, ಮಯೂರ, ಪ್ರಶಾಂತ, ವಿಕ್ರಮ್, ತೀರ್ಥರಾಮ ಎಂಬ ಆನೆಗಳನ್ನು ಬಳಲಸಾಗಿತ್ತು. ಮೀನುಕೊಲ್ಲಿ ಮೀಸಲು ಅರಣ್ಯದಿಂದ ಕಾಫಿ ತೋಟಕ್ಕೆ ದಾಳಿಯಿಟ್ಟಿದ್ದ ಮರಿಯಾನೆ ಸೇರಿದಂತೆ 5 ಕಾಡಾನೆಗಳನ್ನು 60 ಸಿಬ್ಬಂದಿ, 6 ಸಾಕಾನೆಗಳ ಸಹಾಯದಿಂದ ಮರಳಿ ಕಾಡಿಗೆ ಅಟ್ಟಲಾಯಿತು ಎಂದು ಕುಶಾಲನಗರ ವಲಯದ ಆರ್ಎಫ್ಓ ಎಂ.ಎಂ.ಅಚ್ಚಪ್ಪ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಉತ್ತರ ಕೊಡಗಿನ ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಕಂಬಿಬಾಣೆ, ಅತ್ತೂರು-ನಲ್ಲೂರು, ಚೆಟ್ಟಳ್ಳಿ, ಭೂತನಕಾಡು ವ್ಯಾಪ್ತಿಯಲ್ಲಿಯ ಕಾಫಿ ತೋಟಗಳಿಗೆ ದಾಳಿಯಿಟ್ಟು ಬೆಳೆ ನಾಶಪಡಿಸುತ್ತಿದ್ದ ಕಾಡಾನೆಗಳ ಹಿಂಡನ್ನು ಮರಳಿ ಕಾಡಿಗೆ ಅಟ್ಟಲು ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮಂಗಳವಾರ ಯಶಸ್ವಿಯಾದರು.<br /> <br /> ವಲಯ ಅರಣ್ಯಾಧಿಕಾರಿ ಎಂ.ಎಂ.ಅಚ್ಚಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದುಬಾರೆ ಸಾಕಾನೆ ಶಿಬಿರದ ಗೋಪಿ, ಹರ್ಷ, ಮಯೂರ, ಪ್ರಶಾಂತ, ವಿಕ್ರಮ್, ತೀರ್ಥರಾಮ ಎಂಬ ಆನೆಗಳನ್ನು ಬಳಲಸಾಗಿತ್ತು. ಮೀನುಕೊಲ್ಲಿ ಮೀಸಲು ಅರಣ್ಯದಿಂದ ಕಾಫಿ ತೋಟಕ್ಕೆ ದಾಳಿಯಿಟ್ಟಿದ್ದ ಮರಿಯಾನೆ ಸೇರಿದಂತೆ 5 ಕಾಡಾನೆಗಳನ್ನು 60 ಸಿಬ್ಬಂದಿ, 6 ಸಾಕಾನೆಗಳ ಸಹಾಯದಿಂದ ಮರಳಿ ಕಾಡಿಗೆ ಅಟ್ಟಲಾಯಿತು ಎಂದು ಕುಶಾಲನಗರ ವಲಯದ ಆರ್ಎಫ್ಓ ಎಂ.ಎಂ.ಅಚ್ಚಪ್ಪ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>