<p>ಬೆಂಗಳೂರು: ರಾಜಾನುಕುಂಟೆ ಬಳಿ ಇತ್ತೀಚೆಗೆ ಕಾರು ಮತ್ತು ಬಿಎಂಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾದಂಬರಿ ವಾಮನನ್ (37) ಎಂಬುವರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಸ್ನ ಚಾಲಕ ಸಾದಿಕ್ ಅವರನ್ನು ಅಮಾನತು ಮಾಡಿ ಹಿರಿಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.<br /> <br /> ‘ಘಟನೆಯ ಬಗ್ಗೆ ಸಂಸ್ಥೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ಚಾಲಕ ಸಾದಿಕ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ಸಾದಿಕ್, ಯಲಹಂಕ ಬಳಿಯ ಪುಟ್ಟೇನಹಳ್ಳಿಯಲ್ಲಿರುವ ಬಿಎಂಟಿಸಿ 30ನೇ ಡಿಪೊದಲ್ಲಿ ಚಾಲಕರಾಗಿದ್ದರು.<br /> ಸಾದಿಕ್ ಅವರು ಚಾಲನೆ ಮಾಡುತ್ತಿದ್ದ ಬಸ್ ಮತ್ತು ಕಾದಂಬರಿ ಅವರ ಕಾರಿನ ನಡುವೆ ಮಾ.2ರಂದು ಅಪಘಾತ ಸಂಭವಿಸಿತ್ತು.<br /> <br /> ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಕಾದಂಬರಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಆ ನಂತರ ಸಾದಿಕ್, ವಾಹನ ಬಿಟ್ಟು ಪರಾರಿಯಾಗಿದ್ದರು.<br /> <br /> ಘಟನಾ ಸಂದರ್ಭದಲ್ಲಿ ಆ ಬಸ್ ದೊಡ್ಡಬಳ್ಳಾಪುರ ರಸ್ತೆಯ ಕಕ್ಕೇಹಳ್ಳಿಯಿಂದ ನಗರದ ಕೆ.ಆರ್.ಮಾರುಕಟ್ಟೆಗೆ (ಮಾರ್ಗ ಸಂಖ್ಯೆ– 285ಸಿಬಿ) ಬರುತ್ತಿತ್ತು ಎಂದು ಬಿಎಂಟಿಸಿ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜಾನುಕುಂಟೆ ಬಳಿ ಇತ್ತೀಚೆಗೆ ಕಾರು ಮತ್ತು ಬಿಎಂಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾದಂಬರಿ ವಾಮನನ್ (37) ಎಂಬುವರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಸ್ನ ಚಾಲಕ ಸಾದಿಕ್ ಅವರನ್ನು ಅಮಾನತು ಮಾಡಿ ಹಿರಿಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.<br /> <br /> ‘ಘಟನೆಯ ಬಗ್ಗೆ ಸಂಸ್ಥೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ಚಾಲಕ ಸಾದಿಕ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ಸಾದಿಕ್, ಯಲಹಂಕ ಬಳಿಯ ಪುಟ್ಟೇನಹಳ್ಳಿಯಲ್ಲಿರುವ ಬಿಎಂಟಿಸಿ 30ನೇ ಡಿಪೊದಲ್ಲಿ ಚಾಲಕರಾಗಿದ್ದರು.<br /> ಸಾದಿಕ್ ಅವರು ಚಾಲನೆ ಮಾಡುತ್ತಿದ್ದ ಬಸ್ ಮತ್ತು ಕಾದಂಬರಿ ಅವರ ಕಾರಿನ ನಡುವೆ ಮಾ.2ರಂದು ಅಪಘಾತ ಸಂಭವಿಸಿತ್ತು.<br /> <br /> ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಕಾದಂಬರಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಆ ನಂತರ ಸಾದಿಕ್, ವಾಹನ ಬಿಟ್ಟು ಪರಾರಿಯಾಗಿದ್ದರು.<br /> <br /> ಘಟನಾ ಸಂದರ್ಭದಲ್ಲಿ ಆ ಬಸ್ ದೊಡ್ಡಬಳ್ಳಾಪುರ ರಸ್ತೆಯ ಕಕ್ಕೇಹಳ್ಳಿಯಿಂದ ನಗರದ ಕೆ.ಆರ್.ಮಾರುಕಟ್ಟೆಗೆ (ಮಾರ್ಗ ಸಂಖ್ಯೆ– 285ಸಿಬಿ) ಬರುತ್ತಿತ್ತು ಎಂದು ಬಿಎಂಟಿಸಿ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>