<p><strong>ಬೆಂಗಳೂರು:</strong> `ದೇಶದಲ್ಲಿ ಸಾರ್ವಜನಿಕರ ರಕ್ಷಣೆಗೆ ಕಾನೂನುಗಳ ಕೊರತೆಯಿಲ್ಲ. ಆದರೆ, ಇರುವ ಕಾನೂನುಗಳು ಸಮರ್ಪಕವಾಗಿ ಜಾರಿಗೊಳ್ಳಬೇಕಾದ ಅಗತ್ಯವಿದೆ' ಎಂದು ರಾಜ್ಯ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ನಿಗಮದ ಕಾನೂನು ಸಲಹೆಗಾರ ಎಸ್.ಆರ್. ಪ್ರಹ್ಲಾದ ರಾವ್ ಅವರು ಹೇಳಿದರು.<br /> <br /> ಬೆಂಗಳೂರು ವಿಜ್ಞಾನ ವೇದಿಕೆಯು ಭಾನುವಾರ ನಗರದಲ್ಲಿ ಆಯೋಜಿಸಿದ್ದ ಜಿ.ಟಿ.ನಾರಾಯಣ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ `ಕಾನೂನು ಮತ್ತು ಸಾಮಾನ್ಯ ವ್ಯಕ್ತಿ' ವಿಷಯ ಕುರಿತು ಅವರು ಮಾತನಾಡಿದರು.<br /> <br /> ಗ್ರಾಹಕ ರಕ್ಷಣಾ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಸಾಮಾನ್ಯ ಜನರ ರಕ್ಷಣೆಗೆ ಹಲವು ಕಾನೂನುಗಳಿವೆ. ಆದರೆ, ಇವುಗಳ ಬಗೆಗಿನ ಸರಿಯಾದ ಮಾಹಿತಿಯ ಕೊರತೆಯಿಂದಾಗಿ ಈ ಕಾನೂನುಗಳು ಸಾಮಾನ್ಯ ಜನರಿಗೆ ತಿಳಿಯದೆ ದುರುಪಯೋಗವಾಗುತ್ತಿವೆ ಎಂದರು.<br /> <br /> ಗ್ರಾಹಕರ ಹಿತರಕ್ಷಣೆಯನ್ನು ಮುಖ್ಯ ಕೇಂದ್ರವಾಗಿಸಿಕೊಂಡು ಗ್ರಾಹಕ ರಕ್ಷಣಾ ಕಾಯ್ದೆಯನ್ನು ರೂಪಿಸಲಾಗಿದೆ. ತಾವು ಖರೀದಿಸಿದ ವಸ್ತುಗಳ ಬಗ್ಗೆ ದೂರುಗಳಿದ್ದರೆ ಜಿಲ್ಲಾ, ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿರುವ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿ ನ್ಯಾಯ ಪಡೆಯಬಹುದಾಗಿದೆ ಎಂದು ಅವರು ಸಲಹೆ ನೀಡಿದರು.<br /> <br /> ಮಾಹಿತಿ ಹಕ್ಕು ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆ ಇದ್ದಂತೆ. ಮಾಹಿತಿ ಹಕ್ಕು ಕಾಯ್ದೆ ಜಾರಿಯಾಗುವ ಮೊದಲು ಸರ್ಕಾರದ ಯಾವುದೇ ಯೋಜನೆಗಳು, ಅಂಕಿ-ಅಂಶಗಳು, ಸೌಲಭ್ಯಗಳ ಬಗೆಗಿನ ಮಾಹಿತಿಯು ಸಾಮಾನ್ಯ ಜನರಿಗೆ ಲಭ್ಯವಾಗುತ್ತಿರಲಿಲ್ಲ. ಕಾಯ್ದೆಯ ಅನ್ವಯ ಸಾಮಾನ್ಯ ವ್ಯಕ್ತಿಯೂ ಸಹ ತನಗೆ ಬೇಕಾದ ಸಂಸ್ಥೆಯ ಕುರಿತು ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.<br /> <br /> ಸಮಾಜದ ಯಾವುದೇ ವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಇದೆ. ಸಾರ್ವಜನಿಕರು ಈ ಕಾನೂನುಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಕಾಯ್ದೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ದೇಶದಲ್ಲಿ ಸಾರ್ವಜನಿಕರ ರಕ್ಷಣೆಗೆ ಕಾನೂನುಗಳ ಕೊರತೆಯಿಲ್ಲ. ಆದರೆ, ಇರುವ ಕಾನೂನುಗಳು ಸಮರ್ಪಕವಾಗಿ ಜಾರಿಗೊಳ್ಳಬೇಕಾದ ಅಗತ್ಯವಿದೆ' ಎಂದು ರಾಜ್ಯ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ನಿಗಮದ ಕಾನೂನು ಸಲಹೆಗಾರ ಎಸ್.ಆರ್. ಪ್ರಹ್ಲಾದ ರಾವ್ ಅವರು ಹೇಳಿದರು.<br /> <br /> ಬೆಂಗಳೂರು ವಿಜ್ಞಾನ ವೇದಿಕೆಯು ಭಾನುವಾರ ನಗರದಲ್ಲಿ ಆಯೋಜಿಸಿದ್ದ ಜಿ.ಟಿ.ನಾರಾಯಣ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ `ಕಾನೂನು ಮತ್ತು ಸಾಮಾನ್ಯ ವ್ಯಕ್ತಿ' ವಿಷಯ ಕುರಿತು ಅವರು ಮಾತನಾಡಿದರು.<br /> <br /> ಗ್ರಾಹಕ ರಕ್ಷಣಾ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಸಾಮಾನ್ಯ ಜನರ ರಕ್ಷಣೆಗೆ ಹಲವು ಕಾನೂನುಗಳಿವೆ. ಆದರೆ, ಇವುಗಳ ಬಗೆಗಿನ ಸರಿಯಾದ ಮಾಹಿತಿಯ ಕೊರತೆಯಿಂದಾಗಿ ಈ ಕಾನೂನುಗಳು ಸಾಮಾನ್ಯ ಜನರಿಗೆ ತಿಳಿಯದೆ ದುರುಪಯೋಗವಾಗುತ್ತಿವೆ ಎಂದರು.<br /> <br /> ಗ್ರಾಹಕರ ಹಿತರಕ್ಷಣೆಯನ್ನು ಮುಖ್ಯ ಕೇಂದ್ರವಾಗಿಸಿಕೊಂಡು ಗ್ರಾಹಕ ರಕ್ಷಣಾ ಕಾಯ್ದೆಯನ್ನು ರೂಪಿಸಲಾಗಿದೆ. ತಾವು ಖರೀದಿಸಿದ ವಸ್ತುಗಳ ಬಗ್ಗೆ ದೂರುಗಳಿದ್ದರೆ ಜಿಲ್ಲಾ, ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿರುವ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿ ನ್ಯಾಯ ಪಡೆಯಬಹುದಾಗಿದೆ ಎಂದು ಅವರು ಸಲಹೆ ನೀಡಿದರು.<br /> <br /> ಮಾಹಿತಿ ಹಕ್ಕು ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆ ಇದ್ದಂತೆ. ಮಾಹಿತಿ ಹಕ್ಕು ಕಾಯ್ದೆ ಜಾರಿಯಾಗುವ ಮೊದಲು ಸರ್ಕಾರದ ಯಾವುದೇ ಯೋಜನೆಗಳು, ಅಂಕಿ-ಅಂಶಗಳು, ಸೌಲಭ್ಯಗಳ ಬಗೆಗಿನ ಮಾಹಿತಿಯು ಸಾಮಾನ್ಯ ಜನರಿಗೆ ಲಭ್ಯವಾಗುತ್ತಿರಲಿಲ್ಲ. ಕಾಯ್ದೆಯ ಅನ್ವಯ ಸಾಮಾನ್ಯ ವ್ಯಕ್ತಿಯೂ ಸಹ ತನಗೆ ಬೇಕಾದ ಸಂಸ್ಥೆಯ ಕುರಿತು ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.<br /> <br /> ಸಮಾಜದ ಯಾವುದೇ ವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಇದೆ. ಸಾರ್ವಜನಿಕರು ಈ ಕಾನೂನುಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಕಾಯ್ದೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>