<p><strong>ಯಳಂದೂರು:</strong> `ಪ್ರಸಕ್ತ ದಿನಗಳಲ್ಲಿ ಪ್ರತಿಯೊಬ್ಬ ನಾಗರಿಕನು ಸಂವಿಧಾನ ನೀಡಿರುವ ಕಾನೂನುಗಳ ಬಗ್ಗೆ ಪ್ರಾಥಮಿಕವಾಗಿ ತಿಳಿದುಕೊಳ್ಳುವ ಅಗತ್ಯ ಹೆಚ್ಚಾಗಿದೆ' ಎಂದು ಸಿವಿಲ್ ನ್ಯಾಯಾಧೀಶರಾದ ಎಚ್.ಆರ್. ರವಿಕುಮಾರ್ ತಿಳಿಸಿದರು.<br /> <br /> ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ನ್ಯಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ನ್ಯಾಯ ಪಡೆದುಕೊಳ್ಳುವುದು ವ್ಯಕ್ತಿಯ ಮೂಲಭೂತ ಹಕ್ಕು. ದೇಶದ ಪ್ರತಿಪ್ರಜೆಗೂ ನ್ಯಾಯ ಸಿಗಲು ಹೋರಾಟ ಅನಿವಾರ್ಯ. ಅನಾದಿ ಕಾಲದಿಂದಲೂ ನ್ಯಾಯಾಂಗ ವ್ಯವಸ್ಥೆಯಲ್ಲಿ ಬದಲಾವಣೆ ಆಗುತ್ತಿವೆ. ಸಾಕ್ರೆಟಿಸ್ ಎಂಬ ತತ್ವಜ್ಞಾನಿಯ ಬರಹಗಳು ಇಂದಿಗೂ ಪ್ರಸ್ತುತವಾಗಿದೆ.<br /> <br /> ಪ್ರತಿಯೊಬ್ಬ ನ್ಯಾಯಾಧೀಶರೂ ಹಾಗೂ ವಕೀಲರು ಇದನ್ನು ಓದಬೇಕು. ಯಾವುದಾದರೂ ಇಲಾಖೆಯಿಂದ ಸಾರ್ವಜನಿಕರಿಗೆ ದೌರ್ಜನ್ಯವಾದರೆ ಇದನ್ನು ಖಂಡಿಸುವ ಅಗತ್ಯತೆ ಹೆಚ್ಚಾಗಿರುತ್ತದೆ. ಈ ಜ್ಞಾನ ಸಂಪಾದನೆಗೆ ಕಾನೂನಿನ ಅರಿವು ಅಗತ್ಯ ಎಂದರು.<br /> <br /> ವಕೀಲ ಮಾದೇಶ್ ಮಾತನಾಡಿ, ಸಾರ್ವಜನಿಕರು ತಮ್ಮ ಹಕ್ಕಿಗೆ ಚ್ಯುತಿ ಬಂದಾಗ ಎಚ್ಚೆತ್ತುಕೊಳ್ಳಬೇಕು. ಆದಿ ಮಾನವನಿಂದ ಹಿಡಿದು ಇಲ್ಲಿಯ ತನಕ ನ್ಯಾಯದ ಇತಿಹಾಸದಲ್ಲಿ ಅನೇಕ ಮಾರ್ಪಾಡುಗಳಾಗಿವೆ. ದೌರ್ಜನ್ಯ ನಿಯಂತ್ರಣಕ್ಕೆ ಕಾನೂನುಗಳ ರಚನೆಯಾಗಿವೆ. ಇದರ ರಕ್ಷಣೆ, ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.<br /> <br /> ತಾಲ್ಲೂಕು ವಕೀಲ ಸಂಘದ ಅಧ್ಯಕ್ಷ ಸಿ.ಸಿದ್ದರಾಜು, ವಕೀಲರಾದ ಮಂಜುನಾಥ್, ಚಿನ್ನಸ್ವಾಮಿ ಮಾತನಾಡಿದರು. ಚೇತನ್,ಸಂತೋಷ್, ಮಧುರನಾಥ್, ಲೋಕೇಶ್, ನವೀನ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು:</strong> `ಪ್ರಸಕ್ತ ದಿನಗಳಲ್ಲಿ ಪ್ರತಿಯೊಬ್ಬ ನಾಗರಿಕನು ಸಂವಿಧಾನ ನೀಡಿರುವ ಕಾನೂನುಗಳ ಬಗ್ಗೆ ಪ್ರಾಥಮಿಕವಾಗಿ ತಿಳಿದುಕೊಳ್ಳುವ ಅಗತ್ಯ ಹೆಚ್ಚಾಗಿದೆ' ಎಂದು ಸಿವಿಲ್ ನ್ಯಾಯಾಧೀಶರಾದ ಎಚ್.ಆರ್. ರವಿಕುಮಾರ್ ತಿಳಿಸಿದರು.<br /> <br /> ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ನ್ಯಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ನ್ಯಾಯ ಪಡೆದುಕೊಳ್ಳುವುದು ವ್ಯಕ್ತಿಯ ಮೂಲಭೂತ ಹಕ್ಕು. ದೇಶದ ಪ್ರತಿಪ್ರಜೆಗೂ ನ್ಯಾಯ ಸಿಗಲು ಹೋರಾಟ ಅನಿವಾರ್ಯ. ಅನಾದಿ ಕಾಲದಿಂದಲೂ ನ್ಯಾಯಾಂಗ ವ್ಯವಸ್ಥೆಯಲ್ಲಿ ಬದಲಾವಣೆ ಆಗುತ್ತಿವೆ. ಸಾಕ್ರೆಟಿಸ್ ಎಂಬ ತತ್ವಜ್ಞಾನಿಯ ಬರಹಗಳು ಇಂದಿಗೂ ಪ್ರಸ್ತುತವಾಗಿದೆ.<br /> <br /> ಪ್ರತಿಯೊಬ್ಬ ನ್ಯಾಯಾಧೀಶರೂ ಹಾಗೂ ವಕೀಲರು ಇದನ್ನು ಓದಬೇಕು. ಯಾವುದಾದರೂ ಇಲಾಖೆಯಿಂದ ಸಾರ್ವಜನಿಕರಿಗೆ ದೌರ್ಜನ್ಯವಾದರೆ ಇದನ್ನು ಖಂಡಿಸುವ ಅಗತ್ಯತೆ ಹೆಚ್ಚಾಗಿರುತ್ತದೆ. ಈ ಜ್ಞಾನ ಸಂಪಾದನೆಗೆ ಕಾನೂನಿನ ಅರಿವು ಅಗತ್ಯ ಎಂದರು.<br /> <br /> ವಕೀಲ ಮಾದೇಶ್ ಮಾತನಾಡಿ, ಸಾರ್ವಜನಿಕರು ತಮ್ಮ ಹಕ್ಕಿಗೆ ಚ್ಯುತಿ ಬಂದಾಗ ಎಚ್ಚೆತ್ತುಕೊಳ್ಳಬೇಕು. ಆದಿ ಮಾನವನಿಂದ ಹಿಡಿದು ಇಲ್ಲಿಯ ತನಕ ನ್ಯಾಯದ ಇತಿಹಾಸದಲ್ಲಿ ಅನೇಕ ಮಾರ್ಪಾಡುಗಳಾಗಿವೆ. ದೌರ್ಜನ್ಯ ನಿಯಂತ್ರಣಕ್ಕೆ ಕಾನೂನುಗಳ ರಚನೆಯಾಗಿವೆ. ಇದರ ರಕ್ಷಣೆ, ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.<br /> <br /> ತಾಲ್ಲೂಕು ವಕೀಲ ಸಂಘದ ಅಧ್ಯಕ್ಷ ಸಿ.ಸಿದ್ದರಾಜು, ವಕೀಲರಾದ ಮಂಜುನಾಥ್, ಚಿನ್ನಸ್ವಾಮಿ ಮಾತನಾಡಿದರು. ಚೇತನ್,ಸಂತೋಷ್, ಮಧುರನಾಥ್, ಲೋಕೇಶ್, ನವೀನ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>