<p>ಚಿತ್ರದುರ್ಗ: ಮಹಿಳೆಯರು ಕಾನೂನಿನ ಅರಿವು ಪಡೆದುಕೊಳ್ಳುವ ಮೂಲಕ ಜಾಗೃತರಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಕೌಟುಂಬಿಕ ಸಲಹೆಗಾರರಾದ ಆರತಿ ಕರೆ ನೀಡಿದರು.<br /> <br /> ನಗರದ ಎಸ್ಜೆಎಂ ಮಹಿಳಾ ಮಹಾವಿದ್ಯಾಲಯದಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹಿಳಾ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> 1995ರಲ್ಲಿ ಸ್ಥಾಪನೆಯಾದ ರಾಜ್ಯ ಮಹಿಳಾ ಆಯೋಗ ಅನೇಕ ಕಾರ್ಯಗಳನ್ನು ಕೈಗೊಂಡಿದೆ. ಮಹಿಳಾ ಕಾನೂನುಗಳ ಬಗ್ಗೆ ಜಾಗೃತಿ ಶಿಬಿರ, ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ರಕ್ಷಣೆ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ನ್ಯಾಯಾಲಯದಿಂದ ಸೂಕ್ತ ಪರಿಹಾರ ಕೊಡಿಸುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.<br /> <br /> ಆಯೋಗದ ಮತ್ತೋರ್ವ ಕೌಟುಂಬಿಕ ಸಲಹೆಗಾರರಾದ ಎಂ.ಜಯಮಾಲಾ ಮಾತನಾಡಿ, ಆಯೋಗದಲ್ಲಿ ವಾರದಲ್ಲಿ ಮೂರು ದಿನ ನೊಂದ ಮಹಿಳೆಯರಿಗೆ ಕೌನ್ಸಿಲಿಂಗ್ ಮಾಡುವ ವ್ಯವಸ್ಥೆ ಇದೆ ಎಂದು ತಿಳಿಸಿದರು.<br /> <br /> ವಕೀಲರಾದ ವಿಜಯಾ ಅವರು ‘ಮಹಿಳೆ ಮತ್ತು ಕಾನೂನು’ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ರಂಗಸ್ವಾಮಿ ವಹಿಸಿದ್ದರು. ವಿದ್ಯಾರ್ಥಿ ನಾಗಮಣಿ ಪ್ರಾರ್ಥಿಸಿದರು. ನೌಶಬ ಸ್ವಾಗತಿಸಿದರು. ನಂದಿನಿ ವಂದಿಸಿದರು. ಉಪನ್ಯಾಸಕಿ ಪ್ರೊಬಿ.ಆರ್. ವೀರಮ್ಮ ನಿರೂಪಿಸಿದರು.<br /> <strong><br /> ಅಭಿನಂದನೆ<br /> </strong>ಚಿತ್ರದುರ್ಗ: ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ನಲ್ಲಿ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಜಿ.ಎಲ್. ಕೃಷ್ಣಮೂರ್ತಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ಸಿಬ್ಬಂದಿ ವರ್ಗ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಮಹಿಳೆಯರು ಕಾನೂನಿನ ಅರಿವು ಪಡೆದುಕೊಳ್ಳುವ ಮೂಲಕ ಜಾಗೃತರಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಕೌಟುಂಬಿಕ ಸಲಹೆಗಾರರಾದ ಆರತಿ ಕರೆ ನೀಡಿದರು.<br /> <br /> ನಗರದ ಎಸ್ಜೆಎಂ ಮಹಿಳಾ ಮಹಾವಿದ್ಯಾಲಯದಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹಿಳಾ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> 1995ರಲ್ಲಿ ಸ್ಥಾಪನೆಯಾದ ರಾಜ್ಯ ಮಹಿಳಾ ಆಯೋಗ ಅನೇಕ ಕಾರ್ಯಗಳನ್ನು ಕೈಗೊಂಡಿದೆ. ಮಹಿಳಾ ಕಾನೂನುಗಳ ಬಗ್ಗೆ ಜಾಗೃತಿ ಶಿಬಿರ, ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ರಕ್ಷಣೆ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ನ್ಯಾಯಾಲಯದಿಂದ ಸೂಕ್ತ ಪರಿಹಾರ ಕೊಡಿಸುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.<br /> <br /> ಆಯೋಗದ ಮತ್ತೋರ್ವ ಕೌಟುಂಬಿಕ ಸಲಹೆಗಾರರಾದ ಎಂ.ಜಯಮಾಲಾ ಮಾತನಾಡಿ, ಆಯೋಗದಲ್ಲಿ ವಾರದಲ್ಲಿ ಮೂರು ದಿನ ನೊಂದ ಮಹಿಳೆಯರಿಗೆ ಕೌನ್ಸಿಲಿಂಗ್ ಮಾಡುವ ವ್ಯವಸ್ಥೆ ಇದೆ ಎಂದು ತಿಳಿಸಿದರು.<br /> <br /> ವಕೀಲರಾದ ವಿಜಯಾ ಅವರು ‘ಮಹಿಳೆ ಮತ್ತು ಕಾನೂನು’ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ರಂಗಸ್ವಾಮಿ ವಹಿಸಿದ್ದರು. ವಿದ್ಯಾರ್ಥಿ ನಾಗಮಣಿ ಪ್ರಾರ್ಥಿಸಿದರು. ನೌಶಬ ಸ್ವಾಗತಿಸಿದರು. ನಂದಿನಿ ವಂದಿಸಿದರು. ಉಪನ್ಯಾಸಕಿ ಪ್ರೊಬಿ.ಆರ್. ವೀರಮ್ಮ ನಿರೂಪಿಸಿದರು.<br /> <strong><br /> ಅಭಿನಂದನೆ<br /> </strong>ಚಿತ್ರದುರ್ಗ: ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ನಲ್ಲಿ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಜಿ.ಎಲ್. ಕೃಷ್ಣಮೂರ್ತಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ಸಿಬ್ಬಂದಿ ವರ್ಗ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>