<p>ಬಾದಾಮಿ: ದೇಶದ ಸಂವಿಧಾನದಲ್ಲಿ ಎಲ್ಲ ಪ್ರಜೆಗಳಿಗೆ ಅನ್ವಯವಾಗುವಂತೆ ಕಾನೂನನ್ನು ರಚಿಸಲಾಗಿದೆ. ಪ್ರಜಾ ಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಕಾನೂನಿನ ಅಡಿಯಲ್ಲಿ ಬದುಕಬೇಕು. ಪ್ರತಿಯೊಬ್ಬರು ಅಕ್ಷರಸ್ಥರಾಗಿ ಕಾನೂನನ್ನು ಅರಿತುಕೊಳ್ಳಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಬಿ.ನಾರಾಯಣಪ್ಪ ಹೇಳಿದರು.<br /> <br /> ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಜರುಗಿದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶೇ70ರಷ್ಟು ಜನಸಂಖ್ಯೆ ಇರುವ ಭಾರತ ದೇಶದ ಹಳ್ಳಿಗಳಲ್ಲಿರುವ ಜನತೆಗೆ ಸಾಕ್ಷರತೆಯ ಕೊರತೆಯಿಂದ ಕಾನೂನಿನ ಅರಿವು ಇಲ್ಲ. ಹೀಗಾಗಿ ಸಾಕ್ಷರತೆಯೊಂದಿಗೆ ಕಾನೂನು ಅರಿವು ಕೂಡ ಪ್ರತಿಯೊಬ್ಬರಿಗೂ ಅವಶ್ಯ ಎಂದರು.<br /> <br /> ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದುಪಯೋಗ ಪಡೆದು ರಾಜೀ ಸಂಧಾನದ ಮೂಲಕ ನ್ಯಾಯಗಳನ್ನು ಇತ್ಯರ್ಥಪಡಿಸಿ ಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಸಿವಿಲ್ ನ್ಯಾಯಾಧೀಶ ಜಿ.ಸಿ.ಹಡಪದ ಹೇಳಿದರು.<br /> <br /> ತಹಶೀಲ್ದಾರ ಮಹೇಶ ಕರ್ಜಗಿ ಕಂದಾಯ ಇಲಾಖೆಯ ಸಕಾಲದ ಸೌಲಭ್ಯಗಳನ್ನು ಮತ್ತು ಸರ್ಕಲ್ ಇನಸ್ಪೆಕ್ಟರ್ ಆರ್.ಎಸ್.ಪಾಟೀಲ ಕಾನೂನಿನ ಅವಶ್ಯಕತೆ ಕುರಿತು ತಿಳಿಸಿದರು. ವಕೀಲ ಎಸ್.ಆರ್.ಭರಾಣಪುರ ಕಾನೂನು ಸೇವಾ ಪ್ರಾಧಿಕಾರದ ಸೌಲಭ್ಯಗಳ ಬಗ್ಗೆ ತಿಳಿಸಿದರು.<br /> <br /> ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ನಂದಕುಮಾರ, ವಕೀಲರ ಸಂಘದ ಅಧ್ಯಕ್ಷ ಎ.ಬಿ.ಉದ್ನೂರ ವೇದಿಕೆ ಯಲ್ಲಿದ್ದರು. ಎಂ.ಎಂ.ಜಾತಗೇರ ಸ್ವಾಗತಿಸಿದರು. ಪ್ರಕಾಶ ಕಲಾಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾದಾಮಿ: ದೇಶದ ಸಂವಿಧಾನದಲ್ಲಿ ಎಲ್ಲ ಪ್ರಜೆಗಳಿಗೆ ಅನ್ವಯವಾಗುವಂತೆ ಕಾನೂನನ್ನು ರಚಿಸಲಾಗಿದೆ. ಪ್ರಜಾ ಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಕಾನೂನಿನ ಅಡಿಯಲ್ಲಿ ಬದುಕಬೇಕು. ಪ್ರತಿಯೊಬ್ಬರು ಅಕ್ಷರಸ್ಥರಾಗಿ ಕಾನೂನನ್ನು ಅರಿತುಕೊಳ್ಳಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಬಿ.ನಾರಾಯಣಪ್ಪ ಹೇಳಿದರು.<br /> <br /> ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಜರುಗಿದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶೇ70ರಷ್ಟು ಜನಸಂಖ್ಯೆ ಇರುವ ಭಾರತ ದೇಶದ ಹಳ್ಳಿಗಳಲ್ಲಿರುವ ಜನತೆಗೆ ಸಾಕ್ಷರತೆಯ ಕೊರತೆಯಿಂದ ಕಾನೂನಿನ ಅರಿವು ಇಲ್ಲ. ಹೀಗಾಗಿ ಸಾಕ್ಷರತೆಯೊಂದಿಗೆ ಕಾನೂನು ಅರಿವು ಕೂಡ ಪ್ರತಿಯೊಬ್ಬರಿಗೂ ಅವಶ್ಯ ಎಂದರು.<br /> <br /> ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದುಪಯೋಗ ಪಡೆದು ರಾಜೀ ಸಂಧಾನದ ಮೂಲಕ ನ್ಯಾಯಗಳನ್ನು ಇತ್ಯರ್ಥಪಡಿಸಿ ಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಸಿವಿಲ್ ನ್ಯಾಯಾಧೀಶ ಜಿ.ಸಿ.ಹಡಪದ ಹೇಳಿದರು.<br /> <br /> ತಹಶೀಲ್ದಾರ ಮಹೇಶ ಕರ್ಜಗಿ ಕಂದಾಯ ಇಲಾಖೆಯ ಸಕಾಲದ ಸೌಲಭ್ಯಗಳನ್ನು ಮತ್ತು ಸರ್ಕಲ್ ಇನಸ್ಪೆಕ್ಟರ್ ಆರ್.ಎಸ್.ಪಾಟೀಲ ಕಾನೂನಿನ ಅವಶ್ಯಕತೆ ಕುರಿತು ತಿಳಿಸಿದರು. ವಕೀಲ ಎಸ್.ಆರ್.ಭರಾಣಪುರ ಕಾನೂನು ಸೇವಾ ಪ್ರಾಧಿಕಾರದ ಸೌಲಭ್ಯಗಳ ಬಗ್ಗೆ ತಿಳಿಸಿದರು.<br /> <br /> ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ನಂದಕುಮಾರ, ವಕೀಲರ ಸಂಘದ ಅಧ್ಯಕ್ಷ ಎ.ಬಿ.ಉದ್ನೂರ ವೇದಿಕೆ ಯಲ್ಲಿದ್ದರು. ಎಂ.ಎಂ.ಜಾತಗೇರ ಸ್ವಾಗತಿಸಿದರು. ಪ್ರಕಾಶ ಕಲಾಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>