<p>ಗೋಣಿಕೊಪ್ಪಲು: ವಿದ್ಯಾರ್ಥಿಗಳು ಕಾನೂನು ಪಾಲಕರಾಗಬೇಕು. ಯಾವುದೇ ಕಾರಣಕ್ಕೂ ಕಾನೂನು ಮೀರಿ ನಡೆಯಬಾರದು ಎಂದು ಸ್ಥಳೀಯ ವೃತ್ತ ನಿರೀಕ್ಷಕ ಶೈಲೇಂದ್ರ ಹೇಳಿದರು.<br /> <br /> ಕಾವೇರಿ ಕಾಲೇಜಿನ ರಾಜ್ಯಶಾಸ್ತ್ರ ಪ್ರಜ್ಞಾ ಸಂಘ ಉದ್ಘಾಟಿಸಿ ಮಾತನಾ ಡಿದ ಅವರು, ಕಾಲೇಜಿನ ಹೊರಗೆ ಮತ್ತು ಒಳಗೆ ಶಿಸ್ತಿನಿಂದ ನಡೆದು ಕೊಳ್ಳಬೇಕು. ಮೋಜಿಗಾಗಿ ಬೈಕ್ ಸವಾರಿ ಮಾಡಬಾರದು. ರಸ್ತೆಯಲ್ಲಿ ಸಂಚರಿಸುವಾಗ ಸಂಚಾರ ನಿಯಮ ಗಳನ್ನು ಪಾಲಿಸಬೇಕು ಎಂದರು. <br /> <br /> ಪಟ್ಟಣದಲ್ಲಿ ಡ್ರಗ್ಸ್ ಜಾಲ ಹರಡಿರುವ ಬಗ್ಗೆ ದೂರುಗಳು ಬರುತ್ತಿವೆ. ವಿದ್ಯಾರ್ಥಿಗಳು ಈ ಬಗ್ಗೆ ಎಚ್ಚರದಿಂದ ಇರಬೇಕು. ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಂಡು ವ್ಯವಸ್ಥೆ ಸುಧಾರಣೆಗೆ ಶ್ರಮಿಸಲಿದೆ. ಸಮಾಜ ಘಾತುಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಎಚ್ಚರ ವಹಿಸಬೇಕು ಎಂದರು.<br /> <br /> ಪ್ರಾಂಶುಪಾಲ ಐ.ಕೆ.ಬಿದ್ದಪ್ಪ ಮಾತ ನಾಡಿ, ದೇಶಕ್ಕೆ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತವಿಲ್ಲದ ನಾಯಕರ ಅಗತ್ಯವಿದೆ. ವಿದ್ಯಾರ್ಥಿಗಳು ಇಂತಹ ಗುಣ ಮೈಗೂಡಿಸಿಕೊಂಡು ಉತ್ತಮ ನಾಯಕರಾಗಬೇಕು ಎಂದರು. <br /> <br /> ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಅಕ್ಕಮ್ಮ ಪ್ರಾಸ್ತಾವಿಕ ಮಾತುಗಳ ನ್ನಾಡಿದರು. ಅರ್ಪಿತ ಪ್ರಾರ್ಥಿಸಿದರು. ಪವನ್ ಸ್ವಾಗತಿಸಿದರು. ತನ್ವೀರ್ ನಿರೂಪಿಸಿದರು. ತೀಶ್ಮ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಣಿಕೊಪ್ಪಲು: ವಿದ್ಯಾರ್ಥಿಗಳು ಕಾನೂನು ಪಾಲಕರಾಗಬೇಕು. ಯಾವುದೇ ಕಾರಣಕ್ಕೂ ಕಾನೂನು ಮೀರಿ ನಡೆಯಬಾರದು ಎಂದು ಸ್ಥಳೀಯ ವೃತ್ತ ನಿರೀಕ್ಷಕ ಶೈಲೇಂದ್ರ ಹೇಳಿದರು.<br /> <br /> ಕಾವೇರಿ ಕಾಲೇಜಿನ ರಾಜ್ಯಶಾಸ್ತ್ರ ಪ್ರಜ್ಞಾ ಸಂಘ ಉದ್ಘಾಟಿಸಿ ಮಾತನಾ ಡಿದ ಅವರು, ಕಾಲೇಜಿನ ಹೊರಗೆ ಮತ್ತು ಒಳಗೆ ಶಿಸ್ತಿನಿಂದ ನಡೆದು ಕೊಳ್ಳಬೇಕು. ಮೋಜಿಗಾಗಿ ಬೈಕ್ ಸವಾರಿ ಮಾಡಬಾರದು. ರಸ್ತೆಯಲ್ಲಿ ಸಂಚರಿಸುವಾಗ ಸಂಚಾರ ನಿಯಮ ಗಳನ್ನು ಪಾಲಿಸಬೇಕು ಎಂದರು. <br /> <br /> ಪಟ್ಟಣದಲ್ಲಿ ಡ್ರಗ್ಸ್ ಜಾಲ ಹರಡಿರುವ ಬಗ್ಗೆ ದೂರುಗಳು ಬರುತ್ತಿವೆ. ವಿದ್ಯಾರ್ಥಿಗಳು ಈ ಬಗ್ಗೆ ಎಚ್ಚರದಿಂದ ಇರಬೇಕು. ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಂಡು ವ್ಯವಸ್ಥೆ ಸುಧಾರಣೆಗೆ ಶ್ರಮಿಸಲಿದೆ. ಸಮಾಜ ಘಾತುಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಎಚ್ಚರ ವಹಿಸಬೇಕು ಎಂದರು.<br /> <br /> ಪ್ರಾಂಶುಪಾಲ ಐ.ಕೆ.ಬಿದ್ದಪ್ಪ ಮಾತ ನಾಡಿ, ದೇಶಕ್ಕೆ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತವಿಲ್ಲದ ನಾಯಕರ ಅಗತ್ಯವಿದೆ. ವಿದ್ಯಾರ್ಥಿಗಳು ಇಂತಹ ಗುಣ ಮೈಗೂಡಿಸಿಕೊಂಡು ಉತ್ತಮ ನಾಯಕರಾಗಬೇಕು ಎಂದರು. <br /> <br /> ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಅಕ್ಕಮ್ಮ ಪ್ರಾಸ್ತಾವಿಕ ಮಾತುಗಳ ನ್ನಾಡಿದರು. ಅರ್ಪಿತ ಪ್ರಾರ್ಥಿಸಿದರು. ಪವನ್ ಸ್ವಾಗತಿಸಿದರು. ತನ್ವೀರ್ ನಿರೂಪಿಸಿದರು. ತೀಶ್ಮ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>