<p><strong>ನವದೆಹಲಿ (ಐಎಎನ್ಎಸ್):</strong> ಪಾರ್ಕಿಂಗ್ ವಿಷಯದಲ್ಲಿ ಆರಂಭವಾದ ಚಿಕ್ಕ ಜಗಳ ಸಾವಿನಲ್ಲಿ ಅಂತ್ಯಗೊಂಡ<br /> ಘಟನೆ ದೆಹಲಿಯ ಕಾನೂನು ಕಾಲೇಜು ಆವರಣದಲ್ಲಿ ನಡೆದಿದೆ.<br /> <br /> ಆಯುಷ್ (22) ಮೃತಪಟ್ಟ ವಿದ್ಯಾರ್ಥಿ. ಈತ ಕಾಲೇಜಿನ ಮುಂದೆ ತನ್ನ ಮೊಬೈಕನ್ನು ನಿಲ್ಲಿಸಲು ಹೋದಾಗ ಇತರೆ ಇಬ್ಬರು ವಿದ್ಯಾರ್ಥಿಗಳಾದ ಅಮಿತ್ ನರಾರ್ ಮತ್ತು ತನುಜ್ ತಿವಾರಿಯೊಂದಿಗೆ ಜಗಳವಾಗಿದೆ. ಆಗ ಇವರಿಬ್ಬರು ಆಯುಷ್ ಮೇಲೆ ಹಲ್ಲೆ ನಡೆಸಿದ್ದಾರೆ.<br /> <br /> ಇದರಿಂದ ತೀವ್ರ ಅಸ್ವಸ್ಥಗೊಂಡ ಆಯುಷ್ನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.<br /> <br /> ಅಲ್ಲಿ ವೈದ್ಯರು ಬೇರೆ ಆಸ್ಪತ್ರೆಗೆ ಹೋಗಲು ಸೂಚಿಸಿದ್ದಾರೆ. ಬೇರೆ ಆಸ್ಪತ್ರೆಯಲ್ಲಿ ಆಯುಷ್ನನ್ನು ದಾಖಲಿಸಿದ್ದರೂ ಸಹ ಶನಿವಾರ ಬೆಳಿಗ್ಗೆ ಸಾವನ್ನಪ್ಪಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> <strong>ಪಾಕ್ ಭಯೋತ್ಪಾದನೆ: ಭಾರತದ ಆತಂಕ<br /> ನವದೆಹಲಿ (ಪಿಟಿಐ):</strong> ಪಾಕಿಸ್ತಾನದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ತೀವ್ರ ಆತಂಕವಿದೆ. ಆದರೆ ಭಯೋತ್ಪಾದನೆಗೆ ಭಯೋತ್ಪಾದನೆಯೇ ಉತ್ತರವಲ್ಲ ಎಂದು ಭಾರತ ಹೇಳಿದೆ.<br /> <br /> ಸಂದರ್ಭಾನುಸಾರ ನಾವು ಸಾಧ್ಯವಾದಷ್ಟು ಮಟ್ಟಿಗೆ ಸೂಕ್ತ ರೀತಿಯಲ್ಲಿ ಪಾಕಿಸ್ತಾನದ ಜತೆ ವ್ಯವಹರಿಸಬೇಕಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ಪಾರ್ಕಿಂಗ್ ವಿಷಯದಲ್ಲಿ ಆರಂಭವಾದ ಚಿಕ್ಕ ಜಗಳ ಸಾವಿನಲ್ಲಿ ಅಂತ್ಯಗೊಂಡ<br /> ಘಟನೆ ದೆಹಲಿಯ ಕಾನೂನು ಕಾಲೇಜು ಆವರಣದಲ್ಲಿ ನಡೆದಿದೆ.<br /> <br /> ಆಯುಷ್ (22) ಮೃತಪಟ್ಟ ವಿದ್ಯಾರ್ಥಿ. ಈತ ಕಾಲೇಜಿನ ಮುಂದೆ ತನ್ನ ಮೊಬೈಕನ್ನು ನಿಲ್ಲಿಸಲು ಹೋದಾಗ ಇತರೆ ಇಬ್ಬರು ವಿದ್ಯಾರ್ಥಿಗಳಾದ ಅಮಿತ್ ನರಾರ್ ಮತ್ತು ತನುಜ್ ತಿವಾರಿಯೊಂದಿಗೆ ಜಗಳವಾಗಿದೆ. ಆಗ ಇವರಿಬ್ಬರು ಆಯುಷ್ ಮೇಲೆ ಹಲ್ಲೆ ನಡೆಸಿದ್ದಾರೆ.<br /> <br /> ಇದರಿಂದ ತೀವ್ರ ಅಸ್ವಸ್ಥಗೊಂಡ ಆಯುಷ್ನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.<br /> <br /> ಅಲ್ಲಿ ವೈದ್ಯರು ಬೇರೆ ಆಸ್ಪತ್ರೆಗೆ ಹೋಗಲು ಸೂಚಿಸಿದ್ದಾರೆ. ಬೇರೆ ಆಸ್ಪತ್ರೆಯಲ್ಲಿ ಆಯುಷ್ನನ್ನು ದಾಖಲಿಸಿದ್ದರೂ ಸಹ ಶನಿವಾರ ಬೆಳಿಗ್ಗೆ ಸಾವನ್ನಪ್ಪಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> <strong>ಪಾಕ್ ಭಯೋತ್ಪಾದನೆ: ಭಾರತದ ಆತಂಕ<br /> ನವದೆಹಲಿ (ಪಿಟಿಐ):</strong> ಪಾಕಿಸ್ತಾನದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ತೀವ್ರ ಆತಂಕವಿದೆ. ಆದರೆ ಭಯೋತ್ಪಾದನೆಗೆ ಭಯೋತ್ಪಾದನೆಯೇ ಉತ್ತರವಲ್ಲ ಎಂದು ಭಾರತ ಹೇಳಿದೆ.<br /> <br /> ಸಂದರ್ಭಾನುಸಾರ ನಾವು ಸಾಧ್ಯವಾದಷ್ಟು ಮಟ್ಟಿಗೆ ಸೂಕ್ತ ರೀತಿಯಲ್ಲಿ ಪಾಕಿಸ್ತಾನದ ಜತೆ ವ್ಯವಹರಿಸಬೇಕಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>