<p><strong>ನವದೆಹಲಿ, (ಪಿಟಿಐ):</strong> ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರು `ಉದ್ಯಮಿಗಳನ್ನು ಜೈಲಿಗೆ ಕಳುಹಿಸುವುದರಿಂದ ದೇಶದಲ್ಲಿ ಬಂಡವಾಳ ಹೂಡಿಕೆಗೆ ಅಡ್ಡಿಯುಂಟಾಗುತ್ತದೆ~ ಎಂದು ಹೇಳಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಹೇಳಿಕೆ ನೀಡಿರುವುದು ನಿಜವೇ ಆಗಿದ್ದಲ್ಲಿ `ಗೊಂದಲಕಾರಿ~ ಹೇಳಿಕೆಯಾಗುತ್ತದೆ ಎಂದು ತಿಳಿಸಿದೆ.<br /> <br /> ಕಾನೂನು ಸಚಿವರ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡುವಂತೆ ನ್ಯಾಯಮೂರ್ತಿ ಜಿ.ಎಸ್.ಸಿಂಘ್ವಿ ಮತ್ತು ಎಚ್.ಎಲ್.ದತ್ತು ಅವರನ್ನು ಒಳಗೊಂಡ ನ್ಯಾಯಪೀಠ, ಅಡಿಷನಲ್ ಸಾಲಿಸಿಟರ್ ಜನರಲ್ ಹರೇನ್ ರಾವಲ್ ಅವರಿಗೆ ಸೂಚಿಸಿದೆ.<br /> <br /> 2ಜಿ ತರಂಗಾಂತರ ಹಂಚಿಕೆ ಹಗರಣದ ಆಪಾದಿತರಾದ ಯುನಿಟೆಕ್ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಚಂದ್ರ ಮತ್ತು ಸ್ವಾನ್ ಟೆಲಿಕಾಂ ನಿರ್ದೇಶಕ ವಿನೋದ್ ಗೋಯಂಕ ಅವರ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಮೇಲಿನಂತೆ ಪ್ರತಿಕ್ರಿಯಿಸಿದರು.<br /> <br /> ಪ್ರಮುಖ ಪತ್ರಿಕೆಗಳಲ್ಲಿ ಕಾನೂನು ಸಚಿವರ ಹೇಳಿಕೆ ಪ್ರಕಟವಾಗಿದ್ದು, ನಾವು ಉದ್ಯಮಿಗಳನ್ನು ಜೈಲಿನಲ್ಲಿ ಇಡಲು ಆಸಕ್ತಿ ತೋರಿಸುತ್ತಿದ್ದೇವೆ ಎಂಬ ಅರ್ಥ ಬರುತ್ತದೆ ಎಂದು ಹೇಳಿದರು.<br /> <br /> ಈ ಹಂತದಲ್ಲಿ ಮಾತನಾಡಿದ ಗೋಯಂಕ ಪರ ವಕೀಲ ಮುಕುಲ್ ರೋಹಟಗಿ, ಸಚಿವರ ಹೇಳಿಕೆ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿರುವುದು ನಿಜ ಎಂದು ತಿಳಿಸಿದರು.</p>.<p><br /> ಸಚಿವರ ಹೇಳಿಕೆಯನ್ನು ಬೆಂಬಲಿಸುವಿರಾ ಎಂದು ರಾವಲ್ ಅವರನ್ನು ನ್ಯಾಯಪೀಠ ಕೇಳಿತು ಮತ್ತು ಕನಿಮೊಳಿ ಅವರ ಜಾಮೀನು ಅರ್ಜಿಯನ್ನು ವಿರೋಧಿಸದಿರಲು ಸಿಬಿಐ ನಿರ್ಧರಿಸಿದೆ ಎಂಬ ವರದಿಯ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿತು.<br /> <br /> ರಾವಲ್ ಅವರು ಈ ವರದಿಯನ್ನು ನಿರಾಕರಿಸಿದರಲ್ಲದೆ, ಕನಿಮೊಳಿ ಅವರ ಜಾಮೀನು ಅರ್ಜಿಯನ್ನು ವಿರೋಧಿಸುವಂತೆ ತಮಗೆ ಸ್ಪಷ್ಟ ಆದೇಶವಿದೆ ಎಂದರು.<br /> <br /> <strong>ಖುರ್ಷಿದ್ ಸ್ಪಷ್ಟನೆ: </strong>ಮಂಗಳವಾರ ರಾತ್ರಿ ತಾವು ನೀಡಿದ ಹೇಳಿಕೆಯನ್ನು ಸರಿಪಡಿಸುವ ಪ್ರಯತ್ನ ಮಾಡಿರುವ ಕಾನೂನು ಸಚಿವ ಸಲ್ಮಾನ್ ಖುರ್ಷಿದ್, `ಯಾರು ಜೈಲಿನಲ್ಲಿ ಇರಬೇಕು ಎಂದು ನಿರ್ಧಾರ ಮಾಡಬೇಕಾದ್ದು ನ್ಯಾಯಾಲಯ~ ಎಂದು ತಿಳಿಸಿದ್ದಾರೆ.<br /> <br /> ನ್ಯಾಯಾಂಗವು ರಾಜಕೀಯ, ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ತಾವು ನೀಡಿರುವ ಹೇಳಿಕೆ ವಿವಾದ ಉಂಟು ಮಾಡಿರುವ ಬಗ್ಗೆ ಸಮಜಾಯಿಷಿ ನೀಡಿರುವ ಸಚಿವರು, ತಮ್ಮ ಹೇಳಿಕೆಗೂ 2ಜಿ ಹಗರಣದ ಪ್ರಕರಣಗಳಿಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.<br /> <br /> ಬದಲಾಗುತ್ತಿರುವ ಸಮಾಜದಲ್ಲಿ ಪ್ರತಿಯೊಂದು ಸಂಸ್ಥೆಯೂ ಅದಕ್ಕೆ ತಕ್ಕ ರೀತಿಯಲ್ಲಿ ಪ್ರತಿಕ್ರಿಯಿಸಬೇಕಾಗುತ್ತದೆ, ಪರಿಸರ ರಕ್ಷಣೆಯ ವಿಚಾರದಲ್ಲಿ ನ್ಯಾಯಾಂಗ ತಳೆದಿರುವ ನಿಲುವು ಶ್ಲಾಘನೀಯ ಎಂದು ಹೇಳಿದ್ದಾರೆ.<br /> <br /> ಮಾವೊವಾದಿಗಳಿಗೆ ಸಹಾನುಭೂತಿ ವ್ಯಕ್ತಪಡಿಸಿದ ವಿನಾಯಕ ಸೆನ್ ಅವರಿಗೆ ಜಾಮೀನು ನೀಡುವಾಗ ಅವರು ತಪ್ಪಿತಸ್ಥರಲ್ಲ ಎಂದೇನೂ ಸುಪ್ರೀಂಕೋರ್ಟ್ ಹೇಳಿಲ್ಲ ಎಂಬುದನ್ನು ಸಚಿವರು ಈ ಸಂದರ್ಭದಲ್ಲಿ ಮಾರ್ಮಿಕವಾಗಿ ಪ್ರಸ್ತಾಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, (ಪಿಟಿಐ):</strong> ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರು `ಉದ್ಯಮಿಗಳನ್ನು ಜೈಲಿಗೆ ಕಳುಹಿಸುವುದರಿಂದ ದೇಶದಲ್ಲಿ ಬಂಡವಾಳ ಹೂಡಿಕೆಗೆ ಅಡ್ಡಿಯುಂಟಾಗುತ್ತದೆ~ ಎಂದು ಹೇಳಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಹೇಳಿಕೆ ನೀಡಿರುವುದು ನಿಜವೇ ಆಗಿದ್ದಲ್ಲಿ `ಗೊಂದಲಕಾರಿ~ ಹೇಳಿಕೆಯಾಗುತ್ತದೆ ಎಂದು ತಿಳಿಸಿದೆ.<br /> <br /> ಕಾನೂನು ಸಚಿವರ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡುವಂತೆ ನ್ಯಾಯಮೂರ್ತಿ ಜಿ.ಎಸ್.ಸಿಂಘ್ವಿ ಮತ್ತು ಎಚ್.ಎಲ್.ದತ್ತು ಅವರನ್ನು ಒಳಗೊಂಡ ನ್ಯಾಯಪೀಠ, ಅಡಿಷನಲ್ ಸಾಲಿಸಿಟರ್ ಜನರಲ್ ಹರೇನ್ ರಾವಲ್ ಅವರಿಗೆ ಸೂಚಿಸಿದೆ.<br /> <br /> 2ಜಿ ತರಂಗಾಂತರ ಹಂಚಿಕೆ ಹಗರಣದ ಆಪಾದಿತರಾದ ಯುನಿಟೆಕ್ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಚಂದ್ರ ಮತ್ತು ಸ್ವಾನ್ ಟೆಲಿಕಾಂ ನಿರ್ದೇಶಕ ವಿನೋದ್ ಗೋಯಂಕ ಅವರ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಮೇಲಿನಂತೆ ಪ್ರತಿಕ್ರಿಯಿಸಿದರು.<br /> <br /> ಪ್ರಮುಖ ಪತ್ರಿಕೆಗಳಲ್ಲಿ ಕಾನೂನು ಸಚಿವರ ಹೇಳಿಕೆ ಪ್ರಕಟವಾಗಿದ್ದು, ನಾವು ಉದ್ಯಮಿಗಳನ್ನು ಜೈಲಿನಲ್ಲಿ ಇಡಲು ಆಸಕ್ತಿ ತೋರಿಸುತ್ತಿದ್ದೇವೆ ಎಂಬ ಅರ್ಥ ಬರುತ್ತದೆ ಎಂದು ಹೇಳಿದರು.<br /> <br /> ಈ ಹಂತದಲ್ಲಿ ಮಾತನಾಡಿದ ಗೋಯಂಕ ಪರ ವಕೀಲ ಮುಕುಲ್ ರೋಹಟಗಿ, ಸಚಿವರ ಹೇಳಿಕೆ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿರುವುದು ನಿಜ ಎಂದು ತಿಳಿಸಿದರು.</p>.<p><br /> ಸಚಿವರ ಹೇಳಿಕೆಯನ್ನು ಬೆಂಬಲಿಸುವಿರಾ ಎಂದು ರಾವಲ್ ಅವರನ್ನು ನ್ಯಾಯಪೀಠ ಕೇಳಿತು ಮತ್ತು ಕನಿಮೊಳಿ ಅವರ ಜಾಮೀನು ಅರ್ಜಿಯನ್ನು ವಿರೋಧಿಸದಿರಲು ಸಿಬಿಐ ನಿರ್ಧರಿಸಿದೆ ಎಂಬ ವರದಿಯ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿತು.<br /> <br /> ರಾವಲ್ ಅವರು ಈ ವರದಿಯನ್ನು ನಿರಾಕರಿಸಿದರಲ್ಲದೆ, ಕನಿಮೊಳಿ ಅವರ ಜಾಮೀನು ಅರ್ಜಿಯನ್ನು ವಿರೋಧಿಸುವಂತೆ ತಮಗೆ ಸ್ಪಷ್ಟ ಆದೇಶವಿದೆ ಎಂದರು.<br /> <br /> <strong>ಖುರ್ಷಿದ್ ಸ್ಪಷ್ಟನೆ: </strong>ಮಂಗಳವಾರ ರಾತ್ರಿ ತಾವು ನೀಡಿದ ಹೇಳಿಕೆಯನ್ನು ಸರಿಪಡಿಸುವ ಪ್ರಯತ್ನ ಮಾಡಿರುವ ಕಾನೂನು ಸಚಿವ ಸಲ್ಮಾನ್ ಖುರ್ಷಿದ್, `ಯಾರು ಜೈಲಿನಲ್ಲಿ ಇರಬೇಕು ಎಂದು ನಿರ್ಧಾರ ಮಾಡಬೇಕಾದ್ದು ನ್ಯಾಯಾಲಯ~ ಎಂದು ತಿಳಿಸಿದ್ದಾರೆ.<br /> <br /> ನ್ಯಾಯಾಂಗವು ರಾಜಕೀಯ, ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ತಾವು ನೀಡಿರುವ ಹೇಳಿಕೆ ವಿವಾದ ಉಂಟು ಮಾಡಿರುವ ಬಗ್ಗೆ ಸಮಜಾಯಿಷಿ ನೀಡಿರುವ ಸಚಿವರು, ತಮ್ಮ ಹೇಳಿಕೆಗೂ 2ಜಿ ಹಗರಣದ ಪ್ರಕರಣಗಳಿಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.<br /> <br /> ಬದಲಾಗುತ್ತಿರುವ ಸಮಾಜದಲ್ಲಿ ಪ್ರತಿಯೊಂದು ಸಂಸ್ಥೆಯೂ ಅದಕ್ಕೆ ತಕ್ಕ ರೀತಿಯಲ್ಲಿ ಪ್ರತಿಕ್ರಿಯಿಸಬೇಕಾಗುತ್ತದೆ, ಪರಿಸರ ರಕ್ಷಣೆಯ ವಿಚಾರದಲ್ಲಿ ನ್ಯಾಯಾಂಗ ತಳೆದಿರುವ ನಿಲುವು ಶ್ಲಾಘನೀಯ ಎಂದು ಹೇಳಿದ್ದಾರೆ.<br /> <br /> ಮಾವೊವಾದಿಗಳಿಗೆ ಸಹಾನುಭೂತಿ ವ್ಯಕ್ತಪಡಿಸಿದ ವಿನಾಯಕ ಸೆನ್ ಅವರಿಗೆ ಜಾಮೀನು ನೀಡುವಾಗ ಅವರು ತಪ್ಪಿತಸ್ಥರಲ್ಲ ಎಂದೇನೂ ಸುಪ್ರೀಂಕೋರ್ಟ್ ಹೇಳಿಲ್ಲ ಎಂಬುದನ್ನು ಸಚಿವರು ಈ ಸಂದರ್ಭದಲ್ಲಿ ಮಾರ್ಮಿಕವಾಗಿ ಪ್ರಸ್ತಾಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>