<p><strong>ನಿಪ್ಪಾಣಿ: </strong>`ನ್ಯಾಯಾಲಯದ ಮೆಟ್ಟಿಲೆ ರುವ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದರೆ ಆತನಿಗೆ ತಕ್ಕ ವೈದ್ಯಕೀಯ ಉಪಚಾರವನ್ನು ಒದಗಿಸಿ ಕೊಡುವುದು ನ್ಯಾಯಾಧೀಶರ ಕರ್ತವ್ಯ. ಅಂಥ ಮನೋರೋಗಿಗಳ ಬಗ್ಗೆ ಸಂವೇದನಾಶೀಲತೆಯನ್ನು ಹೊಂದು ವುದು ಅವಶ್ಯಕ~ ಎಂದು ಸ್ಥಳೀಯ ಸಿವಿಲ್ ನ್ಯಾಯಾಧೀಶ ಸುಬ್ರಹ್ಮಣ್ಯ ಎನ್. ಅಭಿಪ್ರಾಯಪಟ್ಟರು.<br /> <br /> ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಆರೋಗ್ಯ ಇಲಾಖೆ ಆಶ್ರಯದಲ್ಲಿ ಬುಧವಾರ ಕೆ.ಎಲ್.ಇ ಸಂಸ್ಥೆಯ ಔಷಧೀಯ ಮಹಾವಿದ್ಯಾಲ ಯದಲ್ಲಿ ನಡೆದ `ಮಾನಸಿಕ ರೋಗದಿಂದ ನರಳುತ್ತಿರುವ ವ್ಯಕ್ತಿಗಳ ಹಕ್ಕುಗಳು~ ವಿಷಯದ ಬಗ್ಗೆ ಕಾನೂನು ಸಾಕ್ಷರತಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಡಾ.ಎಂ.ಐ. ನಾರಗಬೆಟ್ಟ ಮಾನಸಿಕ ಅಸ್ವಸ್ಥತೆಗೆ ಕಾರಣಗಳು, ನೀಡಬೇಕಾದ ಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕಿ ಎಸ್.ಸಿ. ಶಿವಪೂರಕರ ಮಾನಸಿಕ ಆರೋಗ್ಯ ಕಾಯ್ದೆಯ ಕುರಿತು ಮಾಹಿತಿ ನೀಡಿದರು.<br /> ಪ್ರಾಚಾರ್ಯ ಜೆ.ಕೆ. ಸಾಬೋಜಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಕಾರ್ಯಕ್ರಮದಲ್ಲಿ ಡಾ.ರಮೇಶ ಕುರ್ಲಿ, ವಕೀಲರ ಸಂಘದ ಅಧ್ಯಕ್ಷ ಎಂ.ಜಿ. ಖಡಖಡೆ, ಕಾರ್ಯದರ್ಶಿ ಬಿ.ಎ. ಬನ್ನೆ, ವಕೀಲರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಹಾಯಕ ಉಪನ್ಯಾಸಕ ಎಸ್.ಎಂ. ಪಾಟೀಲ ನಿರೂಪಿಸಿದರು. ಆರ್.ಎಸ್. ಬಗ್ಲಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಪ್ಪಾಣಿ: </strong>`ನ್ಯಾಯಾಲಯದ ಮೆಟ್ಟಿಲೆ ರುವ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದರೆ ಆತನಿಗೆ ತಕ್ಕ ವೈದ್ಯಕೀಯ ಉಪಚಾರವನ್ನು ಒದಗಿಸಿ ಕೊಡುವುದು ನ್ಯಾಯಾಧೀಶರ ಕರ್ತವ್ಯ. ಅಂಥ ಮನೋರೋಗಿಗಳ ಬಗ್ಗೆ ಸಂವೇದನಾಶೀಲತೆಯನ್ನು ಹೊಂದು ವುದು ಅವಶ್ಯಕ~ ಎಂದು ಸ್ಥಳೀಯ ಸಿವಿಲ್ ನ್ಯಾಯಾಧೀಶ ಸುಬ್ರಹ್ಮಣ್ಯ ಎನ್. ಅಭಿಪ್ರಾಯಪಟ್ಟರು.<br /> <br /> ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಆರೋಗ್ಯ ಇಲಾಖೆ ಆಶ್ರಯದಲ್ಲಿ ಬುಧವಾರ ಕೆ.ಎಲ್.ಇ ಸಂಸ್ಥೆಯ ಔಷಧೀಯ ಮಹಾವಿದ್ಯಾಲ ಯದಲ್ಲಿ ನಡೆದ `ಮಾನಸಿಕ ರೋಗದಿಂದ ನರಳುತ್ತಿರುವ ವ್ಯಕ್ತಿಗಳ ಹಕ್ಕುಗಳು~ ವಿಷಯದ ಬಗ್ಗೆ ಕಾನೂನು ಸಾಕ್ಷರತಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಡಾ.ಎಂ.ಐ. ನಾರಗಬೆಟ್ಟ ಮಾನಸಿಕ ಅಸ್ವಸ್ಥತೆಗೆ ಕಾರಣಗಳು, ನೀಡಬೇಕಾದ ಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕಿ ಎಸ್.ಸಿ. ಶಿವಪೂರಕರ ಮಾನಸಿಕ ಆರೋಗ್ಯ ಕಾಯ್ದೆಯ ಕುರಿತು ಮಾಹಿತಿ ನೀಡಿದರು.<br /> ಪ್ರಾಚಾರ್ಯ ಜೆ.ಕೆ. ಸಾಬೋಜಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಕಾರ್ಯಕ್ರಮದಲ್ಲಿ ಡಾ.ರಮೇಶ ಕುರ್ಲಿ, ವಕೀಲರ ಸಂಘದ ಅಧ್ಯಕ್ಷ ಎಂ.ಜಿ. ಖಡಖಡೆ, ಕಾರ್ಯದರ್ಶಿ ಬಿ.ಎ. ಬನ್ನೆ, ವಕೀಲರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಹಾಯಕ ಉಪನ್ಯಾಸಕ ಎಸ್.ಎಂ. ಪಾಟೀಲ ನಿರೂಪಿಸಿದರು. ಆರ್.ಎಸ್. ಬಗ್ಲಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>