<p><strong>ಬೆಂಗಳೂರು:</strong> ರಾಜಗೋಪಾಲನಗರ ಒಳವರ್ತುಲ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಕಾನ್ಸ್ಟೆಬಲ್ ದೊಡ್ಡಸಿದ್ದಯ್ಯ (35) ಅವರಿಗೆ ಸವಾರನೊಬ್ಬ ಬೈಕ್ ಗುದ್ದಿಸಿ ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.<br /> <br /> ರಾಜಗೋಪಾಲನಗರ ಠಾಣೆಯ ಕಾನ್ಸ್ಟೆಬಲ್ ದೊಡ್ಡಸಿದ್ದಯ್ಯ ಅವರು ಮತ್ತೊಬ್ಬ ಕಾನ್ಸ್ಟೆಬಲ್ ರಮೇಶ್ ಜತೆ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ 11.45ರ ಸುಮಾರಿಗೆ ಅವರು ಒಳವರ್ತುಲ ರಸ್ತೆಯಲ್ಲಿ ವಾಹನಗಳ ತಪಾಸಣೆ ಮಾಡುವಾಗ ಯುವಕನೊಬ್ಬ ಬೈಕ್ ಓಡಿಸಿಕೊಂಡು ಬಂದಿದ್ದಾನೆ. ಅನುಮಾನಗೊಂಡು ಆತನನ್ನು ಅಡ್ಡಗಟ್ಟಿದ ಸಿಬ್ಬಂದಿ ವಾಹನದ ದಾಖಲೆಗಳನ್ನು ನೀಡುವಂತೆ ಕೇಳಿದ್ದಾರೆ. ಆಗ ಏಕಾಏಕಿ ಬೈಕ್ ಚಾಲನೆ ಮಾಡಿದ ಆತ, ದೊಡ್ಡಸಿದ್ದಯ್ಯ ಅವರಿಗೆ ಬೈಕ್ ಗುದ್ದಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಘಟನೆಯಲ್ಲಿ ದೊಡ್ಡಸಿದ್ದಯ್ಯ ಅವರ ಎಡಗಾಲಿಗೆ ಪೆಟ್ಟಾಗಿದ್ದು, ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಬ್ಬಂದಿ ಆ ವಾಹನದ ನೋಂದಣಿ ಸಂಖ್ಯೆಯನ್ನು ದಾಖಲಿಸಿಕೊಂಡಿಲ್ಲ ಎಂದು ಪೀಣ್ಯ ಸಂಚಾರ ಪೊಲೀಸರು ಹೇಳಿದ್ದಾರೆ. ಪ್ರಕರಣ ದಾಖಲಾಗಿದೆ.<br /> <br /> ‘ಸಮೀಪದ ಜಂಕ್ಷನ್ನಲ್ಲಿರುವ ಸಿ.ಸಿ.ಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಶೀಘ್ರವೇ ಆ ಚಾಲಕನನ್ನು ಬಂಧಿಸಲಾಗುವುದು. ಕಳವು ವಾಹನಗಳ ಪತ್ತೆಗೆ ಹಾಗೂ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಣೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ವಾಹನ ತಪಾಸಣೆ ಕೆಲಸಕ್ಕೆ ನಿಯೋಜಿಸಲಾಗಿದೆ’ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.<br /> <br /> <strong>ವಿಗ್ರಹ ಮಾರಾಟ– ಬಂಧನ:</strong> ಪುರಾತನ ಕಾಲದ ಪಂಚಲೋಹದ ವಿಗ್ರಹ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಬ್ಯಾಟರಾಯನಪುರ ಪೊಲೀಸರು ವಿಗ್ರಹವೊಂದನ್ನು ವಶಪಡಿಸಿಕೊಂಡಿದ್ದಾರೆ.<br /> <br /> ಗಂಗಾಧರಯ್ಯ (44), ಶಿವಲಿಂಗಯ್ಯ (35), ಚಂದ್ರಶೇಖರ್ (34), ಕೃಷ್ಣ (32) ಮತ್ತು ಸಿ.ಚಂದ್ರಶೇಖರ್ (58) ಬಂಧಿತರು.<br /> ಆರೋಪಿಗಳು ಶ್ರೀವೈಷ್ಣವರ ಗುರುಗಳಾದ ವೇದಾಂತ ದೇಶಿಕ ಆಚಾರ್ಯ ಅವರ ವಿಗ್ರಹವನ್ನು ತಮಿಳುನಾಡಿನಿಂದ ನಗರಕ್ಕೆ ತಂದು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಮಾರಲು ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಅವರನ್ನು ಬಂಧಿಸಿ ಸುಮಾರು 13 ಕೆ.ಜಿ ತೂಕದ ಪಂಚಲೋಹದ ವಿಗ್ರಹವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ವಿಗ್ರಹವನ್ನು ಪರಿಶೀಲನೆಗಾಗಿ ಪುರಾತತ್ವ ಇಲಾಖೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> <strong>ದಂಪತಿ ಆತ್ಮಹತ್ಯೆ:</strong> ನೇಣು ಹಾಕಿಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರದಲ್ಲಿ ಬುಧವಾರ ನಡೆದಿದೆ.<br /> <br /> ಮುನಿಯಪ್ಪ ಲೇಔಟ್ನ ಆನಂದ್ (45) ಮತ್ತು ಗೀತಾ (42) ಆತ್ಮಹತ್ಯೆ ಮಾಡಿಕೊಂಡವರು. ಆನಂದ್, ಕೆ.ಆರ್.ಪುರದಲ್ಲಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದರು. ಬುಧವಾರ ರಾತ್ರಿ ಅವರು ಮಲಗುವ ಕೊಠಡಿಯಲ್ಲಿ ಒಂದೇ ಹಗ್ಗದಿಂದ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಸ್ಥಳೀಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಕೆ.ಆರ್.ಪುರ ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜಗೋಪಾಲನಗರ ಒಳವರ್ತುಲ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಕಾನ್ಸ್ಟೆಬಲ್ ದೊಡ್ಡಸಿದ್ದಯ್ಯ (35) ಅವರಿಗೆ ಸವಾರನೊಬ್ಬ ಬೈಕ್ ಗುದ್ದಿಸಿ ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.<br /> <br /> ರಾಜಗೋಪಾಲನಗರ ಠಾಣೆಯ ಕಾನ್ಸ್ಟೆಬಲ್ ದೊಡ್ಡಸಿದ್ದಯ್ಯ ಅವರು ಮತ್ತೊಬ್ಬ ಕಾನ್ಸ್ಟೆಬಲ್ ರಮೇಶ್ ಜತೆ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ 11.45ರ ಸುಮಾರಿಗೆ ಅವರು ಒಳವರ್ತುಲ ರಸ್ತೆಯಲ್ಲಿ ವಾಹನಗಳ ತಪಾಸಣೆ ಮಾಡುವಾಗ ಯುವಕನೊಬ್ಬ ಬೈಕ್ ಓಡಿಸಿಕೊಂಡು ಬಂದಿದ್ದಾನೆ. ಅನುಮಾನಗೊಂಡು ಆತನನ್ನು ಅಡ್ಡಗಟ್ಟಿದ ಸಿಬ್ಬಂದಿ ವಾಹನದ ದಾಖಲೆಗಳನ್ನು ನೀಡುವಂತೆ ಕೇಳಿದ್ದಾರೆ. ಆಗ ಏಕಾಏಕಿ ಬೈಕ್ ಚಾಲನೆ ಮಾಡಿದ ಆತ, ದೊಡ್ಡಸಿದ್ದಯ್ಯ ಅವರಿಗೆ ಬೈಕ್ ಗುದ್ದಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಘಟನೆಯಲ್ಲಿ ದೊಡ್ಡಸಿದ್ದಯ್ಯ ಅವರ ಎಡಗಾಲಿಗೆ ಪೆಟ್ಟಾಗಿದ್ದು, ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಬ್ಬಂದಿ ಆ ವಾಹನದ ನೋಂದಣಿ ಸಂಖ್ಯೆಯನ್ನು ದಾಖಲಿಸಿಕೊಂಡಿಲ್ಲ ಎಂದು ಪೀಣ್ಯ ಸಂಚಾರ ಪೊಲೀಸರು ಹೇಳಿದ್ದಾರೆ. ಪ್ರಕರಣ ದಾಖಲಾಗಿದೆ.<br /> <br /> ‘ಸಮೀಪದ ಜಂಕ್ಷನ್ನಲ್ಲಿರುವ ಸಿ.ಸಿ.ಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಶೀಘ್ರವೇ ಆ ಚಾಲಕನನ್ನು ಬಂಧಿಸಲಾಗುವುದು. ಕಳವು ವಾಹನಗಳ ಪತ್ತೆಗೆ ಹಾಗೂ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಣೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ವಾಹನ ತಪಾಸಣೆ ಕೆಲಸಕ್ಕೆ ನಿಯೋಜಿಸಲಾಗಿದೆ’ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.<br /> <br /> <strong>ವಿಗ್ರಹ ಮಾರಾಟ– ಬಂಧನ:</strong> ಪುರಾತನ ಕಾಲದ ಪಂಚಲೋಹದ ವಿಗ್ರಹ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಬ್ಯಾಟರಾಯನಪುರ ಪೊಲೀಸರು ವಿಗ್ರಹವೊಂದನ್ನು ವಶಪಡಿಸಿಕೊಂಡಿದ್ದಾರೆ.<br /> <br /> ಗಂಗಾಧರಯ್ಯ (44), ಶಿವಲಿಂಗಯ್ಯ (35), ಚಂದ್ರಶೇಖರ್ (34), ಕೃಷ್ಣ (32) ಮತ್ತು ಸಿ.ಚಂದ್ರಶೇಖರ್ (58) ಬಂಧಿತರು.<br /> ಆರೋಪಿಗಳು ಶ್ರೀವೈಷ್ಣವರ ಗುರುಗಳಾದ ವೇದಾಂತ ದೇಶಿಕ ಆಚಾರ್ಯ ಅವರ ವಿಗ್ರಹವನ್ನು ತಮಿಳುನಾಡಿನಿಂದ ನಗರಕ್ಕೆ ತಂದು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಮಾರಲು ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಅವರನ್ನು ಬಂಧಿಸಿ ಸುಮಾರು 13 ಕೆ.ಜಿ ತೂಕದ ಪಂಚಲೋಹದ ವಿಗ್ರಹವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ವಿಗ್ರಹವನ್ನು ಪರಿಶೀಲನೆಗಾಗಿ ಪುರಾತತ್ವ ಇಲಾಖೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> <strong>ದಂಪತಿ ಆತ್ಮಹತ್ಯೆ:</strong> ನೇಣು ಹಾಕಿಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರದಲ್ಲಿ ಬುಧವಾರ ನಡೆದಿದೆ.<br /> <br /> ಮುನಿಯಪ್ಪ ಲೇಔಟ್ನ ಆನಂದ್ (45) ಮತ್ತು ಗೀತಾ (42) ಆತ್ಮಹತ್ಯೆ ಮಾಡಿಕೊಂಡವರು. ಆನಂದ್, ಕೆ.ಆರ್.ಪುರದಲ್ಲಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದರು. ಬುಧವಾರ ರಾತ್ರಿ ಅವರು ಮಲಗುವ ಕೊಠಡಿಯಲ್ಲಿ ಒಂದೇ ಹಗ್ಗದಿಂದ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಸ್ಥಳೀಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಕೆ.ಆರ್.ಪುರ ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>