<p><span style="font-size: 26px;"><strong>ಗದಗ:</strong> ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹೆಸರು ಜನರ ಮನಸ್ಸಿನಲ್ಲಿ ಉಳಿಯಲಿ ಎಂಬ ಆಶಯದೊಂದಿಗೆ ಅವಳಿ ನಗರದಲ್ಲಿ ನಿರ್ಮಿಸುತ್ತಿರುವ `ಅಂಬೇಡ್ಕರ್ ಭವನ' ಕಾಮಗಾರಿ ಸಮರ್ಪಕ ಅನುದಾನದ ಕೊರತೆಯಿಂದ ನನೆಗುದಿಗೆ ಬಿದ್ದಿದೆ.</span><br /> <br /> ಆರಂಭದಲ್ಲಿ ನಿವೇಶನದ ಸಮಸ್ಯೆಯಿಂದಾಗಿ ನಗರದಲ್ಲಿ ಅಂಬೇಡ್ಕರ ಭವನ ಕಟ್ಟಡ ನಿರ್ಮಾಣಕ್ಕೆ ವಿಳಂಬ ಉಂಟಾಗಿತ್ತು. ಬಳಿಕ ನಿವೇಶನ ಗುರುತಿಸಿ ಒಂದು ಕೋಟಿ ರೂಪಾಯಿ ಮಂಜೂರು ಮಾಡಿ ಚಾಲನೆಯೂ ನೀಡಲಾಯಿತು. ನಂತರ ಸಮರ್ಪಕ ಅನುದಾನ ದೊರೆಯದೆ ಕಾಮಗಾರಿ ನಿರೀಕ್ಷಿತ ವೇಗ ಪಡೆಯಲಿಲ್ಲ.<br /> <br /> ಗದಗ ಜಿಲ್ಲೆಯಾಗಿ ಹದಿನಾರು ವರ್ಷವಾದರೂ ಅಂಬೇಡ್ಕರ್ ಭವನ ನಿರ್ಮಾಣವಾಗದೆ ಇರುವುದು ದಲಿತ ಸಂಘಟನೆಗಳಿಗೆ ಸಾಕಷ್ಟು ನಿರಾಸೆ ಉಂಟು ಮಾಡಿದೆ.<br /> <br /> ಭವನ ಆರಂಭಗೊಂಡ ಬಳಿಕ ಮೂವರು ಜಿಲ್ಲಾ ಉಸ್ತುವಾರಿ ಸಚಿವರು ಬಂದು ಹೋದರು. ಹಲವು ಬಾರಿ ಸಂಘಟನೆ ಮುಖಂಡರು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸುತ್ತಾ ಬಂದರೂ ಪ್ರಯೋಜನವಾಗಿಲ್ಲ. ಭವನದ ಕಾಮಗಾರಿ ಆರಂಭಗೊಂಡು ನಾಲ್ಕು ವರ್ಷವಾಯಿತು. ಅಂದಾಜು 2 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ನಡೆದಿದೆ. ಅಗತ್ಯ ಅನುದಾನ ಮಂಜೂರು ಮಾಡುವಂತೆ ಜಿಲ್ಲಾಡಳಿತ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.<br /> <br /> ರೂ. 3,10,26175 ಕೋಟಿ ಅಂದಾಜು ವೆಚ್ಚದ ಅಂಬೇಡ್ಕರ್ ಭವನವನ್ನು ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಇಲಾಖೆಯಿಂದ ನಿರ್ಮಿಸಲಾಗುತ್ತಿದೆ. 2010ಕ್ಕೆ ಪೂರ್ಣಗೊಳಿಸುವಂತೆ ಗುತ್ತಿಗೆ ಕರಾರಿನಲ್ಲಿ ತಿಳಿಸಲಾಗಿತ್ತು. ಕಟ್ಟಡ ಕಾಮಗಾರಿಯನ್ನು ಬೆಂಗಳೂರಿನ ಕಂಪೆನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ಅವಧಿ ಪೂರ್ಣಗೊಂಡರು ಭವನ ಮಾತ್ರ ಪೂರ್ಣಗೊಳ್ಳಲಿಲ್ಲ.<br /> <br /> ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಗುತ್ತಿಗೆದಾರರ ಅವಧಿಯನ್ನು ಪರಿಷ್ಕರಿಸಿ 2011ಕ್ಕೆ ನಿಗದಿಪಡಿಸಲಾಯಿತು. ಗದಗ-ಬೆಟಗೇರಿ ನಗರಭೆಯಿಂದ ರೂ. 25 ಲಕ್ಷ ಮತ್ತು ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಂದ ತಲಾ ರೂ. 5 ಲಕ್ಷ ಅನುದಾನ ನೀಡಲಾಗಿದೆ. ಕಟ್ಟಡ ಪೂರ್ಣಗೊಳ್ಳಲು ಮತ್ತಷ್ಟು ಅನುದಾನದ ಅವಶ್ಯಕತೆ ಇದೆ.<br /> <br /> ಜಿಲ್ಲಾ ಉಸ್ತುವಾರಿ ಸಚಿವರು ಆಸಕ್ತಿ ವಹಿಸಿ ಆದಷ್ಟು ಬೇಗ ಭವನ ಪೂರ್ಣಗೊಳ್ಳಲು ಕ್ರಮ ವಹಿಸಬೇಕು. ಈ ಕುರಿತು `ಪ್ರಜಾವಾಣಿ' ಜತೆ ಮಾತನಾಡಿದ ಜೈ ಭೀಮ ಸೇನಾ ಅಧ್ಯಕ್ಷ ಗಣೇಶ ವೈ. ಹುಬ್ಬಳ್ಳಿ, `ಅಂಬೇಡ್ಕರ್ ಭವನ ನಿರ್ಮಾಣದ ಬಗ್ಗೆ ಸಂಬಂಧಪಟ್ಟವರು ಯಾರು ತಲೆ ಕೆಡಿಸಿಕೊಂಡಿಲ್ಲ. ಕಟ್ಟಡ ನಿರ್ಮಾಣ ಜಾಗದಲ್ಲಿ ಗಿಡ, ಗಂಟಿಗಳು ಬೆಳೆದಿವೆ.<br /> <br /> ಸಾಕಷ್ಟು ಮನವಿ ಮತ್ತು ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಮುಖಂಡರೊಂದಿಗೆ ಚರ್ಚೆ ನಡೆಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಕೆಲಸ ಆರಂಭಗೊಳ್ಳದಿದ್ದಾರೆ ಹೋರಾಟ ನಡೆಸಲಾಗುವುದು' ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಗದಗ:</strong> ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹೆಸರು ಜನರ ಮನಸ್ಸಿನಲ್ಲಿ ಉಳಿಯಲಿ ಎಂಬ ಆಶಯದೊಂದಿಗೆ ಅವಳಿ ನಗರದಲ್ಲಿ ನಿರ್ಮಿಸುತ್ತಿರುವ `ಅಂಬೇಡ್ಕರ್ ಭವನ' ಕಾಮಗಾರಿ ಸಮರ್ಪಕ ಅನುದಾನದ ಕೊರತೆಯಿಂದ ನನೆಗುದಿಗೆ ಬಿದ್ದಿದೆ.</span><br /> <br /> ಆರಂಭದಲ್ಲಿ ನಿವೇಶನದ ಸಮಸ್ಯೆಯಿಂದಾಗಿ ನಗರದಲ್ಲಿ ಅಂಬೇಡ್ಕರ ಭವನ ಕಟ್ಟಡ ನಿರ್ಮಾಣಕ್ಕೆ ವಿಳಂಬ ಉಂಟಾಗಿತ್ತು. ಬಳಿಕ ನಿವೇಶನ ಗುರುತಿಸಿ ಒಂದು ಕೋಟಿ ರೂಪಾಯಿ ಮಂಜೂರು ಮಾಡಿ ಚಾಲನೆಯೂ ನೀಡಲಾಯಿತು. ನಂತರ ಸಮರ್ಪಕ ಅನುದಾನ ದೊರೆಯದೆ ಕಾಮಗಾರಿ ನಿರೀಕ್ಷಿತ ವೇಗ ಪಡೆಯಲಿಲ್ಲ.<br /> <br /> ಗದಗ ಜಿಲ್ಲೆಯಾಗಿ ಹದಿನಾರು ವರ್ಷವಾದರೂ ಅಂಬೇಡ್ಕರ್ ಭವನ ನಿರ್ಮಾಣವಾಗದೆ ಇರುವುದು ದಲಿತ ಸಂಘಟನೆಗಳಿಗೆ ಸಾಕಷ್ಟು ನಿರಾಸೆ ಉಂಟು ಮಾಡಿದೆ.<br /> <br /> ಭವನ ಆರಂಭಗೊಂಡ ಬಳಿಕ ಮೂವರು ಜಿಲ್ಲಾ ಉಸ್ತುವಾರಿ ಸಚಿವರು ಬಂದು ಹೋದರು. ಹಲವು ಬಾರಿ ಸಂಘಟನೆ ಮುಖಂಡರು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸುತ್ತಾ ಬಂದರೂ ಪ್ರಯೋಜನವಾಗಿಲ್ಲ. ಭವನದ ಕಾಮಗಾರಿ ಆರಂಭಗೊಂಡು ನಾಲ್ಕು ವರ್ಷವಾಯಿತು. ಅಂದಾಜು 2 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ನಡೆದಿದೆ. ಅಗತ್ಯ ಅನುದಾನ ಮಂಜೂರು ಮಾಡುವಂತೆ ಜಿಲ್ಲಾಡಳಿತ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.<br /> <br /> ರೂ. 3,10,26175 ಕೋಟಿ ಅಂದಾಜು ವೆಚ್ಚದ ಅಂಬೇಡ್ಕರ್ ಭವನವನ್ನು ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಇಲಾಖೆಯಿಂದ ನಿರ್ಮಿಸಲಾಗುತ್ತಿದೆ. 2010ಕ್ಕೆ ಪೂರ್ಣಗೊಳಿಸುವಂತೆ ಗುತ್ತಿಗೆ ಕರಾರಿನಲ್ಲಿ ತಿಳಿಸಲಾಗಿತ್ತು. ಕಟ್ಟಡ ಕಾಮಗಾರಿಯನ್ನು ಬೆಂಗಳೂರಿನ ಕಂಪೆನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ಅವಧಿ ಪೂರ್ಣಗೊಂಡರು ಭವನ ಮಾತ್ರ ಪೂರ್ಣಗೊಳ್ಳಲಿಲ್ಲ.<br /> <br /> ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಗುತ್ತಿಗೆದಾರರ ಅವಧಿಯನ್ನು ಪರಿಷ್ಕರಿಸಿ 2011ಕ್ಕೆ ನಿಗದಿಪಡಿಸಲಾಯಿತು. ಗದಗ-ಬೆಟಗೇರಿ ನಗರಭೆಯಿಂದ ರೂ. 25 ಲಕ್ಷ ಮತ್ತು ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಂದ ತಲಾ ರೂ. 5 ಲಕ್ಷ ಅನುದಾನ ನೀಡಲಾಗಿದೆ. ಕಟ್ಟಡ ಪೂರ್ಣಗೊಳ್ಳಲು ಮತ್ತಷ್ಟು ಅನುದಾನದ ಅವಶ್ಯಕತೆ ಇದೆ.<br /> <br /> ಜಿಲ್ಲಾ ಉಸ್ತುವಾರಿ ಸಚಿವರು ಆಸಕ್ತಿ ವಹಿಸಿ ಆದಷ್ಟು ಬೇಗ ಭವನ ಪೂರ್ಣಗೊಳ್ಳಲು ಕ್ರಮ ವಹಿಸಬೇಕು. ಈ ಕುರಿತು `ಪ್ರಜಾವಾಣಿ' ಜತೆ ಮಾತನಾಡಿದ ಜೈ ಭೀಮ ಸೇನಾ ಅಧ್ಯಕ್ಷ ಗಣೇಶ ವೈ. ಹುಬ್ಬಳ್ಳಿ, `ಅಂಬೇಡ್ಕರ್ ಭವನ ನಿರ್ಮಾಣದ ಬಗ್ಗೆ ಸಂಬಂಧಪಟ್ಟವರು ಯಾರು ತಲೆ ಕೆಡಿಸಿಕೊಂಡಿಲ್ಲ. ಕಟ್ಟಡ ನಿರ್ಮಾಣ ಜಾಗದಲ್ಲಿ ಗಿಡ, ಗಂಟಿಗಳು ಬೆಳೆದಿವೆ.<br /> <br /> ಸಾಕಷ್ಟು ಮನವಿ ಮತ್ತು ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಮುಖಂಡರೊಂದಿಗೆ ಚರ್ಚೆ ನಡೆಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಕೆಲಸ ಆರಂಭಗೊಳ್ಳದಿದ್ದಾರೆ ಹೋರಾಟ ನಡೆಸಲಾಗುವುದು' ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>