<p><strong>ದೇವನಹಳ್ಳಿ</strong>: ತಾಲ್ಲೂಕಿನ ವಿಶ್ವನಾಥಪುರ ಪದವಿಪೂರ್ವ ಕಾಲೇಜಿನಿಂದ ವಾಜರಹಳ್ಳಿ, ಶಾನಪ್ಪನಹಳ್ಳಿ ಮತ್ತು ಹೊಸೂರು ಗ್ರಾಮದ ಮೂಲಕ ಕೊಯಿರಾ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ದೋಶಪೂರಿತವಾಗಿದ್ದರೂ ಸಹ ಗುತ್ತಿಗೆದಾರರಿಗೆ ಪೂರ್ಣ ಬಿಲ್ ಪಾವತಿಸಲಾಗಿದೆ ಎಂದು ಇಲ್ಲಿನ ಗ್ರಾಮಸ್ಥರು ದೂರಿದ್ದಾರೆ.<br /> <br /> ಈ ರಸ್ತೆಯಲ್ಲಿ ಕೂಲಿ ಕೆಲಸಕ್ಕೆ ತೆರಳುವ ಸಾಕಷ್ಟ ಮಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಸಂದಚರಿಸುತ್ತಿದ್ದಾರೆ. ಯಾವುದೇ ಭಾರಿ ವಾಹನಗಳು ಸಂಚರಿಸದಿದ್ದರು ಸಹ ಡಾಂಬರೀಕರಣಗೊಂಡ ಕೆಲವೇ ತಿಂಗಳಲ್ಲಿ ಅದೋ ಗತಿ ತಲುಪಿರುವುದರ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ನಬಾರ್ಡ್ ಯೋಜನೆಯಡಿ ಈ ರಸ್ತೆಯ ಅಭಿವೃದ್ಧಿಗಾಗಿ 37.43 ಲಕ್ಷರೂ ವೆಚ್ಚ ಮಾಡಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಹಣದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದ್ದರೂ ಸಾರ್ವಜನಿಕರು ಸುಗಮವಾಗಿ ಸಂಚರಿಸದ ಸ್ಥಿತಿ ತಲುಪಿದೆ. <br /> <br /> ಮಳೆ ಬಂದರೆ ಈ ರಸ್ತೆಯಲ್ಲಿ ಪಾದಚಾರಿಗಳು ನಡೆದು ಸಾಗದಷ್ಟು ಕಷ್ಟವಾಗಿದೆ. ಸರ್ಕಾರ ವಿದ್ಯಾರ್ಥಿಗಳಿಗಾಗಿ ಉಚಿತ ಸೈಕಲ್ ನೀಡಿದೆ. ಈ ರಸ್ತೆಯಲ್ಲಿ ಸೈಕಲ್ ಹೊಡೆಯುವ ಮಕ್ಕಳು ಅಪಾಯದಲ್ಲಿ ಸಿಲುಕುವ ಸಾಧ್ಯತೆಗಳಿವೆ. ತಾಲ್ಲೂಕು ಆಡಳಿತಕ್ಕೆ ಈ ಬಗ್ಗೆ ಮಾಹಿತಿ ಇದ್ದರೂ ಮೌನ ವಹಿಸಿರುವುದು ಗ್ರಾಮಸ್ಥರ ಆಕ್ರೋಶ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ.<br /> <br /> `ಕೂಡಲೇ ಜನಪ್ರತಿನಿಧಿಗಳು ಸಂಬಂಧಪಟ್ಟ ಇಲಾಖೆ ತುರ್ತುಕ್ರಮಕೈಗೊಳ್ಳಬೇಕು ಇಲ್ಲವಾದರೆ ಪ್ರತಿಭಟನೆ ನಡೆಸುತ್ತೇವೆ~ ಎಂದು ಬ್ಯಾಡರಹಳ್ಳಿ ಪಿ.ಚಂದ್ರಪ್ಪ, ಹೊಸೂರು ಗ್ರಾಮ ವೇಣುಗೋಪಾಲ್, ಮುನಿಶಾಮೇಗೌಡ ಒತ್ತಾಯಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ತಾಲ್ಲೂಕಿನ ವಿಶ್ವನಾಥಪುರ ಪದವಿಪೂರ್ವ ಕಾಲೇಜಿನಿಂದ ವಾಜರಹಳ್ಳಿ, ಶಾನಪ್ಪನಹಳ್ಳಿ ಮತ್ತು ಹೊಸೂರು ಗ್ರಾಮದ ಮೂಲಕ ಕೊಯಿರಾ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ದೋಶಪೂರಿತವಾಗಿದ್ದರೂ ಸಹ ಗುತ್ತಿಗೆದಾರರಿಗೆ ಪೂರ್ಣ ಬಿಲ್ ಪಾವತಿಸಲಾಗಿದೆ ಎಂದು ಇಲ್ಲಿನ ಗ್ರಾಮಸ್ಥರು ದೂರಿದ್ದಾರೆ.<br /> <br /> ಈ ರಸ್ತೆಯಲ್ಲಿ ಕೂಲಿ ಕೆಲಸಕ್ಕೆ ತೆರಳುವ ಸಾಕಷ್ಟ ಮಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಸಂದಚರಿಸುತ್ತಿದ್ದಾರೆ. ಯಾವುದೇ ಭಾರಿ ವಾಹನಗಳು ಸಂಚರಿಸದಿದ್ದರು ಸಹ ಡಾಂಬರೀಕರಣಗೊಂಡ ಕೆಲವೇ ತಿಂಗಳಲ್ಲಿ ಅದೋ ಗತಿ ತಲುಪಿರುವುದರ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ನಬಾರ್ಡ್ ಯೋಜನೆಯಡಿ ಈ ರಸ್ತೆಯ ಅಭಿವೃದ್ಧಿಗಾಗಿ 37.43 ಲಕ್ಷರೂ ವೆಚ್ಚ ಮಾಡಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಹಣದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದ್ದರೂ ಸಾರ್ವಜನಿಕರು ಸುಗಮವಾಗಿ ಸಂಚರಿಸದ ಸ್ಥಿತಿ ತಲುಪಿದೆ. <br /> <br /> ಮಳೆ ಬಂದರೆ ಈ ರಸ್ತೆಯಲ್ಲಿ ಪಾದಚಾರಿಗಳು ನಡೆದು ಸಾಗದಷ್ಟು ಕಷ್ಟವಾಗಿದೆ. ಸರ್ಕಾರ ವಿದ್ಯಾರ್ಥಿಗಳಿಗಾಗಿ ಉಚಿತ ಸೈಕಲ್ ನೀಡಿದೆ. ಈ ರಸ್ತೆಯಲ್ಲಿ ಸೈಕಲ್ ಹೊಡೆಯುವ ಮಕ್ಕಳು ಅಪಾಯದಲ್ಲಿ ಸಿಲುಕುವ ಸಾಧ್ಯತೆಗಳಿವೆ. ತಾಲ್ಲೂಕು ಆಡಳಿತಕ್ಕೆ ಈ ಬಗ್ಗೆ ಮಾಹಿತಿ ಇದ್ದರೂ ಮೌನ ವಹಿಸಿರುವುದು ಗ್ರಾಮಸ್ಥರ ಆಕ್ರೋಶ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ.<br /> <br /> `ಕೂಡಲೇ ಜನಪ್ರತಿನಿಧಿಗಳು ಸಂಬಂಧಪಟ್ಟ ಇಲಾಖೆ ತುರ್ತುಕ್ರಮಕೈಗೊಳ್ಳಬೇಕು ಇಲ್ಲವಾದರೆ ಪ್ರತಿಭಟನೆ ನಡೆಸುತ್ತೇವೆ~ ಎಂದು ಬ್ಯಾಡರಹಳ್ಳಿ ಪಿ.ಚಂದ್ರಪ್ಪ, ಹೊಸೂರು ಗ್ರಾಮ ವೇಣುಗೋಪಾಲ್, ಮುನಿಶಾಮೇಗೌಡ ಒತ್ತಾಯಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>