<p><strong>ರಾಜರಾಜೇಶ್ವರಿನಗರ: </strong>ಕೆ.ಗೊಲ್ಲಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ಚಾಲನೆ ನೀಡಿದರು.<br /> <br /> ರೂ. 1.29 ಕೋಟಿ ವೆಚ್ಚದಲ್ಲಿ ತಿಪ್ಪೂರು- ಗೋಣಿಪುರ ರಸ್ತೆ ಅಭಿವೃದ್ಧಿ, ಗೊಲ್ಲಹಳ್ಳಿಯಲ್ಲಿ ಹಾಲು ಉತ್ಪಾದಕರ ಸಂಘದ ಕಟ್ಟಡ, ಕುಳ್ಳೇಗೌಡನ ಪಾಳ್ಯದಲ್ಲಿ ಅಂಗನವಾಡಿ ಕಟ್ಟಡ, ಸಮುದಾಯ ಭವನದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.<br /> <br /> ನಂತರ ಮಾತನಾಡಿದ ಸಚಿವರು, `ಕಾಮಗಾರಿಗಳ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಬೇಕು. ಆಗ ಮಾತ್ರ ಸಾರ್ವಜನಿಕರ ಹಣ ಸದುಪಯೋಗವಾಗುವುದು~ ಎಂದರು.<br /> <br /> ಜಿಲ್ಲಾ ಪಂಚಾಯ್ತಿ ಸದಸ್ಯ ಎ.ಶಿವಕುಮಾರ್ ಮಾತನಾಡಿ ರೂ. 2 ಕೋಟಿ ವೆಚ್ಚದಲ್ಲಿ ಉತ್ತರಿ- ಕಗ್ಗಲೀಪುರ ರಸ್ತೆ ಅಭಿವೃದ್ಧಿ, ಅಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ರೂ. 2 ಕೋಟಿ ವೆಚ್ಚದಲ್ಲಿ ಎಲ್ಲಾ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.<br /> <br /> ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ವೆಂಕಟಮ್ಮ ರೇವಣ್ಣಸಿದ್ದಯ್ಯ, ಜಾಗೃತಿ ಸಮಿತಿ ಅಧ್ಯಕ್ಷ ಜಿ.ವಿಜಯಕುಮಾರ್, ಬಿಜೆಪಿ ಮುಖಂಡರಾದ ಎಚ್.ಎಲ್. ಯುವಬಿಜೆಪಿ ಪ್ರಧಾನ ಕಾರ್ಯದರ್ಶಿ ಚಳ್ಳಗಟ್ಟಜಿ.ಮಂಜುನಾಥ್ , ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ಎಲ್.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಬೆಟ್ಟಯ್ಯ ಸದಸ್ಯ ಹಂಪಾಪುರ ರವಿಕುಮಾರ್ ಮತ್ತಿತತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ: </strong>ಕೆ.ಗೊಲ್ಲಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ಚಾಲನೆ ನೀಡಿದರು.<br /> <br /> ರೂ. 1.29 ಕೋಟಿ ವೆಚ್ಚದಲ್ಲಿ ತಿಪ್ಪೂರು- ಗೋಣಿಪುರ ರಸ್ತೆ ಅಭಿವೃದ್ಧಿ, ಗೊಲ್ಲಹಳ್ಳಿಯಲ್ಲಿ ಹಾಲು ಉತ್ಪಾದಕರ ಸಂಘದ ಕಟ್ಟಡ, ಕುಳ್ಳೇಗೌಡನ ಪಾಳ್ಯದಲ್ಲಿ ಅಂಗನವಾಡಿ ಕಟ್ಟಡ, ಸಮುದಾಯ ಭವನದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.<br /> <br /> ನಂತರ ಮಾತನಾಡಿದ ಸಚಿವರು, `ಕಾಮಗಾರಿಗಳ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಬೇಕು. ಆಗ ಮಾತ್ರ ಸಾರ್ವಜನಿಕರ ಹಣ ಸದುಪಯೋಗವಾಗುವುದು~ ಎಂದರು.<br /> <br /> ಜಿಲ್ಲಾ ಪಂಚಾಯ್ತಿ ಸದಸ್ಯ ಎ.ಶಿವಕುಮಾರ್ ಮಾತನಾಡಿ ರೂ. 2 ಕೋಟಿ ವೆಚ್ಚದಲ್ಲಿ ಉತ್ತರಿ- ಕಗ್ಗಲೀಪುರ ರಸ್ತೆ ಅಭಿವೃದ್ಧಿ, ಅಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ರೂ. 2 ಕೋಟಿ ವೆಚ್ಚದಲ್ಲಿ ಎಲ್ಲಾ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.<br /> <br /> ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ವೆಂಕಟಮ್ಮ ರೇವಣ್ಣಸಿದ್ದಯ್ಯ, ಜಾಗೃತಿ ಸಮಿತಿ ಅಧ್ಯಕ್ಷ ಜಿ.ವಿಜಯಕುಮಾರ್, ಬಿಜೆಪಿ ಮುಖಂಡರಾದ ಎಚ್.ಎಲ್. ಯುವಬಿಜೆಪಿ ಪ್ರಧಾನ ಕಾರ್ಯದರ್ಶಿ ಚಳ್ಳಗಟ್ಟಜಿ.ಮಂಜುನಾಥ್ , ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ಎಲ್.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಬೆಟ್ಟಯ್ಯ ಸದಸ್ಯ ಹಂಪಾಪುರ ರವಿಕುಮಾರ್ ಮತ್ತಿತತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>