<p><strong>ಸಾಗರ:</strong> ಪ್ರಯಾಣಿಕರ ಅನುಕೂಲಕ್ಕಾಗಿ ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಪ್ಲಾಟ್ಫಾರಂ ಕಾಮಗಾರಿ ವಿಳಂಬ ಗತಿಯಲ್ಲಿ ಸಾಗಿದ್ದು, ಅದನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.<br /> <br /> ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಪ್ರದೇಶಗಳಿಗೆ ಆರಂಭಿಸಲಾಗಿರುವ ನೂತನ ಬಸ್ ಸಂಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. <br /> <br /> ಬಸ್ ನಿಲ್ದಾಣದಲ್ಲಿ ಪ್ಲಾಟ್ಫಾರಂ ವ್ಯವಸ್ಥೆ ಸರಿಯಾಗಿ ಇಲ್ಲದ ಕಾರಣ ಪ್ರಯಾಣಿಕರಿಗೆ ತೊಂದರೆ ಅಗುತ್ತಿತ್ತು. ಮಳೆಗಾಲದಲ್ಲಿ ನೀರು ನಿಂತು ಬಸ್ಗಳ ಸಂಚಾರಕ್ಕೂ ತೊಡಕು ಉಂಟಾಗುತ್ತಿದೆ. ಇದನ್ನು ನಿವಾರಿಸಲು ಒಂದು ಕೋಟಿ ರೂ. ವೆಚ್ಚದಲ್ಲಿ ಇ ಟೆಂಡರ್ ಮೂಲಕ ಪ್ಲಾಟ್ಫಾರಂ ಕಾಮಗಾರಿ ಗುತ್ತಿಗೆ ವಹಿಸಿದ್ದುನಿಗದಿತ ಅವಧಿಯಲ್ಲಿ ಕೆಲಸ ಆಗದೆ ಇರುವುದು ಬೇಸರದ ಸಂಗತಿ ಎಂದರು.<br /> <br /> ಸಾರಿಗೆ ಇಲಾಖೆಗೆ ಸಲ್ಲಿಸಿದ ಬೇಡಿಕೆ ಆಧಾರದ ಮೇರೆಗೆ ಐದು ಹೊಸ ಬಸ್ ಮಂಜೂರು ಮಾಡಲಾಗಿದೆ. ಈ ಪೈಕಿ ಎರಡು ಬಸ್ಗಳನ್ನು ನಗರ ಸಾರಿಗೆ ಸಂಚಾರಕ್ಕೆ ಬಳಸಲಾಗುವುದು. ಉಳಿದ ಬಸ್ಗಳನ್ನು ಆವಿನಹಳ್ಳಿ, ಹೊಳೆಬಾಗಿಲು, ಸಿಗಂದೂರು, ಜೋಗ್ಫಾಲ್ಸ್, ಚಂದ್ರಗುತ್ತಿ ಮೊದಲಾದ ಪ್ರದೇಶಗಳಿಗೆ ಬಿಡಲಾಗುವುದು ಎಂದು ಹೇಳಿದರು.<br /> <br /> ನಗರ ಪ್ರದೇಶಗಳಿಗೆ ಬಿಡುವ ಬಸ್ಗಳು ಅತ್ಯಾಧುನಿಕ ಸೌಲಭ್ಯ ಹೊಂದಿದ್ದರೆ ಸಾಲದು. ಹೆಚ್ಚಿನ ಪ್ರವಾಸಿ ಕೇಂದ್ರಗಳಿರುವ ಸಾಗರದಂತಹ ತಾಲ್ಲೂಕು ಕೇಂದ್ರಕ್ಕೂ ಇಂತಹ ಸೌಲಭ್ಯಗಳಿರುವ ಬಸ್ಗಳನ್ನು ಒದಗಿಸುವತ್ತ ಸಾರಿಗೆ ಇಲಾಖೆ ಗಮನ ಹರಿಸಬೇಕುಎಂದರು.<br /> <br /> ನಗರಸಭೆ ಅಧ್ಯಕ್ಷ ರಾಧಾಕೃಷ್ಣ ಬೇಂಗ್ರೆ, ಉಪಾಧ್ಯಕ್ಷ ಡಿ. ರವಿ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಸುಬ್ರು, ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕ ರಮೇಶ್, ಟಾಕಪ್ಪ ಭೀಮನೇರಿ, ಸಿಂಗಾರಿಗೌಡ ಇನ್ನಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಪ್ರಯಾಣಿಕರ ಅನುಕೂಲಕ್ಕಾಗಿ ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಪ್ಲಾಟ್ಫಾರಂ ಕಾಮಗಾರಿ ವಿಳಂಬ ಗತಿಯಲ್ಲಿ ಸಾಗಿದ್ದು, ಅದನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.<br /> <br /> ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಪ್ರದೇಶಗಳಿಗೆ ಆರಂಭಿಸಲಾಗಿರುವ ನೂತನ ಬಸ್ ಸಂಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. <br /> <br /> ಬಸ್ ನಿಲ್ದಾಣದಲ್ಲಿ ಪ್ಲಾಟ್ಫಾರಂ ವ್ಯವಸ್ಥೆ ಸರಿಯಾಗಿ ಇಲ್ಲದ ಕಾರಣ ಪ್ರಯಾಣಿಕರಿಗೆ ತೊಂದರೆ ಅಗುತ್ತಿತ್ತು. ಮಳೆಗಾಲದಲ್ಲಿ ನೀರು ನಿಂತು ಬಸ್ಗಳ ಸಂಚಾರಕ್ಕೂ ತೊಡಕು ಉಂಟಾಗುತ್ತಿದೆ. ಇದನ್ನು ನಿವಾರಿಸಲು ಒಂದು ಕೋಟಿ ರೂ. ವೆಚ್ಚದಲ್ಲಿ ಇ ಟೆಂಡರ್ ಮೂಲಕ ಪ್ಲಾಟ್ಫಾರಂ ಕಾಮಗಾರಿ ಗುತ್ತಿಗೆ ವಹಿಸಿದ್ದುನಿಗದಿತ ಅವಧಿಯಲ್ಲಿ ಕೆಲಸ ಆಗದೆ ಇರುವುದು ಬೇಸರದ ಸಂಗತಿ ಎಂದರು.<br /> <br /> ಸಾರಿಗೆ ಇಲಾಖೆಗೆ ಸಲ್ಲಿಸಿದ ಬೇಡಿಕೆ ಆಧಾರದ ಮೇರೆಗೆ ಐದು ಹೊಸ ಬಸ್ ಮಂಜೂರು ಮಾಡಲಾಗಿದೆ. ಈ ಪೈಕಿ ಎರಡು ಬಸ್ಗಳನ್ನು ನಗರ ಸಾರಿಗೆ ಸಂಚಾರಕ್ಕೆ ಬಳಸಲಾಗುವುದು. ಉಳಿದ ಬಸ್ಗಳನ್ನು ಆವಿನಹಳ್ಳಿ, ಹೊಳೆಬಾಗಿಲು, ಸಿಗಂದೂರು, ಜೋಗ್ಫಾಲ್ಸ್, ಚಂದ್ರಗುತ್ತಿ ಮೊದಲಾದ ಪ್ರದೇಶಗಳಿಗೆ ಬಿಡಲಾಗುವುದು ಎಂದು ಹೇಳಿದರು.<br /> <br /> ನಗರ ಪ್ರದೇಶಗಳಿಗೆ ಬಿಡುವ ಬಸ್ಗಳು ಅತ್ಯಾಧುನಿಕ ಸೌಲಭ್ಯ ಹೊಂದಿದ್ದರೆ ಸಾಲದು. ಹೆಚ್ಚಿನ ಪ್ರವಾಸಿ ಕೇಂದ್ರಗಳಿರುವ ಸಾಗರದಂತಹ ತಾಲ್ಲೂಕು ಕೇಂದ್ರಕ್ಕೂ ಇಂತಹ ಸೌಲಭ್ಯಗಳಿರುವ ಬಸ್ಗಳನ್ನು ಒದಗಿಸುವತ್ತ ಸಾರಿಗೆ ಇಲಾಖೆ ಗಮನ ಹರಿಸಬೇಕುಎಂದರು.<br /> <br /> ನಗರಸಭೆ ಅಧ್ಯಕ್ಷ ರಾಧಾಕೃಷ್ಣ ಬೇಂಗ್ರೆ, ಉಪಾಧ್ಯಕ್ಷ ಡಿ. ರವಿ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಸುಬ್ರು, ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕ ರಮೇಶ್, ಟಾಕಪ್ಪ ಭೀಮನೇರಿ, ಸಿಂಗಾರಿಗೌಡ ಇನ್ನಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>