<p><strong>ಬೆಂಗಳೂರು:</strong> `ಕಾಮರಾಜ್ ಅವರು ದೇಶದ ರಾಜಕಾರಣದ ಕಿಂಗ್ ಮೇಕರ್ ಆಗಿದ್ದರು. ಅವರ ಆಡಳಿತ ಅವಧಿಯಲ್ಲಿ ತಮಿಳುನಾಡಿನಲ್ಲಿ ಹಲವು ಸುಧಾರಣೆಗಳನ್ನು ತಂದಿದ್ದರು' ಎಂದು ಸಂಸದ ಪಿ.ಸಿ.ಮೋಹನ್ ಅವರು ಅಭಿಪ್ರಾಯಪಟ್ಟರು.<br /> <br /> ಕರ್ನಾಟಕ ಹಿಂದೂ ನಾಡರ್ ಅಸೋಸಿಯೇಷನ್ ಸೋಮವಾರ ನಗರದಲ್ಲಿ ಆಯೋಜಿಸಿದ್ದ ದಿವಂಗತ ಕೆ.ಕಾಮರಾಜ್ ಅವರ 111ನೇ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಲಾಲ್ಬಹದ್ದೂರ್ ಶಾಸ್ತ್ರಿ ಮತ್ತು ಇಂದಿರಾಗಾಂಧಿ ಅವರು ಪ್ರಧಾನಮಂತ್ರಿಗಳಾಗಲು ಕಾಮರಾಜ್ ಕಾರಣರಾಗಿದ್ದರು. ಮಧ್ಯಾಹ್ನದ ಬಿಸಿ ಊಟದಂತಹ ಮಹತ್ವದ ಯೋಜನೆಯನ್ನು ಅವರು ತಮಿಳುನಾಡಿನ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಆರಂಭಿಸಿದ್ದರು. ಉತ್ತಮ ಆಡಳಿತದಿಂದಾಗಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು ಎಂದರು.<br /> <br /> ತಮಿಳುನಾಡಿನ ಒಂದು ವಿಶ್ವವಿದ್ಯಾಲಯ, ವಿಮಾನ ನಿಲ್ದಾಣ ಮತ್ತು ನಗರದ ಒಂದು ರಸ್ತೆಗೆ ಕಾಮರಾಜ್ ಹೆಸರಿಟ್ಟಿರುವುದು ಹಾಗೂ ಅವರಿಗೆ ಭಾರತರತ್ನ ಪ್ರಶಸ್ತಿ ಸಂದಿರುವುದು ಅವರ ಜನಪ್ರಿಯತೆಗೆ ಸಾಕ್ಷಿ ಎಂದು ನುಡಿದರು. ಅಸೋಸಿಯೇಷನ್ನ ಚೇರ್ಮನ್ ಎಂ.ಎಸ್.ಪಳನಿಚಾಮಿ, ಅಧ್ಯಕ್ಷ ಟಿ.ಬಾಲಸುಂದರಂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಕಾಮರಾಜ್ ಅವರು ದೇಶದ ರಾಜಕಾರಣದ ಕಿಂಗ್ ಮೇಕರ್ ಆಗಿದ್ದರು. ಅವರ ಆಡಳಿತ ಅವಧಿಯಲ್ಲಿ ತಮಿಳುನಾಡಿನಲ್ಲಿ ಹಲವು ಸುಧಾರಣೆಗಳನ್ನು ತಂದಿದ್ದರು' ಎಂದು ಸಂಸದ ಪಿ.ಸಿ.ಮೋಹನ್ ಅವರು ಅಭಿಪ್ರಾಯಪಟ್ಟರು.<br /> <br /> ಕರ್ನಾಟಕ ಹಿಂದೂ ನಾಡರ್ ಅಸೋಸಿಯೇಷನ್ ಸೋಮವಾರ ನಗರದಲ್ಲಿ ಆಯೋಜಿಸಿದ್ದ ದಿವಂಗತ ಕೆ.ಕಾಮರಾಜ್ ಅವರ 111ನೇ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಲಾಲ್ಬಹದ್ದೂರ್ ಶಾಸ್ತ್ರಿ ಮತ್ತು ಇಂದಿರಾಗಾಂಧಿ ಅವರು ಪ್ರಧಾನಮಂತ್ರಿಗಳಾಗಲು ಕಾಮರಾಜ್ ಕಾರಣರಾಗಿದ್ದರು. ಮಧ್ಯಾಹ್ನದ ಬಿಸಿ ಊಟದಂತಹ ಮಹತ್ವದ ಯೋಜನೆಯನ್ನು ಅವರು ತಮಿಳುನಾಡಿನ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಆರಂಭಿಸಿದ್ದರು. ಉತ್ತಮ ಆಡಳಿತದಿಂದಾಗಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು ಎಂದರು.<br /> <br /> ತಮಿಳುನಾಡಿನ ಒಂದು ವಿಶ್ವವಿದ್ಯಾಲಯ, ವಿಮಾನ ನಿಲ್ದಾಣ ಮತ್ತು ನಗರದ ಒಂದು ರಸ್ತೆಗೆ ಕಾಮರಾಜ್ ಹೆಸರಿಟ್ಟಿರುವುದು ಹಾಗೂ ಅವರಿಗೆ ಭಾರತರತ್ನ ಪ್ರಶಸ್ತಿ ಸಂದಿರುವುದು ಅವರ ಜನಪ್ರಿಯತೆಗೆ ಸಾಕ್ಷಿ ಎಂದು ನುಡಿದರು. ಅಸೋಸಿಯೇಷನ್ನ ಚೇರ್ಮನ್ ಎಂ.ಎಸ್.ಪಳನಿಚಾಮಿ, ಅಧ್ಯಕ್ಷ ಟಿ.ಬಾಲಸುಂದರಂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>