<p><strong>ಬೆಂಗಳೂರು: </strong>ಸಾಹಿತಿಗಳಾದ ಚನ್ನವೀರ ಕಣವಿ, ಪ್ರೊ. ಹಂಪ ನಾಗರಾಜಯ್ಯ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಮತ್ತಿತರರು ಕನ್ನಡದ ಉತ್ತಮ ಕತೆಗಳನ್ನು ಕಾಮಿಕ್ಸ್ ರೂಪದಲ್ಲಿ ಹೊರತರಲು ಚಿಂತಿಸಿದ್ದಾರೆ. <br /> <br /> ಈ ಯೋಜನೆಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರೂ ಸಾಥ್ ನೀಡಿದ್ದಾರೆ.<br /> <br /> ಈ ಯೋಜನೆಯ ಕುರಿತು ಮಾತುಕತೆ ನಡೆಸಲು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಗೃಹ ಕಚೇರಿ `ಕೃಷ್ಣಾ~ದಲ್ಲಿ ಮಂಗಳವಾರ ಭೇಟಿ ಮಾಡಿದ ಡಾ. ಕಂಬಾರ, ಕಣವಿ, ಸಿದ್ಧರಾಮಯ್ಯ ಅವರು, ಯೋಜನೆಗೆ ಬೆಂಬಲ ನೀಡುವಂತೆ ಕೋರಿದರು. <br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತ ಮನು ಬಳಿಗಾರ್ ಅವರೂ ನಿಯೋಗದಲ್ಲಿದ್ದರು.<br /> <br /> `ಈ ಯೋಜನೆಯಲ್ಲಿ ಕನ್ನಡದ ಉತ್ತಮ ಕತೆಗಳನ್ನು ತಲಾ 30 ಪುಟಗಳ ಕಾಮಿಕ್ಸ್ ರೂಪದಲ್ಲಿ ತರಲಾಗುವುದು. ಚಿತ್ರ, ಕತೆಗಳ ಮೂಲಕ ಮಕ್ಕಳಿಗೆ ನಾಡಿನ ಸಂಸ್ಕೃತಿಯನ್ನು ತಿಳಿಸುವ ಪ್ರಯತ್ನ ಇದು~ ಎಂದು ಡಾ. ಕಂಬಾರ ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಯೋಜನೆಯ ಕುರಿತು ಆಸಕ್ತಿ ತೋರಿರುವ ಸದಾನಂದ ಗೌಡರು, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಕಾಮಿಕ್ಸ್ ಪುಸ್ತಕಗಳನ್ನು ಸರ್ಕಾರವೇ ಖರೀದಿಸುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾಹಿತಿಗಳಾದ ಚನ್ನವೀರ ಕಣವಿ, ಪ್ರೊ. ಹಂಪ ನಾಗರಾಜಯ್ಯ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಮತ್ತಿತರರು ಕನ್ನಡದ ಉತ್ತಮ ಕತೆಗಳನ್ನು ಕಾಮಿಕ್ಸ್ ರೂಪದಲ್ಲಿ ಹೊರತರಲು ಚಿಂತಿಸಿದ್ದಾರೆ. <br /> <br /> ಈ ಯೋಜನೆಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರೂ ಸಾಥ್ ನೀಡಿದ್ದಾರೆ.<br /> <br /> ಈ ಯೋಜನೆಯ ಕುರಿತು ಮಾತುಕತೆ ನಡೆಸಲು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಗೃಹ ಕಚೇರಿ `ಕೃಷ್ಣಾ~ದಲ್ಲಿ ಮಂಗಳವಾರ ಭೇಟಿ ಮಾಡಿದ ಡಾ. ಕಂಬಾರ, ಕಣವಿ, ಸಿದ್ಧರಾಮಯ್ಯ ಅವರು, ಯೋಜನೆಗೆ ಬೆಂಬಲ ನೀಡುವಂತೆ ಕೋರಿದರು. <br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತ ಮನು ಬಳಿಗಾರ್ ಅವರೂ ನಿಯೋಗದಲ್ಲಿದ್ದರು.<br /> <br /> `ಈ ಯೋಜನೆಯಲ್ಲಿ ಕನ್ನಡದ ಉತ್ತಮ ಕತೆಗಳನ್ನು ತಲಾ 30 ಪುಟಗಳ ಕಾಮಿಕ್ಸ್ ರೂಪದಲ್ಲಿ ತರಲಾಗುವುದು. ಚಿತ್ರ, ಕತೆಗಳ ಮೂಲಕ ಮಕ್ಕಳಿಗೆ ನಾಡಿನ ಸಂಸ್ಕೃತಿಯನ್ನು ತಿಳಿಸುವ ಪ್ರಯತ್ನ ಇದು~ ಎಂದು ಡಾ. ಕಂಬಾರ ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಯೋಜನೆಯ ಕುರಿತು ಆಸಕ್ತಿ ತೋರಿರುವ ಸದಾನಂದ ಗೌಡರು, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಕಾಮಿಕ್ಸ್ ಪುಸ್ತಕಗಳನ್ನು ಸರ್ಕಾರವೇ ಖರೀದಿಸುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>